Homeಮುಖಪುಟಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ರೈತ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್‌ಬೀರ್‌ ಸಿಂಗ್ ರಾಜೇವಾಲ್, ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಮಹಾಪಂಚಾಯತ್‌ಗೆ ಆಹ್ವಾನಿಸಲಾಗುತ್ತದೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್‌ಗಳು ನಡೆಯುತ್ತಿದ್ದು ಕೇಂದ್ರ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿವೆ. ಈಗ ಅದೇ ಮಾದರಿಯಲ್ಲಿ ರಾಜ್ಯದ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ಎಲ್ಲಾ ರೈತ, ಪ್ರಗತಿಪರ ಸಂಘಟನೆಗಳು ಒಗ್ಗೂಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿಮುಟ್ಟಿಸುವ ನಿರ್ಣಯ ಕೈಗೊಂಡಿದ್ದಾರೆ.

ಈ ಕುರಿತು ಮಂಗಳವಾರ ಶಿವಮೊಗ್ಗದಲ್ಲಿ ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ. ಇದು ಕರ್ನಾಟಕದ ಪಾಲಿಗೆ ಮೊದಲ ಮಹಾಪಂಚಾಯತ್ ಆಗಲಿದ್ದು, ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಮಹಾಪಂಚಾಯತ್‌ಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ದೆಹಲಿಯಲ್ಲಿ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾದ ಡಾ.ದರ್ಶನ್ ಪಾಲ್, ಬಲ್‌ಬೀರ್‌ ಸಿಂಗ್ ರಾಜೇವಾಲ್ ಮತ್ತು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಅವರನ್ನು ಮಹಾಪಂಚಾಯತ್‌ಗೆ ಆಹ್ವಾನಿಸಲಾಗುತ್ತದೆ.

ಶಿವಮೊಗ್ಗದಲ್ಲಿ ನಡೆದ ಮಹಾಸಭೆಯ ವಿಡಿಯೋ ನೋಡಿ.

ಕರ್ನಾಟಕದ ರಾಜ್ಯ ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರರವರು ಸೇರಿದಂತೆ ಎಲ್ಲಾ ರೈತ ಮುಖಂಡರು, ದಲಿತ ಮುಖಂಡರು, ಎಡಪಕ್ಷಗಳ ಮುಖಂಡರು, ಕಾರ್ಮಿಕ ಮುಖಂಡರು, ಮಹಿಳಾ ಮುಖಂಡರು ಮಹಾಪಂಚಾಯತ್‌ನಲ್ಲಿ ಮಾತನಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿಗಳಾದ ಎಂ ಶ್ರೀಕಾಂತ್, ಸೂಡಾದ ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುಂದ್ರೇಶ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಚ್ ಹಾಲೇಶಪ್ಪ, ದಸಸಂ ರಾಜ್ಯ ಸಂಘಟನಾ ಸಂಚಾಲಕರಾದ ಎಂ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರು ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಂಜುನಾಥ್‌ಗೌಡ್ರು, ಸಿಐಟಿಯು ಜಿಲ್ಲಾಧ್ಯಕ್ಷರಾದ ಹನುಮಕ್ಕ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕೆ.ಎಲ್ ಅಶೋಕ್, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ರವಿಕುಮಾರ್, ಮಹಿಳಾ ಮುಖಂಡರಾದ ಶಾಂತಮ್ಮ, ಮಹಾನಗರ ಪಾಲಿಗೆ ವಿರೋಧ ಪಕ್ಷದ ನಾಯಕರಾದ ಯೋಗೀಶ್, ಜಯಕರ್ನಾಟಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು, ಹಿರಿಯ ಮುಖಂಡರಾದ ರವಿ ಕುಗ್ವೆ, ಪ್ರಗತಿಪರ ಸಂಘಟನೆಯ ಸಂಚಾಲಕರಾದ ಉಜ್ಜಯಿನಿ ರಾಜು, ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ರಮೇಶ್ ಹೆಗಡೆ, ಕಾಂಗ್ರೆಸ್ ನಗರ ಅಧ್ಯಕ್ಷರರಾದ ವಿಶ್ವನಾಥ್ ಕಾಶಿ, ವಕೀಲರಾದ ಕೆ.ಪಿ ಶ್ರೀಪಾಲ್, ಸುದ್ದಿ ಸಾಗರ ಪತ್ರಿಕೆಯ ರಾಘವೇಂದ್ರ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಮುಖಂಡರಾದ ಪರಮೇಶ್ವರ್ ದೂಗೂರು, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿಗಳಾದ ಅನನ್ಯ ಶಿವಕುಮಾರ್, ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪ ಮೇಯರ್ ಪಾಲಾಕ್ಷಿ ಸೇರಿದಂತೆ 36 ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

“ಸಮಾಜವಾದಿ ತವರೂರಾದ ಶಿವಮೊಗ್ಗ ಜಿಲ್ಲೆಯು ಅನೇಕ ಚಳವಳಿಗಳ ಉಗಮ ಸ್ಥಾನವಾಗಿದೆ. ಈಗ ಶಿವಮೊಗ್ಗದಲ್ಲಿ ಜನರ ಚಳವಳಿವೊಂದು ಮರುಜನ್ಮ ಪಡೆಯುವ ಅವಕಾಶ ಬಂದೊದಗಿದೆ. ದೇಶದ ವರ್ತಮಾನದ ಜನವಿರೋಧಿ ಪ್ರಭುತ್ವದ ರೈತ ವಿರೋಧಿ ನಿರ್ಧಾರಗಳನ್ನು ಧಿಕ್ಕರಿಸುವುದು ಈ ಕಾಲದ ತುರ್ತು ಮತ್ತು ಈ ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಚಳವಳಿ ಅನ್ನ ತಿನ್ನುವವರ ಚಳಚವಳಿಯಾಗಿದೆ. ಭಾರತದಾದ್ಯಂತ ನಡೆಯುತ್ತಿರುವ ರೈತ ಚಳವಳಿಯನ್ನು ಬಲಗೊಳಿಸಲು ಶಿವಮೊಗ್ಗದ ಹೋರಾಟದ ಭೂಮಿಯಲ್ಲಿ ಮಾರ್ಚ್ 15 ರಂದು ರೈತರ ಮಹಾಪಂಚಾಯತ್ ನಡೆಸಲು ಮಹಾಸಭೆ ನಿರ್ಣಯಿಸುತ್ತದೆ” ಎಂಬ ಸಂಕಲ್ಪವನ್ನು ಸಭೆಯಲ್ಲಿ ಎಚ್.ಆರ್ ಬಸವರಾಜಪ್ಪ ಮತ್ತು ಕೆ.ಟಿ ಗಂಗಾಧರ್ ಬೋಧಿಸಿದರು.


ಇದನ್ನೂ ಓದಿ; ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...