Homeಮುಖಪುಟಒಬಿಸಿ ಪಾಲಿನ ತಟ್ಟೆಯಲ್ಲಿ ಮರಾಠರು ತಿನ್ನಲು ಸಾಧ್ಯವಿಲ್ಲ: ಪ್ರಕಾಶ್ ಅಂಬೇಡ್ಕರ್

ಒಬಿಸಿ ಪಾಲಿನ ತಟ್ಟೆಯಲ್ಲಿ ಮರಾಠರು ತಿನ್ನಲು ಸಾಧ್ಯವಿಲ್ಲ: ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಮರಾಠರ ಕೋಟಾಗಳನ್ನು ಪ್ರತ್ಯೇಕವಾಗಿ ಇರಿಸಿದರೆ ಮಾತ್ರ ಮಹಾರಾಷ್ಟ್ರದಲ್ಲಿ ಪ್ರಗತಿ ಸಾಧ್ಯ. ಒಬಿಸಿ ಮೀಸಲಾತಿಯ ಪಾಲನ್ನು ಮರಾಠರು ತಿನ್ನಲು ಸಾಧ್ಯವಿಲ್ಲ ಎಂಬುದು ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಪಾಟೀಲ್ ಅವರಿಗೆ ಹೇಳಬೇಕು ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಭಾನುವಾರ ಹೇಳಿದ್ದಾರೆ.

ಮರಾಠರಿಗೆ ಒಬಿಸಿ ಕೋಟಾ ನೀಡಬೇಕು ಎಂದು ಬೇಡಿಕೆ ಇಟ್ಟಿರುವ ಜಾರಂಗೆ ಪಾಟೀಲ್ ಅವರ ಬೇಡಿಕೆಗಳನ್ನು ಎದುರಿಸಲು ಒಬಿಸಿ ಸಂಘಟನೆಗಳು ನಾಂದೇಡ್ ಜಿಲ್ಲೆಯಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

‘ರಾಜ್ಯ ಸರ್ಕಾರಕ್ಕೆ ಹೊಸ ಜಾತಿಯನ್ನು ರಚಿಸಲು ಯಾವುದೇ ಅಧಿಕಾರವಿಲ್ಲ. ಆದರೆ, ಅಸ್ತಿತ್ವದಲ್ಲಿರುವ ಜಾತಿಯು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಮಾತ್ರ ಸಾಧ್ಯ ಎಂದು ಹೇಳಿದರು.

‘ಈಗಿನ ಆಡಳಿತ ವರ್ಗವನ್ನು ಅಲುಗಾಡಿಸಲು ನೀವು ಹೋರಾಟ [ಮರಾಠಾ ಆಂದೋಲನ] ಮಾಡುತ್ತಿದ್ದರೆ ಅದು ಒಳ್ಳೆಯದು ಎಂದು ನಾನು ಜಾರಂಗೆ ಪಾಟೀಲರಿಗೆ ವಿವರಿಸಿದೆ. ಈಗಿನ ಕೊಳೆತ ನಾಯಕತ್ವಕ್ಕೆ ದಲಿತರು, ಒಬಿಸಿಗಳು ಅಥವಾ ಮರಾಠಾ ಸಮುದಾಯದ ಬಡ ವರ್ಗಗಳಿಗೆ ನ್ಯಾಯ ಸಿಗುವುದನ್ನು ನೋಡುವ ಆಸಕ್ತಿಯೇ ಇಲ್ಲ. ಜಾರಂಗೆ ಪಾಟೀಲ್ ನೇತೃತ್ವದಲ್ಲಿ ಹೊಸ [ಮರಾಠ ಸಮುದಾಯ] ನಾಯಕತ್ವವನ್ನು ನಾನು ಸ್ವಾಗತಿಸುತ್ತೇನೆ. ಅವರು ಒಬಿಸಿ ಮೀಸಲಾತಿ ಫಲಕದ ಬಳಿ ಬರಬಾರದು ಎಂದು ಅವರು ತಿಳಿದಿರಬೇಕು’ ಎಂದು ಅಂಬೇಡ್ಕರ್ ಹೇಳಿದರು.

ಜಾರಂಗೆ ಪಾಟೀಲ್ ಮತ್ತು ಮರಾಠರು ಮೀಸಲಾತಿಗಾಗಿ ಬೇರೆ ತಟ್ಟೆ ಬಯಸಿದರೆ, ಒಬಿಸಿಗಳು ಖಂಡಿತವಾಗಿಯೂ ಸಮುದಾಯಕ್ಕೆ ಸಹಾಯ ಮಾಡುತ್ತಾರೆ. ಆಗ ಎರಡೂ ಕೋಟಾಗಳು ಪ್ರತ್ಯೇಕವಾಗಿರುತ್ತವೆ. ಆದರೆ, ನಮ್ಮ ತಟ್ಟೆಯಿಂದ ತಿನ್ನಬೇಡಿ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳೆರಡೂ ಮೀಸಲಾತಿಯನ್ನು ಹೊಂದಿವೆ. ಆದರೆ ಅವು ಪ್ರತ್ಯೇಕ ಕೋಟಾಗಳಾಗಿವೆ. ಮರಾಠ ಮತ್ತು ಒಬಿಸಿ ಕೋಟಾಗಳು ಪ್ರತ್ಯೇಕವಾಗಿ ಉಳಿದರೆ ಮಾತ್ರ ಮಹಾರಾಷ್ಟ್ರದಲ್ಲಿ ಬದಲಾವಣೆ ಸಾಧ್ಯ’ ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಕೇಸರಿ ಪಕ್ಷವು ದೇಶದ ಸಂವಿಧಾನವನ್ನು ಬದಲಾಯಿಸಲು ಸಂಚು ನಡೆಸುತ್ತಿದೆ. ಈ ಸಂವಿಧಾನವನ್ನು ಉಳಿಸಿದರೆ ಮಾತ್ರ, ನಮ್ಮ ಮೀಸಲಾತಿಯು ಉಳಿಯುತ್ತದೆ’ ಎಂದು ಅಂಬೇಡ್ಕರ್ ಹೇಳಿದರು.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂವಿಧಾನದ ಬಗ್ಗೆ ಬಹಿರಂಗ ಚರ್ಚೆಗೆ ಎಂದಿಗೂ ಮುಂದಾಗುವುದಿಲ್ಲ. ನಮ್ಮ ಸಂವಿಧಾನದಲ್ಲಿ ಯಾವುದು ಕೆಟ್ಟದು ಹೇಳಿ ಎಂದು ನಾನು ಅವರನ್ನು ಕೇಳಲು ಹೊರಟಿದ್ದೆ. ಆದರೆ, ಅವರು ಎಂದಿಗೂ ಮುಖಾಮುಖಿ ಚರ್ಚೆಗೆ ಬರುವುದಿಲ್ಲ’ ಎಂದು ಅಂಬೇಡ್ಕರ್ ಆರೋಪಿಸಿದರು.

ಇದನ್ನೂ ಓದಿ; ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...