Homeಕರ್ನಾಟಕ7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್:...

7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

- Advertisement -
- Advertisement -

7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡದೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರ ವಿರುದ್ಧ ಸರ್ಕಾರ ನೌಕರರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾರ್ಚ್ 1ರಿಂದ ಹೋರಾಟವನ್ನೂ ಕೈಗೊಳ್ಳಲಾಗುತ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಪ್ರತಿಕ್ರಿಯೆ ನೀಡಿದ್ದು, “7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಈಗ ಕರೆ ನೀಡಿರುವ ಮಾರ್ಚ್ 1ರಂದು ನಡೆಯುವ ಮುಷ್ಕರ ವಾಪಸ್ ಪಡೆಯಲಾಗುವುದು” ಎಂದಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿರುವ ಅವರು “7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ. ಅನಿವಾರ್ಯವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ” ಎಂದು ತಿಳಿಸಿದ್ದಾರೆ.

“ಸರ್ಕಾರಿ ನೌಕರರ ಸಂಘಟನೆಗಳ 5,000ಕ್ಕೂ ಹೆಚ್ಚು ಪ್ರತಿನಿಧಿಗಳು ಬೆಂಗಳೂರಿನಲ್ಲಿ ಫೆಬ್ರುವರಿ 21ರಂದು ಸಭೆ ಸೇರಿ ಚರ್ಚಿಸಿದ್ದೇವೆ. ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದ್ದೇವೆ. ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದ ವರೆಗೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಶಿಕ್ಷಣ ಕ್ಷೇತ್ರದ ಸೇವೆಗಳೂ ಲಭ್ಯ ಇರುವುದಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಜುಲೈ 1, 2022ರಿಂದ ಜಾರಿಗೆ ಬರುವಂತೆ ಶೇ 40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದೆ ಇಡಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಸರ್ಕಾರಿ ನೌಕರರ ಸಂಘ ಮತ್ತು ಎನ್‌ಪಿಎಸ್ ನೌಕರರ ಸಂಘದ ನಡುವೆ ತಿಕ್ಕಾಟ ನಡೆದ ಬಳಿಕ ವೇತನ ಆಯೋಗ ಜಾರಿ ಸಂಬಂಧ ಸರ್ಕಾರಿ ನೌಕರರ ಸಂಘ ಒತ್ತಡ ಹಾಕುತ್ತಿದೆ.

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿತ್ತು.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಪ್ರತಿಕ್ರಿಯಿಸಿ, “ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಾಕ್ಷರಿಯವರು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ತಿಳಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ನೌಕರರ ಆಗ್ರಹಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಡ ಹಾಕಲಾರಂಭಿಸಿದ್ದಾರೆ. ಸರ್ಕಾರ ಆದೇಶ ಹೊರಡಿಸುತ್ತದೆಯೋ ಎಂಬುದು ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...