Homeಮುಖಪುಟಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

ಮುಖ್ಯವಾಹಿನಿಯಿಂದ ಹೊರಗುಳಿದ ಮರಾಠ ಸಮುದಾಯ, ಬಾಲ್ಯ ವಿವಾಹಗಳಲ್ಲಿ ಏರಿಕೆ: ವರದಿ

- Advertisement -
- Advertisement -

ಮಹಾರಾಷ್ಟ್ರ ರಾಜ್ಯದ ಹಿಂದುಳಿದ ವರ್ಗ ಆಯೋಗವು (MSBCC) ಮಹತ್ವದ ವರದಿಯೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸಾರ್ವಜನಿಕ ಸೇವೆಗಳ ಎಲ್ಲಾ ಕ್ಷೇತ್ರಗಳಲ್ಲಿ ಮರಾಠರ ಅಸಮರ್ಪಕ ಪ್ರಾತಿನಿಧ್ಯವನ್ನು ಎತ್ತಿ ತೋರಿಸಿದೆ ಮತ್ತು ಸಮುದಾಯವು ಹಿಂದುಳಿದಿರುವ ಕಾರಣದಿಂದ ಮುಖ್ಯವಾಹಿನಿಯಿಂದ ಸಮುದಾಯದ ಜನರು ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ. ಕಳೆದ ಆರು ವರ್ಷಗಳಲ್ಲಿ ಹೆಣ್ಣು ಮಕ್ಕಳ ವಿವಾಹಗಳ ಏರಿಕೆ ಆತಂಕಕಾರಿಯಾಗಿದೆ ಎಂದು ತಿಳಿಸಿದೆ.

ಆಯೋಗದ ಈ ವರದಿಯು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗ (SEBC) ವರ್ಗದ ಅಡಿಯಲ್ಲಿ ಮರಾಠರಿಗೆ ನೀಡಲಾದ 10% ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ರಾಜ್ಯ ಸಾಮಾನ್ಯ ಆಡಳಿತ ಇಲಾಖೆ (GAD) ಸಲ್ಲಿಸಿದ ಅಫಿಡವಿಟ್‌ನ ಒಂದು ಭಾಗವಾಗಿದೆ.

ನಿವೃತ್ತ ನ್ಯಾಯಮೂರ್ತಿ ಸುನಿಲ್ ಬಿ. ಶುಕ್ರೆ ನೇತೃತ್ವದ ಆಯೋಗವು ಮರಾಠರು ತಮ್ಮ ಹಿಂದುಳಿದಿರುವಿಕೆಯಿಂದಾಗಿ ಮುಖ್ಯವಾಹಿನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ ಎಂದು ಗಮನಿಸಿದೆ.

2018ರಲ್ಲಿ, ಹಿಂದಿನ MSBCC ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಗಾಯಕ್ವಾಡ್ ಮತ್ತು ಅವರ ವರದಿಯು 50% ಕ್ಕಿಂತ ಹೆಚ್ಚು ಮರಾಠ ಜನಸಂಖ್ಯೆಯನ್ನು ಹೊಂದಿರುವ 355 ತಾಲೂಕುಗಳ ತಲಾ ಎರಡು ಗ್ರಾಮಗಳಿಂದ 43,629 ಕುಟುಂಬಗಳ ಸಮೀಕ್ಷೆಯನ್ನು ಆಧರಿಸಿದೆ. ಮತ್ತೊಂದೆಡೆ, ಶುಕ್ರೆ ಆಯೋಗವು ರಾಜ್ಯದಾದ್ಯಂತ 15 ಮಿಲಿಯನ್ (1,58,20,264) ಕುಟುಂಬಗಳನ್ನು ಸಮೀಕ್ಷೆ ಮಾಡಿದೆ ಮತ್ತು ಮರಾಠರು ರಾಜ್ಯದ ಜನಸಂಖ್ಯೆಯ 28%ದಷ್ಟಿದ್ದಾರೆ ಎಂದು ಕಂಡುಹಿಡಿದಿದೆ.

