Homeಮುಖಪುಟಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

ಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

- Advertisement -
- Advertisement -

ಮಹಾರಾಷ್ಟ್ರ ರಾಜ್ಯದ ಹಿಂದುಳಿದ ವರ್ಗ ಆಯೋಗವು (MSBCC) ಮಹತ್ವದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸಾರ್ವಜನಿಕ ಸೇವೆಗಳ ಎಲ್ಲಾ ಕ್ಷೇತ್ರಗಳಲ್ಲಿ ಮರಾಠರ ಅಸಮರ್ಪಕ ಪ್ರಾತಿನಿಧ್ಯವನ್ನು ಎತ್ತಿ ತೋರಿಸಿದೆ ಮತ್ತು ಸಮುದಾಯವು ಹಿಂದುಳಿದಿರುವ ಕಾರಣದಿಂದ ಮುಖ್ಯವಾಹಿನಿಯಿಂದ ಸಮುದಾಯದ ಜನರು ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ. ಕಳೆದ ಆರು ವರ್ಷಗಳಲ್ಲಿ ಹೆಣ್ಣು ಮಕ್ಕಳ ವಿವಾಹಗಳ ಏರಿಕೆ ಆತಂಕಕಾರಿಯಾಗಿದೆ ಎಂದು ತಿಳಿಸಿದೆ.

ಆಯೋಗದ ಈ ವರದಿಯು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗ (SEBC) ವರ್ಗದ ಅಡಿಯಲ್ಲಿ ಮರಾಠರಿಗೆ ನೀಡಲಾದ 10% ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ರಾಜ್ಯ ಸಾಮಾನ್ಯ ಆಡಳಿತ ಇಲಾಖೆ (GAD) ಸಲ್ಲಿಸಿದ ಅಫಿಡವಿಟ್‌ನ ಒಂದು ಭಾಗವಾಗಿದೆ.

ನಿವೃತ್ತ ನ್ಯಾಯಮೂರ್ತಿ ಸುನಿಲ್ ಬಿ. ಶುಕ್ರೆ ನೇತೃತ್ವದ ಆಯೋಗವು ಮರಾಠರು ತಮ್ಮ ಹಿಂದುಳಿದಿರುವಿಕೆಯಿಂದಾಗಿ ಮುಖ್ಯವಾಹಿನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ.

2018ರಲ್ಲಿ, ಹಿಂದಿನ MSBCC ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಗಾಯಕ್ವಾಡ್ ಮತ್ತು ಅವರ ವರದಿಯು 50% ಕ್ಕಿಂತ ಹೆಚ್ಚು ಮರಾಠ ಜನಸಂಖ್ಯೆಯನ್ನು ಹೊಂದಿರುವ 355 ತಾಲೂಕುಗಳ ತಲಾ ಎರಡು ಗ್ರಾಮಗಳಿಂದ 43,629 ಕುಟುಂಬಗಳ ಸಮೀಕ್ಷೆಯನ್ನು ಆಧರಿಸಿದೆ. ಮತ್ತೊಂದೆಡೆ, ಶುಕ್ರೆ ಆಯೋಗವು ರಾಜ್ಯದಾದ್ಯಂತ 15 ಮಿಲಿಯನ್ (1,58,20,264) ಕುಟುಂಬಗಳನ್ನು ಸಮೀಕ್ಷೆ ಮಾಡಿದೆ ಮತ್ತು ಮರಾಠರು ರಾಜ್ಯದ ಜನಸಂಖ್ಯೆಯ 28%ದಷ್ಟಿದ್ದಾರೆ ಎಂದು ಕಂಡುಹಿಡಿದಿದೆ.

2024ರ ವರದಿಯ ಪ್ರಕಾರ, ಸರ್ಕಾರಿ ಸೇವೆಗಳಲ್ಲಿ ಮರಾಠರ ಒಟ್ಟು ಪ್ರಾತಿನಿಧ್ಯವು 2018ರಲ್ಲಿ 14.63% ದಷ್ಟಿತ್ತು. ಇದು 2024ರಲ್ಲಿ 9%ಕ್ಕೆ ಇಳಿದಿದೆ. 2024ರ ಆಯೋಗದ ವರದಿಯು, ಮರಾಠರ ಪ್ರಸ್ತುತ ಸ್ಥಿತಿಗೆ ತೀವ್ರ ಬಡತನ, ಕೃಷಿ ಆದಾಯದಲ್ಲಿನ ಕುಸಿತ ಮತ್ತು ಭೂ ಹಿಡುವಳಿಗಳ ವಿಭಜನೆಯ ಕಾರಣಗಳನ್ನು ಸೂಚಿಸಿದೆ.

ಸಮುದಾಯದಲ್ಲಿನ ಬಿಕ್ಕಟ್ಟು ಆತ್ಮಹತ್ಯೆಯಲ್ಲಿ ಮರಾಠರ ಪಾಲು ಕೂಡ 94.11%ಕ್ಕೆ ಏರಿದೆ ಎಂದು ಆಯೋಗದ ವರದಿ ಹೇಳಿದೆ. 2024ರ ವರದಿಯು ಸಮುದಾಯದಲ್ಲಿ ಹೆಚ್ಚುತ್ತಿರುವ ಭೂರಹಿತತೆಯನ್ನು ಸೂಚಿಸಿದೆ. 2018ರಲ್ಲಿ 8%ಕ್ಕೆ ಹೋಲಿಸಿದರೆ 2024ರಲ್ಲಿ ಮರಾಠರು 31.17% ಭೂರಹಿತರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

43.76% ಮರಾಠ ಮಹಿಳೆಯರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. 2018ರ ವರದಿಯು ದೈಹಿಕ ದುಡಿಮೆಯಲ್ಲಿ 53% ಜನರು ತೊಡಗಿರುವುದು ಕಂಡು ಬಂದಿತ್ತು. 2024ರ ವರದಿಯು 44.98%ರಷ್ಟು ಅಂದರೆ ಕೊಂಚ ಕಡಿಮೆಯಾಗಿರುವುದನ್ನು ಎತ್ತಿ ತೋರಿಸಿದೆ.

2024ರಲ್ಲಿ ಕಚ್ಚಾ ಮನೆಗಳಲ್ಲಿ ಸಮುದಾಯದ 81.81%ರಷ್ಟು ಜನರು ವಾಸಿಸುತ್ತಿದ್ದು, ಈ ಸ್ಥಿರವಾದ ಏರಿಕೆಯು ಹದಗೆಡುತ್ತಿರುವ ಜೀವನ ಪರಿಸ್ಥಿತಿಗಳನ್ನು ಸೂಚಿಸುತ್ತದೆ ಎಂದು ವರದಿಯು ಗಮನಿಸಿದೆ.

ಹೆಣ್ಣು ಮಕ್ಕಳ ವಿವಾಹವು ಸಮುದಾಯದಲ್ಲಿ ಹೆಚ್ಚಳವಾಗಿರುವುದನ್ನು ಗಮನಿಸಬಹುದಾಗಿದೆ. ಹೆಣ್ಣು ಮಕ್ಕಳ ವಿವಾಹ 2018ರಲ್ಲಿ 0.32%ರಷ್ಟಿದ್ದು, 2024ರಲ್ಲಿ 13.7%ಕ್ಕೆ ಏರಿಕೆಯಾಗಿದೆ. 2024ರಲ್ಲಿ 94.32% ಮರಾಠರು ಜಾತಿ-ಸಂಬಂಧಿತ ಕಿರುಕುಳವನ್ನು ಎದುರಿಸಿದ್ದಾರೆ ಎಂಬುವುದನ್ನು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...