Homeಕರ್ನಾಟಕ30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು...

- Advertisement -
- Advertisement -

ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತ್ತೀಚೆಗೆ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದು, ಇದು ರಾಜ್ಯದಾದ್ಯಂತ ವ್ಯಾಪಕ ಟೀಕೆಗೆ ಒಳಗಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “30,000 ಮರಾಠ ಸಮುದಾಯದ ಮತದಾರರನ್ನು ಸೆಳೆಯಲು ಈ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ” ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರ್ಕಾರಕ್ಕೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ಮಾಡಿದರೆ ಮಿತಿಯೇ ಇರುವುದಿಲ್ಲ – ಸಿದ್ದಲಿಂಗ ಸ್ವಾಮೀಜಿ

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

“ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರು ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ” ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರ್ಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರ್ಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರ್ಕಾರವೇ ವಿದ್ಯಾರ್ಥಿಗಳ ಸೋಂಕು ಪರೀಕ್ಷೆಯನ್ನು ಮಾಡಬೇಕು” ಎಂದು ಶಾಲಾ ಕಾಲೇಜು ಆರಂಭಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಆಕ್ಟ್-1978’ ಚಿತ್ರ: ಸಾಮಾಜಿಕ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ವೈರಲ್‌‌!

ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನೂ ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿ ಮತ್ತು ಜೆಡಿಎಸ್‌ನ ಒಳ‌ಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರೆಸಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಇನ್ನು ರಾಜ್ಯದ ಪ್ರವಾಹದ ಪರಿಸ್ಥಿತಿಯ ಬಗ್ಗೆ ಟ್ವೀಟ್ ಮಾಡಿ, “ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು ರೂ.25,000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವುದು ರೂ.577 ಕೋಟಿ ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರ್ಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ರಾಜ್ಯದ ರೈತರ ಸಮಸ್ಯೆಗಳ ಬಗ್ಗೆಯೂ ಟ್ವೀಟ್ ಮಾಡಿ, “ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರ್ಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...