Homeಕರ್ನಾಟಕಮಾರ್ಚ್ 2023ರ ಗೌರಿ ಲಂಕೇಶ್ ಹತ್ಯಾ ಪ್ರಕರಣ ವಿಚಾರಣಾ ವರದಿ

ಮಾರ್ಚ್ 2023ರ ಗೌರಿ ಲಂಕೇಶ್ ಹತ್ಯಾ ಪ್ರಕರಣ ವಿಚಾರಣಾ ವರದಿ

- Advertisement -
- Advertisement -

ಗೌರಿ ಲಂಕೇಶ್ ಹತ್ಯಾ ಪ್ರಕರಣದ ಮಾರ್ಚ್ ತಿಂಗಳ ವಿಚಾರಣೆಯು ಮಾರ್ಚ್ 13 ರಿಂದ 17 ರವರೆಗೆ ನಡೆಯಿತು. ಮೂವರು ಸಾಕ್ಷಿಗಳ ಪ್ರಧಾನ ಹೇಳಿಕೆ ಮತ್ತದರ ಮೇಲೆ ಆರೋಪಿ ಪರ ವಕೀಲರ ಪಾಟಿ ಸವಾಲುಗಳು ನಡೆದವು, ಹಾಗೂ ಬಾಕಿ ಉಳಿದಿದ್ದ ಇನ್ನಿಬ್ಬರು ಸಾಕ್ಷಿಗಳ ಹೇಳಿಕೆ ಮತ್ತು ಪಾಟಿ ಸವಾಲುಗಳು ಮುಂದುವರೆದವು.

ಬಾಲರಾಜ್:  CI- SIT ಟೀಮಿನ ಸದಸ್ಯರು.

ಇವರು 2018 ರ ಮೇ 23 ರಂದು ಆರೋಪಿ ಸುಜಿತ್ ಕುಮಾರ್ ಉಡುಪಿಯಲ್ಲಿ ವಾಸವಿದ್ದ ಮನೆಯನ್ನು ಪಂಚರ ಎದುರಿಗೆ ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿ ತಪಾಸಣೆ ಮಾಡಿದ್ದರ ಬಗ್ಗೆ ಸಾಕ್ಷಿ ನುಡಿದರು. ಸುಜಿತ್ ಮನೆಯಲ್ಲಿ ಸುಜಿತ್ ಓಟರ್ ಕಾರ್ಡ್, ಕರ್ನಾಟಕ-ಮಹಾರಾಷ್ಟ್ರ ಭೂಪಟ, ಸನಾತನ ಸಂಸ್ಥೆಯ ಅಂಜಲಿ ಗಾಡ್ಗಿಲ್ ಎಂಬುವರು ಬರೆದ ಲೇಖನದ ಜೆರಾಕ್ಸ್ ಪ್ರತಿ, 18 ಮೊಬೈಲ್ ಸೆಟ್ಟುಗಳು ಮತ್ತು 15 ಮೊಬೈಲ್ ಪೌಚುಗಳು, ಹಾಗೂ ಮೂರು ಮೊಬೈಲ್ ಖರೀದಿಗೆ ಸಂಬಧಿಸಿದ ರಸೀದಿಗಳನ್ನು ವಶಪಡಿಸಿಕೊಂಡ ಬಗ್ಗೆ ಸಾಕ್ಷಿ ನುಡಿದರು. ಆ ದಿನ ರಸೀದೆಯಲ್ಲಿ ಇದ್ದ ವಿಳಾಸದ ಮೇರೆಗೆ ಉಡುಪಿ ಬಸ್‌ ಸ್ಟ್ಯಾಂಡ್‌ನಲ್ಲಿದ ಐ ಮೊಬೈಲ್ ಅಂಗಡಿ ಮತ್ತು ಮಣಿಪಾಲದ ಸಿಟಿ ಪಾಯಿಂಟ್ ಮೊಬೈಲ್ ಅಂಗಡಿಯಲ್ಲಿ ಮೊಬೈಲ್ ಖರೀದಿಯ ಮೂಲ ರಸೀದಿಯನ್ನು ವಶಪಡಿಸಿಕೊಂಡ ಬಗ್ಗೆ ಸಾಕ್ಷಿ ನುಡಿದರು.

