Homeಕರ್ನಾಟಕ7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್:...

7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

- Advertisement -
- Advertisement -

7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡದೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರ ವಿರುದ್ಧ ಸರ್ಕಾರ ನೌಕರರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾರ್ಚ್ 1ರಿಂದ ಹೋರಾಟವನ್ನೂ ಕೈಗೊಳ್ಳಲಾಗುತ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಪ್ರತಿಕ್ರಿಯೆ ನೀಡಿದ್ದು, “7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಈಗ ಕರೆ ನೀಡಿರುವ ಮಾರ್ಚ್ 1ರಂದು ನಡೆಯುವ ಮುಷ್ಕರ ವಾಪಸ್ ಪಡೆಯಲಾಗುವುದು” ಎಂದಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿರುವ ಅವರು “7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ. ಅನಿವಾರ್ಯವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ” ಎಂದು ತಿಳಿಸಿದ್ದಾರೆ.

“ಸರ್ಕಾರಿ ನೌಕರರ ಸಂಘಟನೆಗಳ 5,000ಕ್ಕೂ ಹೆಚ್ಚು ಪ್ರತಿನಿಧಿಗಳು ಬೆಂಗಳೂರಿನಲ್ಲಿ ಫೆಬ್ರುವರಿ 21ರಂದು ಸಭೆ ಸೇರಿ ಚರ್ಚಿಸಿದ್ದೇವೆ. ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದ್ದೇವೆ. ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದ ವರೆಗೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಶಿಕ್ಷಣ ಕ್ಷೇತ್ರದ ಸೇವೆಗಳೂ ಲಭ್ಯ ಇರುವುದಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಜುಲೈ 1, 2022ರಿಂದ ಜಾರಿಗೆ ಬರುವಂತೆ ಶೇ 40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದೆ ಇಡಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಸರ್ಕಾರಿ ನೌಕರರ ಸಂಘ ಮತ್ತು ಎನ್‌ಪಿಎಸ್ ನೌಕರರ ಸಂಘದ ನಡುವೆ ತಿಕ್ಕಾಟ ನಡೆದ ಬಳಿಕ ವೇತನ ಆಯೋಗ ಜಾರಿ ಸಂಬಂಧ ಸರ್ಕಾರಿ ನೌಕರರ ಸಂಘ ಒತ್ತಡ ಹಾಕುತ್ತಿದೆ.

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿತ್ತು.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಪ್ರತಿಕ್ರಿಯಿಸಿ, “ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಾಕ್ಷರಿಯವರು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ತಿಳಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ನೌಕರರ ಆಗ್ರಹಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಡ ಹಾಕಲಾರಂಭಿಸಿದ್ದಾರೆ. ಸರ್ಕಾರ ಆದೇಶ ಹೊರಡಿಸುತ್ತದೆಯೋ ಎಂಬುದು ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...