Homeಕರ್ನಾಟಕ'ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ'- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ಈ ರಾಜ್ಯದಲ್ಲಿ ಅದೆಷ್ಟೋ ಸಣ್ಣ ಸಣ್ಣ ಜಾತಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಅವರೆಲ್ಲರ ಮೂಲ ಕರ್ನಾಟಕ. ಅವರಿಗೇಕೆ ಈ ವಿಶೇಷ ಸವಲತ್ತಿಲ್ಲ? ಎಂದು ಆಕ್ರೋಶ ಹೊರಹಾಕಿದ್ದಾರೆ.

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ವ್ಯಾಪಕ ವಿರೋಧಕ್ಕೆ ಒಳಗಾಗಿದ್ದ ಯಡಿಯೂರಪ್ಪ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, “‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ” ಎಂದು ಹೇಳಿದ್ದಾರೆ. ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕ ಮುಖ್ಯಮಂತ್ರಿಯವರ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದು, “ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಮತ್ತೊಂದು ಟ್ವೀಟ್‌ನಲ್ಲಿ, “‘ಮರಾಠರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ- ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ” ಎಂದು ಬರೆಯಲಾಗಿದೆ.

ಯಡಿಯೂರಪ್ಪನವರು ಈ ನಿಲುವು ತೆಗೆದುಕೊಂಡಾಗಿನಿಂದಲೂ ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಈ ಟ್ವೀಟ್ ಮಾಡಿದಮೇಲೆ ನೇರವಾಗಿಯೇ ಇದಕ್ಕೆ ರೀಟ್ವೀಟ್ ಮಾಡಿ ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ #StopMarathaDevelopmentAuthority #ಮಾರಾಠ_ಅಭಿವೃದ್ಧಿ_ಪ್ರಾಧಿಕಾರ_ನಿಲ್ಲಿಸಿ ಎನ್ನುವ ಅಭಿಯಾನ ಆರಂಭವಾಗಿದೆ.

ಇದನ್ನೂ ಓದಿ: ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಯಶಸ್ ಎಂಬುವವರು ಟ್ವೀಟ್ ಮಾಡಿ, “ಈ ರಾಜ್ಯದಲ್ಲಿ ಅದೆಷ್ಟೋ ಸಣ್ಣ ಸಣ್ಣ ಜಾತಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ ಅವರೆಲ್ಲರದು ಮೂಲ ಕರ್ನಾಟಕವೇ, ಅವರಿಗೇಕೆ ಈ ವಿಶೇಷ ಸವಲತ್ತಿಲ್ಲ? ಸರಕಾರದಿಂದ ಏನಾದರೂ ಸವಲತ್ತು ಸಿಗಬೇಕಾದರೆ ಒಂದು ನೀವು ರಾಜಕೀಯವಾಗಿ ಗಟ್ಟಿಯಾಗಿರಬೇಕು ಇಲ್ಲ ಆ ಜಾತಿ ಹೆಚ್ಚಿರುವ ಜಾಗದಲ್ಲಿ ಉಪಚುನಾವಣೆ ಆಗಬೇಕು. ರಾಜಕೀಯ ನಾಯಕರೇ ಇಲ್ಲದ ಜಾತಿಯ ಕತೆಯೇನು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪ್ರವೀಣ್ ಎಂಬುವವರು ಟ್ವೀಟ್ ಮಾಡಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರಿಗೆ ಸಂಬಳ ನೀಡದಿರುವುದನ್ನು ಉಲ್ಲೇಖಿಸಿ, “ಕೆ ಎಸ್‌ ಆರ್‌ ಟಿ ಸಿ ನೌಕರರು?” ಎಂದು ಅವರ ಗತಿಯೇನು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಅವಿನಾಶ್ ಶೆಟ್ಟಿ ಎಂಬುವವರು ಟ್ವೀಟ್ ಮಾಡಿ, “ತಲ‌ತಲಾಂತರಗಳಿಂದ ವಾಸವಾಗಿರುವವರಿಗೆ ಸಿಗುವ ಬೆಲೆ ಇಲ್ಲಿಯವರೇ ಆಗಿರುವ ನಮಗೆ ತುಳುವರಿಗಿಲ್ಲ” ಎಂದು ತುಳುವ ಜನಾಂಗವನ್ನು ಕಡೆಗಣಿಸಿರುವುದನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿ, “ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಇದು ಅಚ್ಚರಿ ಉಂಟು ಮಾಡಿದೆ. ಎಲ್ಲಾ ಸಮಾಜ ಮತ್ತು ಜಾತಿಗಳಲ್ಲೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರ ನೆರವಿಗೆ ಸರ್ಕಾರ ಬರಬೇಕಾಗಿತ್ತು. ಕಷ್ಟದಲ್ಲಿರುವವರಿಗೆ ನೆರವಾಗುವುದಕ್ಕೆ ಒತ್ತುಕೊಟ್ಟರೆ ಒಳ್ಳೆಯದು. ಎಲ್ಲಾ ಸಮಾಜದಲ್ಲೂ ಕಡು ಬಡವರು ಇದ್ದಾರೆ. ಅವರ ಸಹಾಯಕ್ಕೆ ಸರ್ಕಾರ ಬರಬೇಕಾಗಿತ್ತು. ಈ ಶ್ರೇಣೀಕೃತ ವ್ಯವಸ್ಥೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರು ಎಲ್ಲಾ ಜಾತಿಗಳಲ್ಲೂ ಇದ್ದಾರೆ. ಆರ್ಥಿಕವಾಗಿ ಕಷ್ಟ ದಲ್ಲಿರುವವರಿಗೆ ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಿದರೆ ಒಳ್ಳೆಯದು. ಆರ್ಥಿಕವಾಗಿ ಬಲಿಷ್ಠವಾದರೆ ಆ ಕುಟುಂಬಗಳು ಮೇಲೆ ಬರುತ್ತವೆ. ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಮಾಡಿರುವುದು ಆಶ್ಚರ್ಯ ತಂದಿದೆ. ಹೀಗೆ ಜಾತಿಗೊಂದು ನಿಗಮ ಮಾಡುತ್ತಾ ಹೋದರೆ ಮಿತಿಯೇ ಇರುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದ ಈ ಧೋರಣೆಗೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿಯೂ ಸಹ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...