Homeಮುಖಪುಟಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

ಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

- Advertisement -
- Advertisement -

ಮಹಾರಾಷ್ಟ್ರ ರಾಜ್ಯದ ಹಿಂದುಳಿದ ವರ್ಗ ಆಯೋಗವು (MSBCC) ಮಹತ್ವದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸಾರ್ವಜನಿಕ ಸೇವೆಗಳ ಎಲ್ಲಾ ಕ್ಷೇತ್ರಗಳಲ್ಲಿ ಮರಾಠರ ಅಸಮರ್ಪಕ ಪ್ರಾತಿನಿಧ್ಯವನ್ನು ಎತ್ತಿ ತೋರಿಸಿದೆ ಮತ್ತು ಸಮುದಾಯವು ಹಿಂದುಳಿದಿರುವ ಕಾರಣದಿಂದ ಮುಖ್ಯವಾಹಿನಿಯಿಂದ ಸಮುದಾಯದ ಜನರು ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ. ಕಳೆದ ಆರು ವರ್ಷಗಳಲ್ಲಿ ಹೆಣ್ಣು ಮಕ್ಕಳ ವಿವಾಹಗಳ ಏರಿಕೆ ಆತಂಕಕಾರಿಯಾಗಿದೆ ಎಂದು ತಿಳಿಸಿದೆ.

ಆಯೋಗದ ಈ ವರದಿಯು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗ (SEBC) ವರ್ಗದ ಅಡಿಯಲ್ಲಿ ಮರಾಠರಿಗೆ ನೀಡಲಾದ 10% ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ರಾಜ್ಯ ಸಾಮಾನ್ಯ ಆಡಳಿತ ಇಲಾಖೆ (GAD) ಸಲ್ಲಿಸಿದ ಅಫಿಡವಿಟ್‌ನ ಒಂದು ಭಾಗವಾಗಿದೆ.

ನಿವೃತ್ತ ನ್ಯಾಯಮೂರ್ತಿ ಸುನಿಲ್ ಬಿ. ಶುಕ್ರೆ ನೇತೃತ್ವದ ಆಯೋಗವು ಮರಾಠರು ತಮ್ಮ ಹಿಂದುಳಿದಿರುವಿಕೆಯಿಂದಾಗಿ ಮುಖ್ಯವಾಹಿನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ.

2018ರಲ್ಲಿ, ಹಿಂದಿನ MSBCC ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಗಾಯಕ್ವಾಡ್ ಮತ್ತು ಅವರ ವರದಿಯು 50% ಕ್ಕಿಂತ ಹೆಚ್ಚು ಮರಾಠ ಜನಸಂಖ್ಯೆಯನ್ನು ಹೊಂದಿರುವ 355 ತಾಲೂಕುಗಳ ತಲಾ ಎರಡು ಗ್ರಾಮಗಳಿಂದ 43,629 ಕುಟುಂಬಗಳ ಸಮೀಕ್ಷೆಯನ್ನು ಆಧರಿಸಿದೆ. ಮತ್ತೊಂದೆಡೆ, ಶುಕ್ರೆ ಆಯೋಗವು ರಾಜ್ಯದಾದ್ಯಂತ 15 ಮಿಲಿಯನ್ (1,58,20,264) ಕುಟುಂಬಗಳನ್ನು ಸಮೀಕ್ಷೆ ಮಾಡಿದೆ ಮತ್ತು ಮರಾಠರು ರಾಜ್ಯದ ಜನಸಂಖ್ಯೆಯ 28%ದಷ್ಟಿದ್ದಾರೆ ಎಂದು ಕಂಡುಹಿಡಿದಿದೆ.

2024ರ ವರದಿಯ ಪ್ರಕಾರ, ಸರ್ಕಾರಿ ಸೇವೆಗಳಲ್ಲಿ ಮರಾಠರ ಒಟ್ಟು ಪ್ರಾತಿನಿಧ್ಯವು 2018ರಲ್ಲಿ 14.63% ದಷ್ಟಿತ್ತು. ಇದು 2024ರಲ್ಲಿ 9%ಕ್ಕೆ ಇಳಿದಿದೆ. 2024ರ ಆಯೋಗದ ವರದಿಯು, ಮರಾಠರ ಪ್ರಸ್ತುತ ಸ್ಥಿತಿಗೆ ತೀವ್ರ ಬಡತನ, ಕೃಷಿ ಆದಾಯದಲ್ಲಿನ ಕುಸಿತ ಮತ್ತು ಭೂ ಹಿಡುವಳಿಗಳ ವಿಭಜನೆಯ ಕಾರಣಗಳನ್ನು ಸೂಚಿಸಿದೆ.

ಸಮುದಾಯದಲ್ಲಿನ ಬಿಕ್ಕಟ್ಟು ಆತ್ಮಹತ್ಯೆಯಲ್ಲಿ ಮರಾಠರ ಪಾಲು ಕೂಡ 94.11%ಕ್ಕೆ ಏರಿದೆ ಎಂದು ಆಯೋಗದ ವರದಿ ಹೇಳಿದೆ. 2024ರ ವರದಿಯು ಸಮುದಾಯದಲ್ಲಿ ಹೆಚ್ಚುತ್ತಿರುವ ಭೂರಹಿತತೆಯನ್ನು ಸೂಚಿಸಿದೆ. 2018ರಲ್ಲಿ 8%ಕ್ಕೆ ಹೋಲಿಸಿದರೆ 2024ರಲ್ಲಿ ಮರಾಠರು 31.17% ಭೂರಹಿತರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

43.76% ಮರಾಠ ಮಹಿಳೆಯರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. 2018ರ ವರದಿಯು ದೈಹಿಕ ದುಡಿಮೆಯಲ್ಲಿ 53% ಜನರು ತೊಡಗಿರುವುದು ಕಂಡು ಬಂದಿತ್ತು. 2024ರ ವರದಿಯು 44.98%ರಷ್ಟು ಅಂದರೆ ಕೊಂಚ ಕಡಿಮೆಯಾಗಿರುವುದನ್ನು ಎತ್ತಿ ತೋರಿಸಿದೆ.

2024ರಲ್ಲಿ ಕಚ್ಚಾ ಮನೆಗಳಲ್ಲಿ ಸಮುದಾಯದ 81.81%ರಷ್ಟು ಜನರು ವಾಸಿಸುತ್ತಿದ್ದು, ಈ ಸ್ಥಿರವಾದ ಏರಿಕೆಯು ಹದಗೆಡುತ್ತಿರುವ ಜೀವನ ಪರಿಸ್ಥಿತಿಗಳನ್ನು ಸೂಚಿಸುತ್ತದೆ ಎಂದು ವರದಿಯು ಗಮನಿಸಿದೆ.

ಹೆಣ್ಣು ಮಕ್ಕಳ ವಿವಾಹವು ಸಮುದಾಯದಲ್ಲಿ ಹೆಚ್ಚಳವಾಗಿರುವುದನ್ನು ಗಮನಿಸಬಹುದಾಗಿದೆ. ಹೆಣ್ಣು ಮಕ್ಕಳ ವಿವಾಹ 2018ರಲ್ಲಿ 0.32%ರಷ್ಟಿದ್ದು, 2024ರಲ್ಲಿ 13.7%ಕ್ಕೆ ಏರಿಕೆಯಾಗಿದೆ. 2024ರಲ್ಲಿ 94.32% ಮರಾಠರು ಜಾತಿ-ಸಂಬಂಧಿತ ಕಿರುಕುಳವನ್ನು ಎದುರಿಸಿದ್ದಾರೆ ಎಂಬುವುದನ್ನು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...