Homeಮುಖಪುಟಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

ಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒದಗಿಸಲು ಒತ್ತಾಯಿಸಿ ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಶುಕ್ರವಾರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ.

ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‌, ಕಾರು, ಜೀಪು, ಟೆಂಪೋ ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುದಾಗಿ ಗುರುವಾರ ಜಾರಂಗೆ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತಾರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆಗೆ ಅಡ್ಡಿಯಾಗಲಿದೆ ಎಂದು ಎಚ್ಚರಿಸಿದ್ದರು.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್‌ಘರ್‌ನಲ್ಲಿರುವ ಇಂಟರ್‌ನ್ಯಾಷನಲ್ ಕಾರ್ಪೋರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಪ್ರತಿಭನಾಕಾರರು ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಹೈಕೋರ್ಟ್‌ನ ಆದೇಶ ಪ್ರಕಾರ, ಆಝಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ. ಈ ಜಾಗ 5,000 ರಿಂದ 6,000 ಪ್ರತಿಭಟನಾಕಾರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವಿದೆ. ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ನಿಲ್ಲಲು ಕೂಡ ಸಾಕಷ್ಟು ಸ್ಥಳಾವಕಾಶವಿಲ್ಲ. ಮೈದಾನದ ಇನ್ನುಳಿದ ಜಾಗ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದಾದರ್‌ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿರುವ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಇಲ್ಲ ಎಂದು ನೋಟಿಸ್‌ನಲ್ಲಿ ಸೇರಿಸಿದ್ದಾರೆ.

ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಅಯೋಜಿಸುವ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

ಪೊಲೀಸರ ಸೂಚನೆಯ ಹೊರತಾಗಿಯೂ ಜಾರಂಗೆ ಮುಂಬೈಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಮಸ್ಯೆ ಪರಿಹರಿಸಲು ವೈಯಕ್ತಿಕವಾಗಿ ಚರ್ಚೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬೈಗೆ ಹೋಗದಂತೆ ಮನವೊಲಿಸಲು ಛತ್ರಪತಿ ಸಂಭಾಜಿನಗರದ ವಿಭಾಗೀಯ ಆಯುಕ್ತ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ನೇತೃತ್ವದ ನಿಯೋಗ ಜಾರಂಗೆ ಅವರನ್ನು ಭೇಟಿ ಮಾಡಿತ್ತು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಗಳನ್ನು ತಿಳಿಸಲು ಮತ್ತೊಂದು ನಿಯೋಗ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಲಾಗಿತ್ತು. ನವಿ ಮುಂಬೈ ಪೊಲೀಸ್ ಅಧಿಕಾರಿಗಳು ಕೂಡ ಜಾರಂಗೆ ಅವರನ್ನು ಭೇಟಿಯಾಗಿ ಆಸ್ಪತ್ರೆಯೊಂದು ಮಾರ್ಗದಲ್ಲಿ ಇರುವುದರಿಂದ ಅವರ ಮೆರವಣಿಗೆಯ ಮಾರ್ಗವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಮಾರ್ಗ ಬದಲಾಯಿಸಿ ಹಳೆಯ ಪುಣೆ-ಮುಂಬೈ ಹೆದ್ದಾರಿಯಿಂದ ತೆರಳಲು ಸೂಚಿಸಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...