Homeಮುಖಪುಟಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ರೈತ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್‌ಬೀರ್‌ ಸಿಂಗ್ ರಾಜೇವಾಲ್, ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಮಹಾಪಂಚಾಯತ್‌ಗೆ ಆಹ್ವಾನಿಸಲಾಗುತ್ತದೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿದ್ದು ಕೇಂದ್ರ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿವೆ. ಈಗ ಅದೇ ಮಾದರಿಯಲ್ಲಿ ರಾಜ್ಯದ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ಎಲ್ಲಾ ರೈತ, ಪ್ರಗತಿಪರ ಸಂಘಟನೆಗಳು ಒಗ್ಗೂಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿಮುಟ್ಟಿಸುವ ನಿರ್ಣಯ ಕೈಗೊಂಡಿದ್ದಾರೆ.

ಈ ಕುರಿತು ಮಂಗಳವಾರ ಶಿವಮೊಗ್ಗದಲ್ಲಿ ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ. ಇದು ಕರ್ನಾಟಕದ ಪಾಲಿಗೆ ಮೊದಲ ಮಹಾಪಂಚಾಯತ್ ಆಗಲಿದ್ದು, ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಮಹಾಪಂಚಾಯತ್‌ಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್‌ಬೀರ್‌ ಸಿಂಗ್ ರಾಜೇವಾಲ್ ಮತ್ತು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಮಹಾಪಂಚಾಯತ್‌ಗೆ ಆಹ್ವಾನಿಸಲಾಗುತ್ತದೆ.

ಶಿವಮೊಗ್ಗದಲ್ಲಿ ನಡೆದ ಮಹಾಸಭೆಯ ವಿಡಿಯೋ ನೋಡಿ.

ಕರ್ನಾಟಕದ ರಾಜ್ಯ ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರರವರು ಸೇರಿದಂತೆ ಎಲ್ಲಾ ರೈತ ಮುಖಂಡರು, ದಲಿತ ಮುಖಂಡರು, ಎಡಪಕ್ಷಗಳ ಮುಖಂಡರು, ಕಾರ್ಮಿಕ ಮುಖಂಡರು, ಮಹಿಳಾ ಮುಖಂಡರು ಮಹಾಪಂಚಾಯತ್‌ನಲ್ಲಿ ಮಾತನಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿಗಳಾದ ಎಂ ಶ್ರೀಕಾಂತ್, ಸೂಡಾದ ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುಂದ್ರೇಶ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಚ್ ಹಾಲೇಶಪ್ಪ, ದಸಸಂ ರಾಜ್ಯ ಸಂಘಟನಾ ಸಂಚಾಲಕರಾದ ಎಂ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರು ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಂಜುನಾಥ್‌ಗೌಡ್ರು, ಸಿಐಟಿಯು ಜಿಲ್ಲಾಧ್ಯಕ್ಷರಾದ ಹನುಮಕ್ಕ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕೆ.ಎಲ್ ಅಶೋಕ್, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ರವಿಕುಮಾರ್, ಮಹಿಳಾ ಮುಖಂಡರಾದ ಶಾಂತಮ್ಮ, ಮಹಾನಗರ ಪಾಲಿಗೆ ವಿರೋಧ ಪಕ್ಷದ ನಾಯಕರಾದ ಯೋಗೀಶ್, ಜಯಕರ್ನಾಟಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು, ಹಿರಿಯ ಮುಖಂಡರಾದ ರವಿ ಕುಗ್ವೆ, ಪ್ರಗತಿಪರ ಸಂಘಟನೆಯ ಸಂಚಾಲಕರಾದ ಉಜ್ಜಯಿನಿ ರಾಜು, ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ರಮೇಶ್ ಹೆಗಡೆ, ಕಾಂಗ್ರೆಸ್ ನಗರ ಅಧ್ಯಕ್ಷರರಾದ ವಿಶ್ವನಾಥ್ ಕಾಶಿ, ವಕೀಲರಾದ ಕೆ.ಪಿ ಶ್ರೀಪಾಲ್, ಸುದ್ದಿ ಸಾಗರ ಪತ್ರಿಕೆಯ ರಾಘವೇಂದ್ರ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಮುಖಂಡರಾದ ಪರಮೇಶ್ವರ್ ದೂಗೂರು, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿಗಳಾದ ಅನನ್ಯ ಶಿವಕುಮಾರ್, ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪ ಮೇಯರ್ ಪಾಲಾಕ್ಷಿ ಸೇರಿದಂತೆ 36 ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

“ಸಮಾಜವಾದಿ ತವರೂರಾದ ಶಿವಮೊಗ್ಗ ಜಿಲ್ಲೆಯು ಅನೇಕ ಚಳವಳಿಗಳ ಉಗಮ ಸ್ಥಾನವಾಗಿದೆ. ಈಗ ಶಿವಮೊಗ್ಗದಲ್ಲಿ ಜನರ ಚಳವಳಿವೊಂದು ಮರುಜನ್ಮ ಪಡೆಯುವ ಅವಕಾಶ ಬಂದೊದಗಿದೆ. ದೇಶದ ವರ್ತಮಾನದ ಜನವಿರೋಧಿ ಪ್ರಭುತ್ವದ ರೈತ ವಿರೋಧಿ ನಿರ್ಧಾರಗಳನ್ನು ಧಿಕ್ಕರಿಸುವುದು ಈ ಕಾಲದ ತುರ್ತು ಮತ್ತು ಈ ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಚಳವಳಿ ಅನ್ನ ತಿನ್ನುವವರ ಚಳಚವಳಿಯಾಗಿದೆ. ಭಾರತದಾದ್ಯಂತ ನಡೆಯುತ್ತಿರುವ ರೈತ ಚಳವಳಿಯನ್ನು ಬಲಗೊಳಿಸಲು ಶಿವಮೊಗ್ಗದ ಹೋರಾಟದ ಭೂಮಿಯಲ್ಲಿ ಮಾರ್ಚ್ 15 ರಂದು ರೈತರ ಮಹಾಪಂಚಾಯತ್ ನಡೆಸಲು ಮಹಾಸಭೆ ನಿರ್ಣಯಿಸುತ್ತದೆ” ಎಂಬ ಸಂಕಲ್ಪವನ್ನು ಸಭೆಯಲ್ಲಿ ಎಚ್.ಆರ್ ಬಸವರಾಜಪ್ಪ ಮತ್ತು ಕೆ.ಟಿ ಗಂಗಾಧರ್ ಬೋಧಿಸಿದರು.


ಇದನ್ನೂ ಓದಿ; ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...