Homeಮುಖಪುಟಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ರೈತ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್‌ಬೀರ್‌ ಸಿಂಗ್ ರಾಜೇವಾಲ್, ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಮಹಾಪಂಚಾಯತ್‌ಗೆ ಆಹ್ವಾನಿಸಲಾಗುತ್ತದೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿದ್ದು ಕೇಂದ್ರ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿವೆ. ಈಗ ಅದೇ ಮಾದರಿಯಲ್ಲಿ ರಾಜ್ಯದ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ಎಲ್ಲಾ ರೈತ, ಪ್ರಗತಿಪರ ಸಂಘಟನೆಗಳು ಒಗ್ಗೂಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿಮುಟ್ಟಿಸುವ ನಿರ್ಣಯ ಕೈಗೊಂಡಿದ್ದಾರೆ.

ಈ ಕುರಿತು ಮಂಗಳವಾರ ಶಿವಮೊಗ್ಗದಲ್ಲಿ ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ. ಇದು ಕರ್ನಾಟಕದ ಪಾಲಿಗೆ ಮೊದಲ ಮಹಾಪಂಚಾಯತ್ ಆಗಲಿದ್ದು, ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಮಹಾಪಂಚಾಯತ್‌ಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್‌ಬೀರ್‌ ಸಿಂಗ್ ರಾಜೇವಾಲ್ ಮತ್ತು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಮಹಾಪಂಚಾಯತ್‌ಗೆ ಆಹ್ವಾನಿಸಲಾಗುತ್ತದೆ.

ಶಿವಮೊಗ್ಗದಲ್ಲಿ ನಡೆದ ಮಹಾಸಭೆಯ ವಿಡಿಯೋ ನೋಡಿ.

ಕರ್ನಾಟಕದ ರಾಜ್ಯ ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರರವರು ಸೇರಿದಂತೆ ಎಲ್ಲಾ ರೈತ ಮುಖಂಡರು, ದಲಿತ ಮುಖಂಡರು, ಎಡಪಕ್ಷಗಳ ಮುಖಂಡರು, ಕಾರ್ಮಿಕ ಮುಖಂಡರು, ಮಹಿಳಾ ಮುಖಂಡರು ಮಹಾಪಂಚಾಯತ್‌ನಲ್ಲಿ ಮಾತನಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿಗಳಾದ ಎಂ ಶ್ರೀಕಾಂತ್, ಸೂಡಾದ ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುಂದ್ರೇಶ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಚ್ ಹಾಲೇಶಪ್ಪ, ದಸಸಂ ರಾಜ್ಯ ಸಂಘಟನಾ ಸಂಚಾಲಕರಾದ ಎಂ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರು ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಂಜುನಾಥ್‌ಗೌಡ್ರು, ಸಿಐಟಿಯು ಜಿಲ್ಲಾಧ್ಯಕ್ಷರಾದ ಹನುಮಕ್ಕ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕೆ.ಎಲ್ ಅಶೋಕ್, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ರವಿಕುಮಾರ್, ಮಹಿಳಾ ಮುಖಂಡರಾದ ಶಾಂತಮ್ಮ, ಮಹಾನಗರ ಪಾಲಿಗೆ ವಿರೋಧ ಪಕ್ಷದ ನಾಯಕರಾದ ಯೋಗೀಶ್, ಜಯಕರ್ನಾಟಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು, ಹಿರಿಯ ಮುಖಂಡರಾದ ರವಿ ಕುಗ್ವೆ, ಪ್ರಗತಿಪರ ಸಂಘಟನೆಯ ಸಂಚಾಲಕರಾದ ಉಜ್ಜಯಿನಿ ರಾಜು, ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ರಮೇಶ್ ಹೆಗಡೆ, ಕಾಂಗ್ರೆಸ್ ನಗರ ಅಧ್ಯಕ್ಷರರಾದ ವಿಶ್ವನಾಥ್ ಕಾಶಿ, ವಕೀಲರಾದ ಕೆ.ಪಿ ಶ್ರೀಪಾಲ್, ಸುದ್ದಿ ಸಾಗರ ಪತ್ರಿಕೆಯ ರಾಘವೇಂದ್ರ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಮುಖಂಡರಾದ ಪರಮೇಶ್ವರ್ ದೂಗೂರು, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿಗಳಾದ ಅನನ್ಯ ಶಿವಕುಮಾರ್, ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪ ಮೇಯರ್ ಪಾಲಾಕ್ಷಿ ಸೇರಿದಂತೆ 36 ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

“ಸಮಾಜವಾದಿ ತವರೂರಾದ ಶಿವಮೊಗ್ಗ ಜಿಲ್ಲೆಯು ಅನೇಕ ಚಳವಳಿಗಳ ಉಗಮ ಸ್ಥಾನವಾಗಿದೆ. ಈಗ ಶಿವಮೊಗ್ಗದಲ್ಲಿ ಜನರ ಚಳವಳಿವೊಂದು ಮರುಜನ್ಮ ಪಡೆಯುವ ಅವಕಾಶ ಬಂದೊದಗಿದೆ. ದೇಶದ ವರ್ತಮಾನದ ಜನವಿರೋಧಿ ಪ್ರಭುತ್ವದ ರೈತ ವಿರೋಧಿ ನಿರ್ಧಾರಗಳನ್ನು ಧಿಕ್ಕರಿಸುವುದು ಈ ಕಾಲದ ತುರ್ತು ಮತ್ತು ಈ ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಚಳವಳಿ ಅನ್ನ ತಿನ್ನುವವರ ಚಳಚವಳಿಯಾಗಿದೆ. ಭಾರತದಾದ್ಯಂತ ನಡೆಯುತ್ತಿರುವ ರೈತ ಚಳವಳಿಯನ್ನು ಬಲಗೊಳಿಸಲು ಶಿವಮೊಗ್ಗದ ಹೋರಾಟದ ಭೂಮಿಯಲ್ಲಿ ಮಾರ್ಚ್ 15 ರಂದು ರೈತರ ಮಹಾಪಂಚಾಯತ್ ನಡೆಸಲು ಮಹಾಸಭೆ ನಿರ್ಣಯಿಸುತ್ತದೆ” ಎಂಬ ಸಂಕಲ್ಪವನ್ನು ಸಭೆಯಲ್ಲಿ ಎಚ್.ಆರ್ ಬಸವರಾಜಪ್ಪ ಮತ್ತು ಕೆ.ಟಿ ಗಂಗಾಧರ್ ಬೋಧಿಸಿದರು.


ಇದನ್ನೂ ಓದಿ; ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...