ಹಾಗೆಯೇ 2018 ರ ಜುಲೈ 21 ರಂದು ಹುಬ್ಬಳ್ಳಿಗೆ ಹೋಗಿ ಬಾತ್ಮೀದಾರದ ಸಹಕಾರದೊಂದಿಗೆ ಆರೋಪಿಗಳಾದ ಅಮಿತ್ ಬಡ್ಡಿ ಮತ್ತು ಗಣೇಶ್ ಮಿಸ್ಕಿನ್ ಅವರುಗಳನ್ನು ಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಿ, ಅಲ್ಲಿಂದ ಅವರನ್ನು ಬೆಂಗಳೂರಿಗೆ ಕರೆತಂದ ಬಗ್ಗೆಯೂ ಸಾಕ್ಷ್ಯ ನುಡಿದರು. ಹಾಗೂ ಸದರಿ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುತಿಸಿದರು.

ಪಾಟಿ ಸವಾಲು: ಆರೋಪಿ ಪರ ವಕೀಲ ಕೃಷ್ಣಮೂರ್ತಿಯವರು ಸಾಕ್ಷಿಯ ತಪಾಸಣೆ ಮಾಡುವಾಗ, ದಾಖಲು ಮಾಡುವಾಗ ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸದ ಬಗ್ಗೆ, ತಾವು ಸಹಿ ಮಾಡಿ ಪಡೆದುಕೊಂಡ ನೋಟೀಸಿನಲಿ ಕೈಬರಹದಿಂದ ಕೆಲವು ತಿದ್ದುಪಡಿ ಮಾಡಿರುವ ಬಗ್ಗೆ, ಹಾಗೂ ಸಾಕ್ಷಿಯ ಮೇಲೆ ಬೇರೆ ಪ್ರಕರಣದಲ್ಲಿ ಆರೋಪವಿರುವ ಬಗ್ಗೆ ಹಾಗೂ ಸಾಮಾನ್ಯವಾಗಿ ತಮ್ಮ ವ್ಯಾಪ್ತಿಯಲ್ಲಿ ಇಲ್ಲದ ಪ್ರಕರಣಗಳಲ್ಲಿ ತಲೆದೂರಿಸುತ್ತಾರೆ ಎಂಬ ಆರೋಪದ ಬಗ್ಗೆ ಪಾಟಿ ಸವಾಲು ಮಾಡಿದರು. ಹಾಗೂ ಅವರು ನುಡಿದ ಸಾಕ್ಷಿಗಳೆಲ್ಲವೂ ಸುಳ್ಳು ಎಂದು ಸವಾಲು ಹಾಕಿದರು. ಸಾಕ್ಷಿಯು ಅಲ್ಲಲ್ಲಿ ಕೈಬರಹದ ತಿದ್ದುಪಡಿ ಮಾಡಿರುವ ಬಗ್ಗೆ ಹಾಗೂ ಪಡೆದುಕೊಂಡ ನೋಟೀಸಿನಲ್ಲಿ ಕೆಲವು ನಿರ್ದಿಷ್ಟ ಸೂಚನೆಗಳು ಇಲ್ಲದಿರುವ ಬಗ್ಗೆ ಒಪ್ಪಿಕೊಂಡರೂ ಉಳಿದ ಎಲ್ಲಾ ಆರೋಪಗಳನ್ನು ನಿರಾಕರಿಸಿದರು.

ಮುಕುಂದ ವಿ: ಬಿಬಿಎಂಪಿ ಯಲ್ಲಿ ಎಸ್‌ಡಿಎ

ಇವರು 2018 ರ ಜೂನ್ 7 ರಂದು ಪೊಲೀಸರ ಕೋರಿಕೆ ಮೇರೆಗೆ ಮೇಲಧಿಕಾರಿಗಳು ಆದೇಶಿಸಿದ್ದರಿಂದ ತನಿಖೆಯಲ್ಲಿ ಪಂಚರಾಗಿ ಸಹಕರಿಸಿದ ಬಗ್ಗೆ ಸಾಕ್ಷಿ ನುಡಿದರು. ಜೂನ್ 7 ರಂದು ಸಿಐಡಿ ಕಚೇರಿಯಲ್ಲಿ ಆರೋಪಿ ಸುಜಿತ್ ಕುಮಾರ್ ಅವರ ಧ್ವನಿ ಮಾದರಿ ಮತ್ತು ಆರೋಪಿ ಸುಜಿತ್ ಕುಮಾರ್ ಮತ್ತು ಮತ್ತೊಬ್ಬ ಆರೋಪಿ ಮನೋಹರ್ ಅವರ ಕೈಬರಹದ ಮಾದರಿಗಳನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿ ಪೊಲೀಸರು ಪಡೆದುಕೊಂಡ ಬಗ್ಗೆ ಸಾಕ್ಷಿ ನುಡಿದರು. ಅದಕ್ಕೆ ಸಬಂಧಿಸಿದಂತೆ ತಾವು ಧೃಢಪಡಿಸಿ ನೀಡಿದ ಹೇಳಿಕೆ ಮತ್ತು ಸಹಿಗಳನ್ನು ಗುರುತಿಸಿದರು. ಮತ್ತು ವಿಡಿಯೋ ಕಾನ್ಫರೆನ್ಸಿನ ಮೂಲಕ ಆರೋಪಿ ಸುಜಿತ್ ಮತ್ತು ಮನೋಹರ್ ಅವರನ್ನು ಗುರುತಿಸಿದರು.

