Homeಮುಖಪುಟಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

ಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒದಗಿಸಲು ಒತ್ತಾಯಿಸಿ ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಶುಕ್ರವಾರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ.

ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‌, ಕಾರು, ಜೀಪು, ಟೆಂಪೋ ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುದಾಗಿ ಗುರುವಾರ ಜಾರಂಗೆ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತಾರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆಗೆ ಅಡ್ಡಿಯಾಗಲಿದೆ ಎಂದು ಎಚ್ಚರಿಸಿದ್ದರು.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್‌ಘರ್‌ನಲ್ಲಿರುವ ಇಂಟರ್‌ನ್ಯಾಷನಲ್ ಕಾರ್ಪೋರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಪ್ರತಿಭನಾಕಾರರು ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಹೈಕೋರ್ಟ್‌ನ ಆದೇಶ ಪ್ರಕಾರ, ಆಝಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ. ಈ ಜಾಗ 5,000 ರಿಂದ 6,000 ಪ್ರತಿಭಟನಾಕಾರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವಿದೆ. ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ನಿಲ್ಲಲು ಕೂಡ ಸಾಕಷ್ಟು ಸ್ಥಳಾವಕಾಶವಿಲ್ಲ. ಮೈದಾನದ ಇನ್ನುಳಿದ ಜಾಗ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದಾದರ್‌ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿರುವ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಇಲ್ಲ ಎಂದು ನೋಟಿಸ್‌ನಲ್ಲಿ ಸೇರಿಸಿದ್ದಾರೆ.

ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಅಯೋಜಿಸುವ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

ಪೊಲೀಸರ ಸೂಚನೆಯ ಹೊರತಾಗಿಯೂ ಜಾರಂಗೆ ಮುಂಬೈಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಮಸ್ಯೆ ಪರಿಹರಿಸಲು ವೈಯಕ್ತಿಕವಾಗಿ ಚರ್ಚೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬೈಗೆ ಹೋಗದಂತೆ ಮನವೊಲಿಸಲು ಛತ್ರಪತಿ ಸಂಭಾಜಿನಗರದ ವಿಭಾಗೀಯ ಆಯುಕ್ತ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ನೇತೃತ್ವದ ನಿಯೋಗ ಜಾರಂಗೆ ಅವರನ್ನು ಭೇಟಿ ಮಾಡಿತ್ತು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಗಳನ್ನು ತಿಳಿಸಲು ಮತ್ತೊಂದು ನಿಯೋಗ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಲಾಗಿತ್ತು. ನವಿ ಮುಂಬೈ ಪೊಲೀಸ್ ಅಧಿಕಾರಿಗಳು ಕೂಡ ಜಾರಂಗೆ ಅವರನ್ನು ಭೇಟಿಯಾಗಿ ಆಸ್ಪತ್ರೆಯೊಂದು ಮಾರ್ಗದಲ್ಲಿ ಇರುವುದರಿಂದ ಅವರ ಮೆರವಣಿಗೆಯ ಮಾರ್ಗವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಮಾರ್ಗ ಬದಲಾಯಿಸಿ ಹಳೆಯ ಪುಣೆ-ಮುಂಬೈ ಹೆದ್ದಾರಿಯಿಂದ ತೆರಳಲು ಸೂಚಿಸಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...