Homeಮುಖಪುಟಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

ಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

- Advertisement -
- Advertisement -

ಮಹಾರಾಷ್ಟ್ರ ರಾಜ್ಯದ ಹಿಂದುಳಿದ ವರ್ಗ ಆಯೋಗವು (MSBCC) ಮಹತ್ವದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸಾರ್ವಜನಿಕ ಸೇವೆಗಳ ಎಲ್ಲಾ ಕ್ಷೇತ್ರಗಳಲ್ಲಿ ಮರಾಠರ ಅಸಮರ್ಪಕ ಪ್ರಾತಿನಿಧ್ಯವನ್ನು ಎತ್ತಿ ತೋರಿಸಿದೆ ಮತ್ತು ಸಮುದಾಯವು ಹಿಂದುಳಿದಿರುವ ಕಾರಣದಿಂದ ಮುಖ್ಯವಾಹಿನಿಯಿಂದ ಸಮುದಾಯದ ಜನರು ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ. ಕಳೆದ ಆರು ವರ್ಷಗಳಲ್ಲಿ ಹೆಣ್ಣು ಮಕ್ಕಳ ವಿವಾಹಗಳ ಏರಿಕೆ ಆತಂಕಕಾರಿಯಾಗಿದೆ ಎಂದು ತಿಳಿಸಿದೆ.

ಆಯೋಗದ ಈ ವರದಿಯು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗ (SEBC) ವರ್ಗದ ಅಡಿಯಲ್ಲಿ ಮರಾಠರಿಗೆ ನೀಡಲಾದ 10% ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ರಾಜ್ಯ ಸಾಮಾನ್ಯ ಆಡಳಿತ ಇಲಾಖೆ (GAD) ಸಲ್ಲಿಸಿದ ಅಫಿಡವಿಟ್‌ನ ಒಂದು ಭಾಗವಾಗಿದೆ.

ನಿವೃತ್ತ ನ್ಯಾಯಮೂರ್ತಿ ಸುನಿಲ್ ಬಿ. ಶುಕ್ರೆ ನೇತೃತ್ವದ ಆಯೋಗವು ಮರಾಠರು ತಮ್ಮ ಹಿಂದುಳಿದಿರುವಿಕೆಯಿಂದಾಗಿ ಮುಖ್ಯವಾಹಿನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ.

2018ರಲ್ಲಿ, ಹಿಂದಿನ MSBCC ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಗಾಯಕ್ವಾಡ್ ಮತ್ತು ಅವರ ವರದಿಯು 50% ಕ್ಕಿಂತ ಹೆಚ್ಚು ಮರಾಠ ಜನಸಂಖ್ಯೆಯನ್ನು ಹೊಂದಿರುವ 355 ತಾಲೂಕುಗಳ ತಲಾ ಎರಡು ಗ್ರಾಮಗಳಿಂದ 43,629 ಕುಟುಂಬಗಳ ಸಮೀಕ್ಷೆಯನ್ನು ಆಧರಿಸಿದೆ. ಮತ್ತೊಂದೆಡೆ, ಶುಕ್ರೆ ಆಯೋಗವು ರಾಜ್ಯದಾದ್ಯಂತ 15 ಮಿಲಿಯನ್ (1,58,20,264) ಕುಟುಂಬಗಳನ್ನು ಸಮೀಕ್ಷೆ ಮಾಡಿದೆ ಮತ್ತು ಮರಾಠರು ರಾಜ್ಯದ ಜನಸಂಖ್ಯೆಯ 28%ದಷ್ಟಿದ್ದಾರೆ ಎಂದು ಕಂಡುಹಿಡಿದಿದೆ.

2024ರ ವರದಿಯ ಪ್ರಕಾರ, ಸರ್ಕಾರಿ ಸೇವೆಗಳಲ್ಲಿ ಮರಾಠರ ಒಟ್ಟು ಪ್ರಾತಿನಿಧ್ಯವು 2018ರಲ್ಲಿ 14.63% ದಷ್ಟಿತ್ತು. ಇದು 2024ರಲ್ಲಿ 9%ಕ್ಕೆ ಇಳಿದಿದೆ. 2024ರ ಆಯೋಗದ ವರದಿಯು, ಮರಾಠರ ಪ್ರಸ್ತುತ ಸ್ಥಿತಿಗೆ ತೀವ್ರ ಬಡತನ, ಕೃಷಿ ಆದಾಯದಲ್ಲಿನ ಕುಸಿತ ಮತ್ತು ಭೂ ಹಿಡುವಳಿಗಳ ವಿಭಜನೆಯ ಕಾರಣಗಳನ್ನು ಸೂಚಿಸಿದೆ.

ಸಮುದಾಯದಲ್ಲಿನ ಬಿಕ್ಕಟ್ಟು ಆತ್ಮಹತ್ಯೆಯಲ್ಲಿ ಮರಾಠರ ಪಾಲು ಕೂಡ 94.11%ಕ್ಕೆ ಏರಿದೆ ಎಂದು ಆಯೋಗದ ವರದಿ ಹೇಳಿದೆ. 2024ರ ವರದಿಯು ಸಮುದಾಯದಲ್ಲಿ ಹೆಚ್ಚುತ್ತಿರುವ ಭೂರಹಿತತೆಯನ್ನು ಸೂಚಿಸಿದೆ. 2018ರಲ್ಲಿ 8%ಕ್ಕೆ ಹೋಲಿಸಿದರೆ 2024ರಲ್ಲಿ ಮರಾಠರು 31.17% ಭೂರಹಿತರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

43.76% ಮರಾಠ ಮಹಿಳೆಯರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. 2018ರ ವರದಿಯು ದೈಹಿಕ ದುಡಿಮೆಯಲ್ಲಿ 53% ಜನರು ತೊಡಗಿರುವುದು ಕಂಡು ಬಂದಿತ್ತು. 2024ರ ವರದಿಯು 44.98%ರಷ್ಟು ಅಂದರೆ ಕೊಂಚ ಕಡಿಮೆಯಾಗಿರುವುದನ್ನು ಎತ್ತಿ ತೋರಿಸಿದೆ.

2024ರಲ್ಲಿ ಕಚ್ಚಾ ಮನೆಗಳಲ್ಲಿ ಸಮುದಾಯದ 81.81%ರಷ್ಟು ಜನರು ವಾಸಿಸುತ್ತಿದ್ದು, ಈ ಸ್ಥಿರವಾದ ಏರಿಕೆಯು ಹದಗೆಡುತ್ತಿರುವ ಜೀವನ ಪರಿಸ್ಥಿತಿಗಳನ್ನು ಸೂಚಿಸುತ್ತದೆ ಎಂದು ವರದಿಯು ಗಮನಿಸಿದೆ.

ಹೆಣ್ಣು ಮಕ್ಕಳ ವಿವಾಹವು ಸಮುದಾಯದಲ್ಲಿ ಹೆಚ್ಚಳವಾಗಿರುವುದನ್ನು ಗಮನಿಸಬಹುದಾಗಿದೆ. ಹೆಣ್ಣು ಮಕ್ಕಳ ವಿವಾಹ 2018ರಲ್ಲಿ 0.32%ರಷ್ಟಿದ್ದು, 2024ರಲ್ಲಿ 13.7%ಕ್ಕೆ ಏರಿಕೆಯಾಗಿದೆ. 2024ರಲ್ಲಿ 94.32% ಮರಾಠರು ಜಾತಿ-ಸಂಬಂಧಿತ ಕಿರುಕುಳವನ್ನು ಎದುರಿಸಿದ್ದಾರೆ ಎಂಬುವುದನ್ನು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...