Homeಕರ್ನಾಟಕ7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್:...

7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

- Advertisement -
- Advertisement -

7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡದೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರ ವಿರುದ್ಧ ಸರ್ಕಾರ ನೌಕರರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾರ್ಚ್ 1ರಿಂದ ಹೋರಾಟವನ್ನೂ ಕೈಗೊಳ್ಳಲಾಗುತ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಪ್ರತಿಕ್ರಿಯೆ ನೀಡಿದ್ದು, “7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಈಗ ಕರೆ ನೀಡಿರುವ ಮಾರ್ಚ್ 1ರಂದು ನಡೆಯುವ ಮುಷ್ಕರ ವಾಪಸ್ ಪಡೆಯಲಾಗುವುದು” ಎಂದಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿರುವ ಅವರು “7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ. ಅನಿವಾರ್ಯವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ” ಎಂದು ತಿಳಿಸಿದ್ದಾರೆ.

“ಸರ್ಕಾರಿ ನೌಕರರ ಸಂಘಟನೆಗಳ 5,000ಕ್ಕೂ ಹೆಚ್ಚು ಪ್ರತಿನಿಧಿಗಳು ಬೆಂಗಳೂರಿನಲ್ಲಿ ಫೆಬ್ರುವರಿ 21ರಂದು ಸಭೆ ಸೇರಿ ಚರ್ಚಿಸಿದ್ದೇವೆ. ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದ್ದೇವೆ. ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದ ವರೆಗೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಶಿಕ್ಷಣ ಕ್ಷೇತ್ರದ ಸೇವೆಗಳೂ ಲಭ್ಯ ಇರುವುದಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಜುಲೈ 1, 2022ರಿಂದ ಜಾರಿಗೆ ಬರುವಂತೆ ಶೇ 40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದೆ ಇಡಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಸರ್ಕಾರಿ ನೌಕರರ ಸಂಘ ಮತ್ತು ಎನ್‌ಪಿಎಸ್ ನೌಕರರ ಸಂಘದ ನಡುವೆ ತಿಕ್ಕಾಟ ನಡೆದ ಬಳಿಕ ವೇತನ ಆಯೋಗ ಜಾರಿ ಸಂಬಂಧ ಸರ್ಕಾರಿ ನೌಕರರ ಸಂಘ ಒತ್ತಡ ಹಾಕುತ್ತಿದೆ.

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿತ್ತು.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಪ್ರತಿಕ್ರಿಯಿಸಿ, “ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಾಕ್ಷರಿಯವರು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ತಿಳಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ನೌಕರರ ಆಗ್ರಹಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಡ ಹಾಕಲಾರಂಭಿಸಿದ್ದಾರೆ. ಸರ್ಕಾರ ಆದೇಶ ಹೊರಡಿಸುತ್ತದೆಯೋ ಎಂಬುದು ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...