Homeಕರ್ನಾಟಕ30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು...

- Advertisement -
- Advertisement -

ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತ್ತೀಚೆಗೆ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು, ಇದು ರಾಜ್ಯದಾದ್ಯಂತ ವ್ಯಾಪಕ ಟೀಕೆಗೆ ಒಳಗಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “30,000 ಮರಾಠ ಸಮುದಾಯದ ಮತದಾರರನ್ನು ಸೆಳೆಯಲು ಈ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರ್ಕಾರಕ್ಕೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ಮಾಡಿದರೆ ಮಿತಿಯೇ ಇರುವುದಿಲ್ಲ – ಸಿದ್ದಲಿಂಗ ಸ್ವಾಮೀಜಿ

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

“ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರು ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ” ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರ್ಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರ್ಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರ್ಕಾರವೇ ವಿದ್ಯಾರ್ಥಿಗಳ ಸೋಂಕು ಪರೀಕ್ಷೆಯನ್ನು ಮಾಡಬೇಕು” ಎಂದು ಶಾಲಾ ಕಾಲೇಜು ಆರಂಭಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಆಕ್ಟ್-1978’ ಚಿತ್ರ: ಸಾಮಾಜಿಕ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ವೈರಲ್‌‌!

ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನೂ ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿ ಮತ್ತು ಜೆಡಿಎಸ್‌ನ ಒಳ‌ಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರೆಸಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಇನ್ನು ರಾಜ್ಯದ ಪ್ರವಾಹದ ಪರಿಸ್ಥಿತಿಯ ಬಗ್ಗೆ ಟ್ವೀಟ್ ಮಾಡಿ, “ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು ರೂ.25,000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವುದು ರೂ.577 ಕೋಟಿ ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರ್ಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ರಾಜ್ಯದ ರೈತರ ಸಮಸ್ಯೆಗಳ ಬಗ್ಗೆಯೂ ಟ್ವೀಟ್ ಮಾಡಿ, “ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರ್ಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...