Homeಮುಖಪುಟಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

ಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

- Advertisement -
- Advertisement -

ಮಹಾರಾಷ್ಟ್ರ ರಾಜ್ಯದ ಹಿಂದುಳಿದ ವರ್ಗ ಆಯೋಗವು (MSBCC) ಮಹತ್ವದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸಾರ್ವಜನಿಕ ಸೇವೆಗಳ ಎಲ್ಲಾ ಕ್ಷೇತ್ರಗಳಲ್ಲಿ ಮರಾಠರ ಅಸಮರ್ಪಕ ಪ್ರಾತಿನಿಧ್ಯವನ್ನು ಎತ್ತಿ ತೋರಿಸಿದೆ ಮತ್ತು ಸಮುದಾಯವು ಹಿಂದುಳಿದಿರುವ ಕಾರಣದಿಂದ ಮುಖ್ಯವಾಹಿನಿಯಿಂದ ಸಮುದಾಯದ ಜನರು ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ. ಕಳೆದ ಆರು ವರ್ಷಗಳಲ್ಲಿ ಹೆಣ್ಣು ಮಕ್ಕಳ ವಿವಾಹಗಳ ಏರಿಕೆ ಆತಂಕಕಾರಿಯಾಗಿದೆ ಎಂದು ತಿಳಿಸಿದೆ.

ಆಯೋಗದ ಈ ವರದಿಯು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗ (SEBC) ವರ್ಗದ ಅಡಿಯಲ್ಲಿ ಮರಾಠರಿಗೆ ನೀಡಲಾದ 10% ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ರಾಜ್ಯ ಸಾಮಾನ್ಯ ಆಡಳಿತ ಇಲಾಖೆ (GAD) ಸಲ್ಲಿಸಿದ ಅಫಿಡವಿಟ್‌ನ ಒಂದು ಭಾಗವಾಗಿದೆ.

ನಿವೃತ್ತ ನ್ಯಾಯಮೂರ್ತಿ ಸುನಿಲ್ ಬಿ. ಶುಕ್ರೆ ನೇತೃತ್ವದ ಆಯೋಗವು ಮರಾಠರು ತಮ್ಮ ಹಿಂದುಳಿದಿರುವಿಕೆಯಿಂದಾಗಿ ಮುಖ್ಯವಾಹಿನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ.

2018ರಲ್ಲಿ, ಹಿಂದಿನ MSBCC ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಗಾಯಕ್ವಾಡ್ ಮತ್ತು ಅವರ ವರದಿಯು 50% ಕ್ಕಿಂತ ಹೆಚ್ಚು ಮರಾಠ ಜನಸಂಖ್ಯೆಯನ್ನು ಹೊಂದಿರುವ 355 ತಾಲೂಕುಗಳ ತಲಾ ಎರಡು ಗ್ರಾಮಗಳಿಂದ 43,629 ಕುಟುಂಬಗಳ ಸಮೀಕ್ಷೆಯನ್ನು ಆಧರಿಸಿದೆ. ಮತ್ತೊಂದೆಡೆ, ಶುಕ್ರೆ ಆಯೋಗವು ರಾಜ್ಯದಾದ್ಯಂತ 15 ಮಿಲಿಯನ್ (1,58,20,264) ಕುಟುಂಬಗಳನ್ನು ಸಮೀಕ್ಷೆ ಮಾಡಿದೆ ಮತ್ತು ಮರಾಠರು ರಾಜ್ಯದ ಜನಸಂಖ್ಯೆಯ 28%ದಷ್ಟಿದ್ದಾರೆ ಎಂದು ಕಂಡುಹಿಡಿದಿದೆ.

2024ರ ವರದಿಯ ಪ್ರಕಾರ, ಸರ್ಕಾರಿ ಸೇವೆಗಳಲ್ಲಿ ಮರಾಠರ ಒಟ್ಟು ಪ್ರಾತಿನಿಧ್ಯವು 2018ರಲ್ಲಿ 14.63% ದಷ್ಟಿತ್ತು. ಇದು 2024ರಲ್ಲಿ 9%ಕ್ಕೆ ಇಳಿದಿದೆ. 2024ರ ಆಯೋಗದ ವರದಿಯು, ಮರಾಠರ ಪ್ರಸ್ತುತ ಸ್ಥಿತಿಗೆ ತೀವ್ರ ಬಡತನ, ಕೃಷಿ ಆದಾಯದಲ್ಲಿನ ಕುಸಿತ ಮತ್ತು ಭೂ ಹಿಡುವಳಿಗಳ ವಿಭಜನೆಯ ಕಾರಣಗಳನ್ನು ಸೂಚಿಸಿದೆ.

ಸಮುದಾಯದಲ್ಲಿನ ಬಿಕ್ಕಟ್ಟು ಆತ್ಮಹತ್ಯೆಯಲ್ಲಿ ಮರಾಠರ ಪಾಲು ಕೂಡ 94.11%ಕ್ಕೆ ಏರಿದೆ ಎಂದು ಆಯೋಗದ ವರದಿ ಹೇಳಿದೆ. 2024ರ ವರದಿಯು ಸಮುದಾಯದಲ್ಲಿ ಹೆಚ್ಚುತ್ತಿರುವ ಭೂರಹಿತತೆಯನ್ನು ಸೂಚಿಸಿದೆ. 2018ರಲ್ಲಿ 8%ಕ್ಕೆ ಹೋಲಿಸಿದರೆ 2024ರಲ್ಲಿ ಮರಾಠರು 31.17% ಭೂರಹಿತರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

43.76% ಮರಾಠ ಮಹಿಳೆಯರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. 2018ರ ವರದಿಯು ದೈಹಿಕ ದುಡಿಮೆಯಲ್ಲಿ 53% ಜನರು ತೊಡಗಿರುವುದು ಕಂಡು ಬಂದಿತ್ತು. 2024ರ ವರದಿಯು 44.98%ರಷ್ಟು ಅಂದರೆ ಕೊಂಚ ಕಡಿಮೆಯಾಗಿರುವುದನ್ನು ಎತ್ತಿ ತೋರಿಸಿದೆ.

2024ರಲ್ಲಿ ಕಚ್ಚಾ ಮನೆಗಳಲ್ಲಿ ಸಮುದಾಯದ 81.81%ರಷ್ಟು ಜನರು ವಾಸಿಸುತ್ತಿದ್ದು, ಈ ಸ್ಥಿರವಾದ ಏರಿಕೆಯು ಹದಗೆಡುತ್ತಿರುವ ಜೀವನ ಪರಿಸ್ಥಿತಿಗಳನ್ನು ಸೂಚಿಸುತ್ತದೆ ಎಂದು ವರದಿಯು ಗಮನಿಸಿದೆ.

ಹೆಣ್ಣು ಮಕ್ಕಳ ವಿವಾಹವು ಸಮುದಾಯದಲ್ಲಿ ಹೆಚ್ಚಳವಾಗಿರುವುದನ್ನು ಗಮನಿಸಬಹುದಾಗಿದೆ. ಹೆಣ್ಣು ಮಕ್ಕಳ ವಿವಾಹ 2018ರಲ್ಲಿ 0.32%ರಷ್ಟಿದ್ದು, 2024ರಲ್ಲಿ 13.7%ಕ್ಕೆ ಏರಿಕೆಯಾಗಿದೆ. 2024ರಲ್ಲಿ 94.32% ಮರಾಠರು ಜಾತಿ-ಸಂಬಂಧಿತ ಕಿರುಕುಳವನ್ನು ಎದುರಿಸಿದ್ದಾರೆ ಎಂಬುವುದನ್ನು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...