Homeಮುಖಪುಟಮರಾಠ ಮೀಸಲಾತಿ: ಸಿಎಂಗೆ ವರದಿ ಸಲ್ಲಿಸಿದ ಮಹಾರಾಷ್ಟ್ರ ಹಿಂದುಳಿದ ವರ್ಗಗಳ ಆಯೋಗ

ಮರಾಠ ಮೀಸಲಾತಿ: ಸಿಎಂಗೆ ವರದಿ ಸಲ್ಲಿಸಿದ ಮಹಾರಾಷ್ಟ್ರ ಹಿಂದುಳಿದ ವರ್ಗಗಳ ಆಯೋಗ

- Advertisement -
- Advertisement -

ಮಹಾರಾಷ್ಟ್ರ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಮರಾಠಾ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ತನ್ನ ವರದಿಯನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಶುಕ್ರವಾರ ಸಲ್ಲಿಸಿದೆ. ಆಯೋಗದ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಸುನಿಲ್ ಶುಕ್ರೆ ಅವರು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ವರದಿಯನ್ನು ಸಲ್ಲಿಸಿದರು.

ಫೆಬ್ರವರಿ 20 ರಂದು ಕರೆದಿರುವ ವಿಶೇಷ ವಿಧಾನಸಭೆ ಅಧಿವೇಶನ ಹಾಗೂ ಸಂಪುಟ ಸಭೆಯಲ್ಲಿ ವರದಿ ಮಂಡಿಸಲಾಗುವುದು ಎನ್ನಲಾಗಿದೆ.

ಸಮೀಕ್ಷಾ ವರದಿ ಸ್ವೀಕರಿಸಿದ ಸಿಎಂ ಶಿಂಧೆ, ‘ಸಮೀಕ್ಷೆ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿ, ಅದರ ಆಧಾರದ ಮೇಲೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಇದೇ ವಿಷಯವಾಗಿ ಫೆ.20ಕ್ಕೆ ವಿಶೇಷ ವಿಧಾನಸಭೆ ಅಧಿವೇಶನವನ್ನು ಈಗಾಗಲೇ ಘೋಷಿಸಲಾಗಿದೆ’ ಎಂದರು.

‘ಈ ಸಮೀಕ್ಷೆ ಕಾರ್ಯವು ಪೂರ್ಣಗೊಂಡಿರುವ ರೀತಿಯನ್ನು ನೋಡಿದರೆ, ನಮ್ಮ ಸರ್ಕಾರವು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಮೀಸಲಾತಿಯನ್ನು ಸಂವಿಧಾನ ಮತ್ತು ಕಾನೂನಿನ ಪರೀಕ್ಷೆಯನ್ನು ಎದುರಿಸಲು ಸಾಧ್ಯವಾಗುತ್ತದೆ. ಒಬಿಸಿ ಮೀಸಲಾತಿಯನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿದೆ. ಬೇರೆ ಯಾವುದೇ ಸಮುದಾಯಕ್ಕೆ ಯಾವುದೇ ಹಾನಿಯಾಗದಂತೆ ಮರಾಠ ಮೀಸಲಾತಿ ನೀಡಬಹುದು’ ಎಂದು ಹೇಳಿದ್ದಾರೆ.

‘ಮರಾಠ (ಸಮುದಾಯ)ಕ್ಕೆ ಶಾಶ್ವತ ಮೀಸಲಾತಿ ಕಲ್ಪಿಸುವ ವಿಶ್ವಾಸ ನಮಗಿದೆ’ ಎಂದು ಸಿಎಂ ಶಿಂಧೆ ಹೇಳಿದ್ದಾರೆ.
ಕೋಟಾ ಕಾರ್ಯಕರ್ತ ಮನೋಜ್ ಜಾರ್ನಾಗೆ ಉಪವಾಸ ಕೈಬಿಡುವಂತೆ ಸಿಎಂ ಏಕನಾಥ್ ಶಿಂಧೆ ಒತ್ತಾಯಿಸಿದ್ದಾರೆ.

‘ಮರಾಠಾ ಮೀಸಲಾತಿ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಂಪೂರ್ಣ ಸ್ಪಷ್ಟನೆ ನೀಡಿತ್ತು. ಶುಕ್ರೆ ಸಮಿತಿ ವರದಿ ಆಧರಿಸಿ ಮರಾಠಾ ಮೀಸಲಾತಿಯನ್ನು ಮುಂದಕ್ಕೆ ತೆಗೆದುಕೊಳ್ಳುತ್ತೇವೆ. ಕುಂಬಿ ದಾಖಲಾತಿ ವಿಚಾರದಲ್ಲಿ ಮೀಸಲಾತಿ ವಿಚಾರವನ್ನು ಈಗಾಗಲೇ ಮುಂದಿಟ್ಟುಕೊಂಡು ಈಗಾಗಲೇ ಕೆಲಸ ನಡೆಯುತ್ತಿದೆ’ ಎಂದರು.

‘ಮನೋಜ್ ಜಾರ್ನಾ ಉಪವಾಸ ಮುಂದುವರಿಸುವ ಅಗತ್ಯವಿಲ್ಲ. ಅವರು ತಮ್ಮ ಉಪವಾಸವನ್ನು ಹಿಂಪಡೆಯುವಂತೆ ನಾವು ವಿನಂತಿಸುತ್ತೇವೆ; ಬೇಡಿಕೆಗಳನ್ನು ಈಡೇರಿಸಲು ಸರ್ಕಾರವು ತನ್ನ ಕೆಲಸವನ್ನು ಸಕಾರಾತ್ಮಕವಾಗಿ ಮಾಡುತ್ತಿದೆ’ ಎಂದು ಸಿಎಂ ಶಿಂಧೆ ಹೇಳಿದರು.

ಮರಾಠ ಮೀಸಲಾತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಬೇಕೆಂದು ಒತ್ತಾಯಿಸಿ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜರಂಗೆ ಪಾಟೀಲ್ ಅವರು ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಮತ್ತೊಂದು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ ನಂತರ ಈ ಬೆಳವಣಿಗೆ ನಡೆಯುತ್ತಿದೆ.

ಒಂದು ವರ್ಷದೊಳಗೆ ನಾಲ್ಕನೇ ಬಾರಿಗೆ, ಫೆಬ್ರವರಿ 10 ರಂದು ಪಾಟೀಲ್ ತಮ್ಮ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಮೀಸಲಾತಿ ಪಡೆಯಲು ಮರಾಠರನ್ನು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿಸಬೇಕೆಂದು ಒತ್ತಾಯಿಸಿದರು. ಕುಂಬಿ ಮರಾಠರ ‘ರಕ್ತ ಸಂಬಂಧಿಗಳ’ ಕರಡು ಅಧಿಸೂಚನೆಯನ್ನು ಕಾನೂನಾಗಿ ಪರಿವರ್ತಿಸಲು ಅವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ; ರಾಜ್ಯಪಾಲರ ಬಾಲಿಶ ವರ್ತನೆಗೆ ನಾವು ಹೆದರುವುದಿಲ್ಲ: ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...