Homeಮುಖಪುಟಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

ಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒದಗಿಸಲು ಒತ್ತಾಯಿಸಿ ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಶುಕ್ರವಾರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ.

ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‌, ಕಾರು, ಜೀಪು, ಟೆಂಪೋ ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುದಾಗಿ ಗುರುವಾರ ಜಾರಂಗೆ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತಾರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆಗೆ ಅಡ್ಡಿಯಾಗಲಿದೆ ಎಂದು ಎಚ್ಚರಿಸಿದ್ದರು.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್‌ಘರ್‌ನಲ್ಲಿರುವ ಇಂಟರ್‌ನ್ಯಾಷನಲ್ ಕಾರ್ಪೋರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಪ್ರತಿಭನಾಕಾರರು ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಹೈಕೋರ್ಟ್‌ನ ಆದೇಶ ಪ್ರಕಾರ, ಆಝಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ. ಈ ಜಾಗ 5,000 ರಿಂದ 6,000 ಪ್ರತಿಭಟನಾಕಾರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವಿದೆ. ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ನಿಲ್ಲಲು ಕೂಡ ಸಾಕಷ್ಟು ಸ್ಥಳಾವಕಾಶವಿಲ್ಲ. ಮೈದಾನದ ಇನ್ನುಳಿದ ಜಾಗ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದಾದರ್‌ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿರುವ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಇಲ್ಲ ಎಂದು ನೋಟಿಸ್‌ನಲ್ಲಿ ಸೇರಿಸಿದ್ದಾರೆ.

ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಅಯೋಜಿಸುವ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

ಪೊಲೀಸರ ಸೂಚನೆಯ ಹೊರತಾಗಿಯೂ ಜಾರಂಗೆ ಮುಂಬೈಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಮಸ್ಯೆ ಪರಿಹರಿಸಲು ವೈಯಕ್ತಿಕವಾಗಿ ಚರ್ಚೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬೈಗೆ ಹೋಗದಂತೆ ಮನವೊಲಿಸಲು ಛತ್ರಪತಿ ಸಂಭಾಜಿನಗರದ ವಿಭಾಗೀಯ ಆಯುಕ್ತ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ನೇತೃತ್ವದ ನಿಯೋಗ ಜಾರಂಗೆ ಅವರನ್ನು ಭೇಟಿ ಮಾಡಿತ್ತು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಗಳನ್ನು ತಿಳಿಸಲು ಮತ್ತೊಂದು ನಿಯೋಗ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಲಾಗಿತ್ತು. ನವಿ ಮುಂಬೈ ಪೊಲೀಸ್ ಅಧಿಕಾರಿಗಳು ಕೂಡ ಜಾರಂಗೆ ಅವರನ್ನು ಭೇಟಿಯಾಗಿ ಆಸ್ಪತ್ರೆಯೊಂದು ಮಾರ್ಗದಲ್ಲಿ ಇರುವುದರಿಂದ ಅವರ ಮೆರವಣಿಗೆಯ ಮಾರ್ಗವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಮಾರ್ಗ ಬದಲಾಯಿಸಿ ಹಳೆಯ ಪುಣೆ-ಮುಂಬೈ ಹೆದ್ದಾರಿಯಿಂದ ತೆರಳಲು ಸೂಚಿಸಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...