2024ರ ವರದಿಯ ಪ್ರಕಾರ, ಸರ್ಕಾರಿ ಸೇವೆಗಳಲ್ಲಿ ಮರಾಠರ ಒಟ್ಟು ಪ್ರಾತಿನಿಧ್ಯವು 2018ರಲ್ಲಿ 14.63% ದಷ್ಟಿತ್ತು. ಇದು 2024ರಲ್ಲಿ 9%ಕ್ಕೆ ಇಳಿದಿದೆ. 2024ರ ಆಯೋಗದ ವರದಿಯು, ಮರಾಠರ ಪ್ರಸ್ತುತ ಸ್ಥಿತಿಗೆ ತೀವ್ರ ಬಡತನ, ಕೃಷಿ ಆದಾಯದಲ್ಲಿನ ಕುಸಿತ ಮತ್ತು ಭೂ ಹಿಡುವಳಿಗಳ ವಿಭಜನೆಯ ಕಾರಣಗಳನ್ನು ಸೂಚಿಸಿದೆ.

ಸಮುದಾಯದಲ್ಲಿನ ಬಿಕ್ಕಟ್ಟು ಆತ್ಮಹತ್ಯೆಯಲ್ಲಿ ಮರಾಠರ ಪಾಲು ಕೂಡ 94.11%ಕ್ಕೆ ಏರಿದೆ ಎಂದು ಆಯೋಗದ ವರದಿ ಹೇಳಿದೆ. 2024ರ ವರದಿಯು ಸಮುದಾಯದಲ್ಲಿ ಹೆಚ್ಚುತ್ತಿರುವ ಭೂರಹಿತತೆಯನ್ನು ಸೂಚಿಸಿದೆ. 2018ರಲ್ಲಿ 8%ಕ್ಕೆ ಹೋಲಿಸಿದರೆ 2024ರಲ್ಲಿ ಮರಾಠರು 31.17% ಭೂರಹಿತರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

43.76% ಮರಾಠ ಮಹಿಳೆಯರು ಜೀವನೋಪಾಯಕ್ಕಾಗಿ ದೈಹಿಕ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. 2018ರ ವರದಿಯು ದೈಹಿಕ ದುಡಿಮೆಯಲ್ಲಿ 53% ಜನರು ತೊಡಗಿರುವುದು ಕಂಡು ಬಂದಿತ್ತು. 2024ರ ವರದಿಯು 44.98%ರಷ್ಟು ಅಂದರೆ ಕೊಂಚ ಕಡಿಮೆಯಾಗಿರುವುದನ್ನು ಎತ್ತಿ ತೋರಿಸಿದೆ.

2024ರಲ್ಲಿ ಕಚ್ಚಾ ಮನೆಗಳಲ್ಲಿ ಸಮುದಾಯದ 81.81%ರಷ್ಟು ಜನರು ವಾಸಿಸುತ್ತಿದ್ದು, ಈ ಸ್ಥಿರವಾದ ಏರಿಕೆಯು ಹದಗೆಡುತ್ತಿರುವ ಜೀವನ ಪರಿಸ್ಥಿತಿಗಳನ್ನು ಸೂಚಿಸುತ್ತದೆ ಎಂದು ವರದಿಯು ಗಮನಿಸಿದೆ.

ಹೆಣ್ಣು ಮಕ್ಕಳ ವಿವಾಹವು ಸಮುದಾಯದಲ್ಲಿ ಹೆಚ್ಚಳವಾಗಿರುವುದನ್ನು ಗಮನಿಸಬಹುದಾಗಿದೆ. ಹೆಣ್ಣು ಮಕ್ಕಳ ವಿವಾಹ 2018ರಲ್ಲಿ 0.32%ರಷ್ಟಿದ್ದು, 2024ರಲ್ಲಿ 13.7%ಕ್ಕೆ ಏರಿಕೆಯಾಗಿದೆ. 2024ರಲ್ಲಿ 94.32% ಮರಾಠರು ಜಾತಿ-ಸಂಬಂಧಿತ ಕಿರುಕುಳವನ್ನು ಎದುರಿಸಿದ್ದಾರೆ ಎಂಬುವುದನ್ನು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...