Homeಮುಖಪುಟಮಾರನ್ ಹೇಳಿಕೆ ಖಂಡನೀಯ, ನಾವು ಒಪ್ಪುವುದಿಲ್ಲ: ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್

ಮಾರನ್ ಹೇಳಿಕೆ ಖಂಡನೀಯ, ನಾವು ಒಪ್ಪುವುದಿಲ್ಲ: ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್

- Advertisement -
- Advertisement -

ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರ ಬಗ್ಗೆ ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿಕೆಯನ್ನು ಖಂಡಿಸಿದ ತೇಜಸ್ವಿ ಯಾದವ್, ಬಿಹಾರದ ಜನರಿಲ್ಲದೆ ಇದ್ದರೆ ಹಲವು ರಾಜ್ಯಗಳ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಳ್ಳುತ್ತವೆ ಎಂದು ಹೇಳಿದರು.

ಸಂಸದ ಮಾರನ್ ಅವರ ವಿವಾದಿತ ಹೇಳಿಕೆಯು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಬಿಜೆಪಿಯು ಉತ್ತರ ಪ್ರದೇಶ ಮತ್ತು ಬಿಹಾರದ ಇಂಡಿಯಾ ಮೈತ್ರಿಕೂಟದ ನಾಯಕರನ್ನು ಈ ವಿಷಯದ ಬಗ್ಗೆ ತಮ್ಮ ತುಟಿ ಹೊಲೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದೆ.

‘ಆ ಪಕ್ಷದ (ಡಿಎಂಕೆ) ಯಾವುದೇ ನಾಯಕರು ಯುಪಿ ಮತ್ತು ಬಿಹಾರದ ಜನರ ಬಗ್ಗೆ ಏನಾದರೂ ಹೇಳಿದ್ದರೆ, ಅದು ಖಂಡನೀಯ, ನಾವು ಅದನ್ನು ಒಪ್ಪುವುದಿಲ್ಲ. ಯುಪಿ ಮತ್ತು ಬಿಹಾರದ ಕಾರ್ಮಿಕರಿಗೆ ದೇಶದಾದ್ಯಂತ ಬೇಡಿಕೆಯಿದೆ. ಅವರು ಬೇರೆಡೆ ಹೋಗುವುದನ್ನು ನಿಲ್ಲಿಸಿದ ನಂತರ ಅವಲಂಬಿತ ರಾಜ್ಯಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ, ಅವರ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಳ್ಳುತ್ತವೆ’ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಒಂದು ನಿರ್ದಿಷ್ಟ ಸಮುದಾಯದ ಜನರು ಮಾತ್ರ ಯಾಕೆ ಚರಂಡಿ ಸ್ವಚ್ಛಗೊಳಿಸುತ್ತಾರೆ ಎಂದು ಅವರು ಹೇಳಿದ್ದರೆ ಅದಕ್ಕೆ ಅರ್ಥ ಇರುತ್ತಿತ್ತು. ಆದರೆ, ಅವರು ಬಿಹಾರ ಮತ್ತು ಉತ್ತರಪ್ರದೇಶದ ಜನರು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಬರುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಖಂಡನೀಯ… ಎಲ್ಲ ಪಕ್ಷಗಳ ನಾಯಕರು ಇಂತಹ ಹೇಳಿಕೆಗಳನ್ನು ನೀಡುವುದನ್ನು ವಿರೋಧಿಸಬೇಕು’ ಎಂದು ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಬಿಹಾರದಿಂದ ತಮಿಳುನಾಡಿಗೆ ಬರುವ ಹಿಂದಿ ಭಾಷಿಗರು ಕಟ್ಟಡ, ರಸ್ತೆಗಳ ನಿರ್ಮಾಣ ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ ಎಂಬ ಇಂಡಿಯಾ ಮೈತ್ರಿಕೂಟದ ಪಕ್ಷವಾದ ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರ ಹೇಳಿಕೆಗೆ ಬಿಹಾರ ಉಪಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಡಿಎಂಕೆ ಸಂಸದರ ಹೇಳಿಕೆಯ ವಿಡಿಯೊ ಕ್ಲಿಪ್ ವೈರಲ್ ಆಗಿದ್ದು, ಇದನ್ನು ಪಾಟ್ನಾ ಸಾಹಿಬ್ನ ಬಿಜೆಪಿ ಲೋಕಸಭಾ ಸಂಸದ, ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹಂಚಿಕೊಂಡಿದ್ದರು. ‘ಡಿಎಂಕೆ ನಾಯಕರು ಬಿಹಾರದ ಜನರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದ್ದರು.

‘ತಮ್ಮ ಇಂಡಿಯಾ ಮೈತ್ರಿಕೂಟದ ಸದಸ್ಯರಾಗಿರುವ ನಿತೀಶ್ ಕುಮಾರ್ ಅವರ ಆಡಳಿತದಲ್ಲಿ ಬಿಹಾರದ ಜನರು ತಮಿಳುನಾಡಿಗೆ ಹೋಗಬೇಕಾಯಿತು’ ಎಂದು ಬಿಜೆಪಿ ಹೇಳಿದ್ದರು.

ಇದನ್ನೂ ಓದಿ; ಹಿಂದಿ ಭಾಷಿಕರು ತಮಿಳುನಾಡಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಾರೆ; ವಿವಾದ ಸೃಷ್ಟಿಸಿದ ದಯಾನಿಧಿ ಮಾರನ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...