ಪಾಟಿ ಸವಾಲು: ಆರೋಪಿ ಪರ ವಕೀಲರು ಸಾಕ್ಷಿಯು ಪಂಚರಾಗಿ ಸಹಕರಿಸಲು ಅನುಸರಿಸಬೇಕಿದ್ದ ಪ್ರಕ್ರಿಯೆಗಳಲ್ಲಿ ಇರುವ ಲೋಪಗಳ ಬಗ್ಗೆ ಪ್ರಶ್ನಿಸಿದರು. ಹಾಗೂ ಸುಳ್ಳು ಸಾಕ್ಷ್ಯ ಹೇಳುತ್ತಿರುವುದಾಗಿ ಸವಾಲು ಮಾಡಿದರು. ಸಾಕ್ಷಿಯು ಅದನ್ನು ನಿರಾಕರಿಸಿದರು. ಧ್ವನಿ ಮುದ್ರಿಕೆಗಳ ಕಾಪಿಯನ್ನು ತಮಗೆ ಇನ್ನೂ ಒದಗಿಸದೇ ಇರುವುದರಿಂದ ಸಾಕ್ಷಿಯು ಅದನ್ನು ಧ್ರುಡೀಕರಿಸುವ ಬಗ್ಗೆ ಆರೋಪಿ ಪರ ವಕೀಲರು ತಕರಾರು ಮಾಡಿದರು. ಆದರೆ ಈಗಾಗಲೇ ಧ್ವನಿ ಮುದ್ರಿತ ಕಾಪಿಗಳನ್ನು ಡಿಫೆನ್ಸ್ ವಕೀಲರಿಗೆ ನೀಡದಿದ್ದಲ್ಲಿ ಅದರೊಳಗಿನ ಕಂಟೆಂಟ್ ಅನ್ನು ನ್ಯಾಯಾಲಯ ಮಾನ್ಯ ಮಾಡುವುದಿಲ್ಲ ಎಂದು ನೀಡಿರುವ ಆದೇಶವನ್ನು ನ್ಯಾಯಾಲಯದ ಗಮನಕ್ಕೆ ತರಲಾಯಿತು.

