Homeಮುಖಪುಟಒಬಿಸಿ ಪಾಲಿನ ತಟ್ಟೆಯಲ್ಲಿ ಮರಾಠರು ತಿನ್ನಲು ಸಾಧ್ಯವಿಲ್ಲ: ಪ್ರಕಾಶ್ ಅಂಬೇಡ್ಕರ್

ಒಬಿಸಿ ಪಾಲಿನ ತಟ್ಟೆಯಲ್ಲಿ ಮರಾಠರು ತಿನ್ನಲು ಸಾಧ್ಯವಿಲ್ಲ: ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಮರಾಠರ ಕೋಟಾಗಳನ್ನು ಪ್ರತ್ಯೇಕವಾಗಿ ಇರಿಸಿದರೆ ಮಾತ್ರ ಮಹಾರಾಷ್ಟ್ರದಲ್ಲಿ ಪ್ರಗತಿ ಸಾಧ್ಯ. ಒಬಿಸಿ ಮೀಸಲಾತಿಯ ಪಾಲನ್ನು ಮರಾಠರು ತಿನ್ನಲು ಸಾಧ್ಯವಿಲ್ಲ ಎಂಬುದು ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಪಾಟೀಲ್ ಅವರಿಗೆ ಹೇಳಬೇಕು ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಭಾನುವಾರ ಹೇಳಿದ್ದಾರೆ.

ಮರಾಠರಿಗೆ ಒಬಿಸಿ ಕೋಟಾ ನೀಡಬೇಕು ಎಂದು ಬೇಡಿಕೆ ಇಟ್ಟಿರುವ ಜಾರಂಗೆ ಪಾಟೀಲ್ ಅವರ ಬೇಡಿಕೆಗಳನ್ನು ಎದುರಿಸಲು ಒಬಿಸಿ ಸಂಘಟನೆಗಳು ನಾಂದೇಡ್ ಜಿಲ್ಲೆಯಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

‘ರಾಜ್ಯ ಸರ್ಕಾರಕ್ಕೆ ಹೊಸ ಜಾತಿಯನ್ನು ರಚಿಸಲು ಯಾವುದೇ ಅಧಿಕಾರವಿಲ್ಲ. ಆದರೆ, ಅಸ್ತಿತ್ವದಲ್ಲಿರುವ ಜಾತಿಯು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಮಾತ್ರ ಸಾಧ್ಯ ಎಂದು ಹೇಳಿದರು.

‘ಈಗಿನ ಆಡಳಿತ ವರ್ಗವನ್ನು ಅಲುಗಾಡಿಸಲು ನೀವು ಹೋರಾಟ [ಮರಾಠಾ ಆಂದೋಲನ] ಮಾಡುತ್ತಿದ್ದರೆ ಅದು ಒಳ್ಳೆಯದು ಎಂದು ನಾನು ಜಾರಂಗೆ ಪಾಟೀಲರಿಗೆ ವಿವರಿಸಿದೆ. ಈಗಿನ ಕೊಳೆತ ನಾಯಕತ್ವಕ್ಕೆ ದಲಿತರು, ಒಬಿಸಿಗಳು ಅಥವಾ ಮರಾಠಾ ಸಮುದಾಯದ ಬಡ ವರ್ಗಗಳಿಗೆ ನ್ಯಾಯ ಸಿಗುವುದನ್ನು ನೋಡುವ ಆಸಕ್ತಿಯೇ ಇಲ್ಲ. ಜಾರಂಗೆ ಪಾಟೀಲ್ ನೇತೃತ್ವದಲ್ಲಿ ಹೊಸ [ಮರಾಠ ಸಮುದಾಯ] ನಾಯಕತ್ವವನ್ನು ನಾನು ಸ್ವಾಗತಿಸುತ್ತೇನೆ. ಅವರು ಒಬಿಸಿ ಮೀಸಲಾತಿ ಫಲಕದ ಬಳಿ ಬರಬಾರದು ಎಂದು ಅವರು ತಿಳಿದಿರಬೇಕು’ ಎಂದು ಅಂಬೇಡ್ಕರ್ ಹೇಳಿದರು.

ಜಾರಂಗೆ ಪಾಟೀಲ್ ಮತ್ತು ಮರಾಠರು ಮೀಸಲಾತಿಗಾಗಿ ಬೇರೆ ತಟ್ಟೆ ಬಯಸಿದರೆ, ಒಬಿಸಿಗಳು ಖಂಡಿತವಾಗಿಯೂ ಸಮುದಾಯಕ್ಕೆ ಸಹಾಯ ಮಾಡುತ್ತಾರೆ. ಆಗ ಎರಡೂ ಕೋಟಾಗಳು ಪ್ರತ್ಯೇಕವಾಗಿರುತ್ತವೆ. ಆದರೆ, ನಮ್ಮ ತಟ್ಟೆಯಿಂದ ತಿನ್ನಬೇಡಿ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳೆರಡೂ ಮೀಸಲಾತಿಯನ್ನು ಹೊಂದಿವೆ. ಆದರೆ ಅವು ಪ್ರತ್ಯೇಕ ಕೋಟಾಗಳಾಗಿವೆ. ಮರಾಠ ಮತ್ತು ಒಬಿಸಿ ಕೋಟಾಗಳು ಪ್ರತ್ಯೇಕವಾಗಿ ಉಳಿದರೆ ಮಾತ್ರ ಮಹಾರಾಷ್ಟ್ರದಲ್ಲಿ ಬದಲಾವಣೆ ಸಾಧ್ಯ’ ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಕೇಸರಿ ಪಕ್ಷವು ದೇಶದ ಸಂವಿಧಾನವನ್ನು ಬದಲಾಯಿಸಲು ಸಂಚು ನಡೆಸುತ್ತಿದೆ. ಈ ಸಂವಿಧಾನವನ್ನು ಉಳಿಸಿದರೆ ಮಾತ್ರ, ನಮ್ಮ ಮೀಸಲಾತಿಯು ಉಳಿಯುತ್ತದೆ’ ಎಂದು ಅಂಬೇಡ್ಕರ್ ಹೇಳಿದರು.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂವಿಧಾನದ ಬಗ್ಗೆ ಬಹಿರಂಗ ಚರ್ಚೆಗೆ ಎಂದಿಗೂ ಮುಂದಾಗುವುದಿಲ್ಲ. ನಮ್ಮ ಸಂವಿಧಾನದಲ್ಲಿ ಯಾವುದು ಕೆಟ್ಟದು ಹೇಳಿ ಎಂದು ನಾನು ಅವರನ್ನು ಕೇಳಲು ಹೊರಟಿದ್ದೆ. ಆದರೆ, ಅವರು ಎಂದಿಗೂ ಮುಖಾಮುಖಿ ಚರ್ಚೆಗೆ ಬರುವುದಿಲ್ಲ’ ಎಂದು ಅಂಬೇಡ್ಕರ್ ಆರೋಪಿಸಿದರು.

ಇದನ್ನೂ ಓದಿ; ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...