Homeಮುಖಪುಟಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

ಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒದಗಿಸಲು ಒತ್ತಾಯಿಸಿ ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಶುಕ್ರವಾರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ.

ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‌, ಕಾರು, ಜೀಪು, ಟೆಂಪೋ ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುದಾಗಿ ಗುರುವಾರ ಜಾರಂಗೆ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತಾರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆಗೆ ಅಡ್ಡಿಯಾಗಲಿದೆ ಎಂದು ಎಚ್ಚರಿಸಿದ್ದರು.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್‌ಘರ್‌ನಲ್ಲಿರುವ ಇಂಟರ್‌ನ್ಯಾಷನಲ್ ಕಾರ್ಪೋರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಪ್ರತಿಭನಾಕಾರರು ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಹೈಕೋರ್ಟ್‌ನ ಆದೇಶ ಪ್ರಕಾರ, ಆಝಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ. ಈ ಜಾಗ 5,000 ರಿಂದ 6,000 ಪ್ರತಿಭಟನಾಕಾರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವಿದೆ. ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ನಿಲ್ಲಲು ಕೂಡ ಸಾಕಷ್ಟು ಸ್ಥಳಾವಕಾಶವಿಲ್ಲ. ಮೈದಾನದ ಇನ್ನುಳಿದ ಜಾಗ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದಾದರ್‌ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿರುವ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಇಲ್ಲ ಎಂದು ನೋಟಿಸ್‌ನಲ್ಲಿ ಸೇರಿಸಿದ್ದಾರೆ.

ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಅಯೋಜಿಸುವ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

ಪೊಲೀಸರ ಸೂಚನೆಯ ಹೊರತಾಗಿಯೂ ಜಾರಂಗೆ ಮುಂಬೈಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಮಸ್ಯೆ ಪರಿಹರಿಸಲು ವೈಯಕ್ತಿಕವಾಗಿ ಚರ್ಚೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬೈಗೆ ಹೋಗದಂತೆ ಮನವೊಲಿಸಲು ಛತ್ರಪತಿ ಸಂಭಾಜಿನಗರದ ವಿಭಾಗೀಯ ಆಯುಕ್ತ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ನೇತೃತ್ವದ ನಿಯೋಗ ಜಾರಂಗೆ ಅವರನ್ನು ಭೇಟಿ ಮಾಡಿತ್ತು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಗಳನ್ನು ತಿಳಿಸಲು ಮತ್ತೊಂದು ನಿಯೋಗ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಲಾಗಿತ್ತು. ನವಿ ಮುಂಬೈ ಪೊಲೀಸ್ ಅಧಿಕಾರಿಗಳು ಕೂಡ ಜಾರಂಗೆ ಅವರನ್ನು ಭೇಟಿಯಾಗಿ ಆಸ್ಪತ್ರೆಯೊಂದು ಮಾರ್ಗದಲ್ಲಿ ಇರುವುದರಿಂದ ಅವರ ಮೆರವಣಿಗೆಯ ಮಾರ್ಗವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಮಾರ್ಗ ಬದಲಾಯಿಸಿ ಹಳೆಯ ಪುಣೆ-ಮುಂಬೈ ಹೆದ್ದಾರಿಯಿಂದ ತೆರಳಲು ಸೂಚಿಸಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...