ಪ್ರವೀಣ್ ಕುಮಾರ್: ಕಡಬಗೆರೆ ಗ್ರಾಮ ಪಂಚಾಯತಿ ಸೆಕ್ರೆಟರಿ

ಇವರು ಪೊಲೀಸರ ಕೋರಿಕೆ ಮೇರೆಗೆ ಕಡಬಗರೆ ಗ್ರಾಮ ಪಂಚಾಯತಿಯ ಪಿಡಿಒ ಅವರಿಂದ ನಿರ್ದೇಶಿತನಾಗಿ ಪೊಲೀಸರ ತನಿಖೆಗೆ ಜೂನ್ 7 ರಂದು ಪಂಚರಾಗಿ ಸಹಕರಿಸಿದ ಬಗ್ಗೆ ಸಾಕ್ಷ್ಯ ನುಡಿದರು. ಪೊಲೀಸರೊಂದಿಗೆ ಸೀಗೆ ಹಳ್ಳಿ ಗೇಟ್ ಬಳಿ ಇರುವ ಸುರೇಶ್ ಎಂಬುವರ ಮನೆಯ ಮೊದಲ ಮಹಡಿಯಲ್ಲಿ ಆರೋಪಿ ತಾನು ವಾಸವಿದ್ದುದಾಗಿ ಪೊಲೀಸರು ಕರೆದುಕೊಂಡು ಬಂದಿದ್ದ ಆರೋಪಿ ಅಮೋಲ್ ಕಾಳೆ ಹೇಳಿದ್ದಾಗಿ ಸಾಕ್ಷಿ ನುಡಿದರು. ಆದರೆ ಮನೆಯ ತಪಾಸನೆಯ ಪಂಚನಾಮೆಗೆ ಸಹಿ ಹಾಕಲು ಆರೋಪಿ ನಿರಾಕರಿಸಿದ ಬಗೆಗೂ ಹೇಳಿಕೆ ನೀಡಿದರು. ಆ ನಂತರ ಸಾಯಿ ಲಕ್ಷ್ಮಿ ಲೇ ಔಟ್ ಬಳಿ ಇದ್ದ ಅಂಗಡಿ ಮಳಿಗೆಯಲ್ಲಿ ಒಂದೆರೆಡು ದಿನ ವಾಸವಿದ್ದ ಬಗ್ಗೆ ಆರೋಪಿ ಅಮೋಲ್ ಕಾಳೆ ಹೇಳಿದರೂ ನಂತರ ನಡೆದ ಅಂಗಡಿಯ ಪಂಚನಾಮೆಗೆ ಸಹಿ ಹಾಕಲು ಒಪ್ಪಲಿಲ್ಲ. ಆ ಪ್ರತಿಯೊಂದು ಕಡೆಯಲ್ಲೂ ಪೊಲಿಸರು ತಮ್ಮೆಲ್ಲರನ್ನು ಒಟ್ಟಾಗಿಸಿ ಫ಼ೋಟೊ ತೆಗೆದ ಬಗ್ಗೆ ಹೇಳಿದರು ಮತ್ತು ಅದನ್ನು ಗುರುತಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಅಮೋಲ್ ಕಾಳೆಯನ್ನು ಗುರುತಿಸಿದರು. ಖುದ್ದಾಗಿ ತೋರಿಸಿದರೆ ಸುರೇಶ್ ಅವರನ್ನು ಗುರುತಿಸುವುದಾಗಿ ಹೇಳಿದರು. ಪ್ರಾಸಿಕ್ಯುಷನ್ ವಕೀಲರು ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದು ಹಾಜರು ಮಾಡುವಂತೆ ಆದೇಶಿಸಲು ಕೋರಿದರು. ಮರುದಿನ ಖುದ್ದು ಹಾಜರಾದ ಆರೋಪಿಗಳ ಹತ್ತಿರ ಹೋಗಿ ಸಾಕ್ಷಿಯು ಆರೋಪಿ ಸುರೇಶ್ ಅವರನ್ನು ಗುರುತಿಸಿದರು. ಸಂಬಂಧಪಟ್ಟ ಆರೋಪಿ ತಾನು ಸುರೇಶ್ ಎಂದು ಒಪ್ಪಿಕೊಂಡರು.

ಪಾಟಿ ಸವಾಲು : ಆರೋಪಿ ಪರ ವಕೀಲರು ಸರ್ಕಾರಿ ಸಿಬ್ಬಂದಿಯಾಗಿ ಪೊಲಿಸ್ ಪಂಚನಾಮೆಗೆ ಸಹಕರಿಸುವ ಮುನ್ನ ಪಾಲಿಸ ಬೇಕಾದ ಪ್ರಕ್ರಿಯೆಗಳಲ್ಲಿ ಇರುವ ಲೋಪಗಳ ಬಗ್ಗೆ, ಹಾಗೂ ಅದರಲ್ಲಿ ಇರುವ ಕೈಬರಹ ತಿದ್ದುಪಡಿಗಳ ಬಗ್ಗೆ ಪ್ರಶ್ನಿಸಿದರು. ಸುಳ್ಳು ಸಾಕ್ಷ್ಯ ನುಡಿಯುತ್ತಿದೀರಿ ಎಂದು ಆರೋಪಿಸಿದರು. ಅವೆಲ್ಲವನ್ನು ಸಾಕ್ಷಿಯು ನಿರಾಕರಿಸಿದರು.

ರವಿಕುಮಾರ್: ಡಿವಿಆರ್ ಪಂಚನಾಮೆಯ ಸಾಕ್ಷಿ

ಇವರು ಎಮ್‌ಎನ್‌ಸಿ ಗಳಿಗೆ ಫುಡ್ ಸಪ್ಲೈ ಮಾಡುವ ಬಿಸಿನೆಸ್ ನಲ್ಲಿದ್ದು 2017 ರ ಸೆಪ್ಟೆಬರ್ 5ರ ಮಧ್ಯರಾತ್ರಿ ಟೀ ಕುಡಿಯಲು ರಾಜರಾಜೇಶ್ವರಿ ನಗರದ ಬಳಿ ನಿಂತಿದ್ದಾಗ ಪೊಲೀಸರ ಕೋರಿಕೆ ಮೇರೆಗೆ ಅವರು ವಶಪಡಿಸಿಕೊಂಡಿದ್ದ ಸಿಸಿಟಿವಿಗಳ ಡಿವಿಆರ್ ಗಳ ಪಂಚನಾಮೆಗೆ ಸಾಕ್ಷಿಯಾದ ಬಗ್ಗೆ ಹೇಳಿದರು.

