Homeಮುಖಪುಟಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

ಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

- Advertisement -
- Advertisement -

ಮಹಾರಾಷ್ಟ್ರ ರಾಜ್ಯದ ಹಿಂದುಳಿದ ವರ್ಗ ಆಯೋಗವು (MSBCC) ಮಹತ್ವದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸಾರ್ವಜನಿಕ ಸೇವೆಗಳ ಎಲ್ಲಾ ಕ್ಷೇತ್ರಗಳಲ್ಲಿ ಮರಾಠರ ಅಸಮರ್ಪಕ ಪ್ರಾತಿನಿಧ್ಯವನ್ನು ಎತ್ತಿ ತೋರಿಸಿದೆ ಮತ್ತು ಸಮುದಾಯವು ಹಿಂದುಳಿದಿರುವ ಕಾರಣದಿಂದ ಮುಖ್ಯವಾಹಿನಿಯಿಂದ ಸಮುದಾಯದ ಜನರು ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ. ಕಳೆದ ಆರು ವರ್ಷಗಳಲ್ಲಿ ಹೆಣ್ಣು ಮಕ್ಕಳ ವಿವಾಹಗಳ ಏರಿಕೆ ಆತಂಕಕಾರಿಯಾಗಿದೆ ಎಂದು ತಿಳಿಸಿದೆ.

ಆಯೋಗದ ಈ ವರದಿಯು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗ (SEBC) ವರ್ಗದ ಅಡಿಯಲ್ಲಿ ಮರಾಠರಿಗೆ ನೀಡಲಾದ 10% ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ರಾಜ್ಯ ಸಾಮಾನ್ಯ ಆಡಳಿತ ಇಲಾಖೆ (GAD) ಸಲ್ಲಿಸಿದ ಅಫಿಡವಿಟ್‌ನ ಒಂದು ಭಾಗವಾಗಿದೆ.

ನಿವೃತ್ತ ನ್ಯಾಯಮೂರ್ತಿ ಸುನಿಲ್ ಬಿ. ಶುಕ್ರೆ ನೇತೃತ್ವದ ಆಯೋಗವು ಮರಾಠರು ತಮ್ಮ ಹಿಂದುಳಿದಿರುವಿಕೆಯಿಂದಾಗಿ ಮುಖ್ಯವಾಹಿನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ.

2018ರಲ್ಲಿ, ಹಿಂದಿನ MSBCC ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಗಾಯಕ್ವಾಡ್ ಮತ್ತು ಅವರ ವರದಿಯು 50% ಕ್ಕಿಂತ ಹೆಚ್ಚು ಮರಾಠ ಜನಸಂಖ್ಯೆಯನ್ನು ಹೊಂದಿರುವ 355 ತಾಲೂಕುಗಳ ತಲಾ ಎರಡು ಗ್ರಾಮಗಳಿಂದ 43,629 ಕುಟುಂಬಗಳ ಸಮೀಕ್ಷೆಯನ್ನು ಆಧರಿಸಿದೆ. ಮತ್ತೊಂದೆಡೆ, ಶುಕ್ರೆ ಆಯೋಗವು ರಾಜ್ಯದಾದ್ಯಂತ 15 ಮಿಲಿಯನ್ (1,58,20,264) ಕುಟುಂಬಗಳನ್ನು ಸಮೀಕ್ಷೆ ಮಾಡಿದೆ ಮತ್ತು ಮರಾಠರು ರಾಜ್ಯದ ಜನಸಂಖ್ಯೆಯ 28%ದಷ್ಟಿದ್ದಾರೆ ಎಂದು ಕಂಡುಹಿಡಿದಿದೆ.

2024ರ ವರದಿಯ ಪ್ರಕಾರ, ಸರ್ಕಾರಿ ಸೇವೆಗಳಲ್ಲಿ ಮರಾಠರ ಒಟ್ಟು ಪ್ರಾತಿನಿಧ್ಯವು 2018ರಲ್ಲಿ 14.63% ದಷ್ಟಿತ್ತು. ಇದು 2024ರಲ್ಲಿ 9%ಕ್ಕೆ ಇಳಿದಿದೆ. 2024ರ ಆಯೋಗದ ವರದಿಯು, ಮರಾಠರ ಪ್ರಸ್ತುತ ಸ್ಥಿತಿಗೆ ತೀವ್ರ ಬಡತನ, ಕೃಷಿ ಆದಾಯದಲ್ಲಿನ ಕುಸಿತ ಮತ್ತು ಭೂ ಹಿಡುವಳಿಗಳ ವಿಭಜನೆಯ ಕಾರಣಗಳನ್ನು ಸೂಚಿಸಿದೆ.

ಸಮುದಾಯದಲ್ಲಿನ ಬಿಕ್ಕಟ್ಟು ಆತ್ಮಹತ್ಯೆಯಲ್ಲಿ ಮರಾಠರ ಪಾಲು ಕೂಡ 94.11%ಕ್ಕೆ ಏರಿದೆ ಎಂದು ಆಯೋಗದ ವರದಿ ಹೇಳಿದೆ. 2024ರ ವರದಿಯು ಸಮುದಾಯದಲ್ಲಿ ಹೆಚ್ಚುತ್ತಿರುವ ಭೂರಹಿತತೆಯನ್ನು ಸೂಚಿಸಿದೆ. 2018ರಲ್ಲಿ 8%ಕ್ಕೆ ಹೋಲಿಸಿದರೆ 2024ರಲ್ಲಿ ಮರಾಠರು 31.17% ಭೂರಹಿತರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

43.76% ಮರಾಠ ಮಹಿಳೆಯರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. 2018ರ ವರದಿಯು ದೈಹಿಕ ದುಡಿಮೆಯಲ್ಲಿ 53% ಜನರು ತೊಡಗಿರುವುದು ಕಂಡು ಬಂದಿತ್ತು. 2024ರ ವರದಿಯು 44.98%ರಷ್ಟು ಅಂದರೆ ಕೊಂಚ ಕಡಿಮೆಯಾಗಿರುವುದನ್ನು ಎತ್ತಿ ತೋರಿಸಿದೆ.

2024ರಲ್ಲಿ ಕಚ್ಚಾ ಮನೆಗಳಲ್ಲಿ ಸಮುದಾಯದ 81.81%ರಷ್ಟು ಜನರು ವಾಸಿಸುತ್ತಿದ್ದು, ಈ ಸ್ಥಿರವಾದ ಏರಿಕೆಯು ಹದಗೆಡುತ್ತಿರುವ ಜೀವನ ಪರಿಸ್ಥಿತಿಗಳನ್ನು ಸೂಚಿಸುತ್ತದೆ ಎಂದು ವರದಿಯು ಗಮನಿಸಿದೆ.

ಹೆಣ್ಣು ಮಕ್ಕಳ ವಿವಾಹವು ಸಮುದಾಯದಲ್ಲಿ ಹೆಚ್ಚಳವಾಗಿರುವುದನ್ನು ಗಮನಿಸಬಹುದಾಗಿದೆ. ಹೆಣ್ಣು ಮಕ್ಕಳ ವಿವಾಹ 2018ರಲ್ಲಿ 0.32%ರಷ್ಟಿದ್ದು, 2024ರಲ್ಲಿ 13.7%ಕ್ಕೆ ಏರಿಕೆಯಾಗಿದೆ. 2024ರಲ್ಲಿ 94.32% ಮರಾಠರು ಜಾತಿ-ಸಂಬಂಧಿತ ಕಿರುಕುಳವನ್ನು ಎದುರಿಸಿದ್ದಾರೆ ಎಂಬುವುದನ್ನು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...