Homeಮುಖಪುಟಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

ಮುಂಬೈ: ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒದಗಿಸಲು ಒತ್ತಾಯಿಸಿ ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಶುಕ್ರವಾರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ.

ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‌, ಕಾರು, ಜೀಪು, ಟೆಂಪೋ ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುದಾಗಿ ಗುರುವಾರ ಜಾರಂಗೆ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತಾರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆಗೆ ಅಡ್ಡಿಯಾಗಲಿದೆ ಎಂದು ಎಚ್ಚರಿಸಿದ್ದರು.

ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್‌ಘರ್‌ನಲ್ಲಿರುವ ಇಂಟರ್‌ನ್ಯಾಷನಲ್ ಕಾರ್ಪೋರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಪ್ರತಿಭನಾಕಾರರು ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಹೈಕೋರ್ಟ್‌ನ ಆದೇಶ ಪ್ರಕಾರ, ಆಝಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ. ಈ ಜಾಗ 5,000 ರಿಂದ 6,000 ಪ್ರತಿಭಟನಾಕಾರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವಿದೆ. ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ನಿಲ್ಲಲು ಕೂಡ ಸಾಕಷ್ಟು ಸ್ಥಳಾವಕಾಶವಿಲ್ಲ. ಮೈದಾನದ ಇನ್ನುಳಿದ ಜಾಗ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದಾದರ್‌ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿರುವ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಇಲ್ಲ ಎಂದು ನೋಟಿಸ್‌ನಲ್ಲಿ ಸೇರಿಸಿದ್ದಾರೆ.

ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಅಯೋಜಿಸುವ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದ್ದಾರೆ.

ಪೊಲೀಸರ ಸೂಚನೆಯ ಹೊರತಾಗಿಯೂ ಜಾರಂಗೆ ಮುಂಬೈಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಮಸ್ಯೆ ಪರಿಹರಿಸಲು ವೈಯಕ್ತಿಕವಾಗಿ ಚರ್ಚೆಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬೈಗೆ ಹೋಗದಂತೆ ಮನವೊಲಿಸಲು ಛತ್ರಪತಿ ಸಂಭಾಜಿನಗರದ ವಿಭಾಗೀಯ ಆಯುಕ್ತ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳ ನೇತೃತ್ವದ ನಿಯೋಗ ಜಾರಂಗೆ ಅವರನ್ನು ಭೇಟಿ ಮಾಡಿತ್ತು. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಗಳನ್ನು ತಿಳಿಸಲು ಮತ್ತೊಂದು ನಿಯೋಗ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಲಾಗಿತ್ತು. ನವಿ ಮುಂಬೈ ಪೊಲೀಸ್ ಅಧಿಕಾರಿಗಳು ಕೂಡ ಜಾರಂಗೆ ಅವರನ್ನು ಭೇಟಿಯಾಗಿ ಆಸ್ಪತ್ರೆಯೊಂದು ಮಾರ್ಗದಲ್ಲಿ ಇರುವುದರಿಂದ ಅವರ ಮೆರವಣಿಗೆಯ ಮಾರ್ಗವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಮಾರ್ಗ ಬದಲಾಯಿಸಿ ಹಳೆಯ ಪುಣೆ-ಮುಂಬೈ ಹೆದ್ದಾರಿಯಿಂದ ತೆರಳಲು ಸೂಚಿಸಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...