Homeಕರ್ನಾಟಕ7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್:...

7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

- Advertisement -
- Advertisement -

7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡದೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರ ವಿರುದ್ಧ ಸರ್ಕಾರ ನೌಕರರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾರ್ಚ್ 1ರಿಂದ ಹೋರಾಟವನ್ನೂ ಕೈಗೊಳ್ಳಲಾಗುತ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಪ್ರತಿಕ್ರಿಯೆ ನೀಡಿದ್ದು, “7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಈಗ ಕರೆ ನೀಡಿರುವ ಮಾರ್ಚ್ 1ರಂದು ನಡೆಯುವ ಮುಷ್ಕರ ವಾಪಸ್ ಪಡೆಯಲಾಗುವುದು” ಎಂದಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿರುವ ಅವರು “7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ. ಅನಿವಾರ್ಯವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ” ಎಂದು ತಿಳಿಸಿದ್ದಾರೆ.

“ಸರ್ಕಾರಿ ನೌಕರರ ಸಂಘಟನೆಗಳ 5,000ಕ್ಕೂ ಹೆಚ್ಚು ಪ್ರತಿನಿಧಿಗಳು ಬೆಂಗಳೂರಿನಲ್ಲಿ ಫೆಬ್ರುವರಿ 21ರಂದು ಸಭೆ ಸೇರಿ ಚರ್ಚಿಸಿದ್ದೇವೆ. ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದ್ದೇವೆ. ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದ ವರೆಗೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಶಿಕ್ಷಣ ಕ್ಷೇತ್ರದ ಸೇವೆಗಳೂ ಲಭ್ಯ ಇರುವುದಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಜುಲೈ 1, 2022ರಿಂದ ಜಾರಿಗೆ ಬರುವಂತೆ ಶೇ 40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದೆ ಇಡಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಸರ್ಕಾರಿ ನೌಕರರ ಸಂಘ ಮತ್ತು ಎನ್‌ಪಿಎಸ್ ನೌಕರರ ಸಂಘದ ನಡುವೆ ತಿಕ್ಕಾಟ ನಡೆದ ಬಳಿಕ ವೇತನ ಆಯೋಗ ಜಾರಿ ಸಂಬಂಧ ಸರ್ಕಾರಿ ನೌಕರರ ಸಂಘ ಒತ್ತಡ ಹಾಕುತ್ತಿದೆ.

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿತ್ತು.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಪ್ರತಿಕ್ರಿಯಿಸಿ, “ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಾಕ್ಷರಿಯವರು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ತಿಳಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ನೌಕರರ ಆಗ್ರಹಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಡ ಹಾಕಲಾರಂಭಿಸಿದ್ದಾರೆ. ಸರ್ಕಾರ ಆದೇಶ ಹೊರಡಿಸುತ್ತದೆಯೋ ಎಂಬುದು ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...