ಪಾಟಿ ಸವಾಲು: ಮುಂದುವರೆದ ಇವರ ಪಾಟಿ ಸವಾಲಿನಲ್ಲಿ ಆರೋಪಿ ಪರ ವಕೀಲರು ಮುಖ್ಯವಾಗಿ ಪ್ರದರ್ಶಿತವಾದ ಡಿವಿಆರ್ ರೆಕಾರ್ಡ್ ನಲ್ಲಿ ಸೆಪ್ಟೆಂಬರ್ 5 ರ ರಾತ್ರಿ 7-7.30 ರವರೆಗಿನ ರೆಕಾರ್ಡಿಂಗ್ ನೋಡಿದಾಗ ಸಮಯ 7.19ಕ್ಕೆ ಗೌರಿಯವರು ಗೇಟನ್ನು ತೆರೆಯುತ್ತಿರುವ ದೃಶ್ಯವಿದೆ. ಆಗ ಅವರ ಮೇಲೆ ದಾಳಿ ನಡೆದಿಲ್ಲ ಅಲ್ಲವೇ ಎಂದು ಕೇಳಿದಾಗ ಹೌದು ಎಂದು ನುಡಿದರು. ಹಾಗೆಯೇ ತಮ್ಮ ವ್ಯವಹಾರಕ್ಕೆ ಪೊಲೀಸರಿಂದ ಸಹಾಯ ಬೇಕಾಗುತ್ತದೆ ಎಂಬ ಕಾರಣಕ್ಕೆ ಸುಳ್ಳು ಸಾಕ್ಷಿ ನುಡಿಯುತ್ತಿದೀರ ಎಂಬ ಆರೋಪವನ್ನು ನಿರಾಕರಿಸಿದರು.

ಪ್ರಕಾಶ್: ಎಸಿಪಿ- 2017 ಸೆಪ್ಟೆಂಬರ್ 5-7 ರವರೆಗೆ ಪ್ರಕರಣದ ತನಿಖಾಧಿಕಾರಿಯಾಗಿದ್ದವರು

ಮುಂದುವರೆದ ಈ ಸಾಕ್ಷಿಯ ವಿಚಾರಣೆಯಲ್ಲಿ ಸಾಕ್ಷಿಯು ತಾವು ವಶಪಡಿಸಿಕೊಂಡ ಡಿವಿಆರ್ ಇಂದ ಪ್ರದರ್ಶಿಸಲಾದ ದೃಶ್ಯದಲ್ಲಿ ಗೌರಿ ಲಂಕೇಶ್ ಗೇಟನ್ನು ತೆರೆಯುತ್ತಿರುವುದು, ಆಗ ಕಾರಿನ ಒಂದು ಸಿಂಗಲ್ ಲೈಟ್ ಆನ್ ಆಗಿರುವುದು ಮತ್ತು ಅಪರಿಚಿತನೊಬ್ಬ ಬಂದು ಗೌರಿ ಲಂಕೇಶ್ ಗೆ ಶೂಟ್ ಮಾಡಿ ಹೋಗುತ್ತಿರುವುದು ಕಂಡುಬರುತ್ತದೆಂದು ಗುರುತಿಸಿದರು. ಮತ್ತು ಈ ಪುರಾವೆಯನ್ನು ದಾಖಲಿಸಲಾಯಿತು….

ಪಾಟಿ ಸವಾಲು: ಆರೋಪಿ ಪರ ವಕೀಲರು ಪ್ರಧಾನವಾಗಿ

ಗೌರಿ ಲಂಕೇಶರ ಸಾವನ್ನು ಖಚಿತ ಪಡಿಸಿಕೊಳ್ಳದೆ ದೇಹವನ್ನು ಶವಾಗಾರಕ್ಕೆ ಕಳಿಸಿದ ಬಗ್ಗೆ,

ಪೊಲೀಸರ ವರದಿಯಲ್ಲಿ ನಮೂದಾಗಿದ್ದ ಸಮಯದಂತೆ ಸಿಸಿಟಿವಿ ಡಿವಿಆರ್ ನಲ್ಲಿ ಇಲ್ಲದಿರುವ ಬಗ್ಗೆ,

ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸದ ಬಗ್ಗೆ ಪ್ರಶ್ನಿಸಿದರು.

ಸಾಕ್ಷಿಯು ತಾನು2017 ರ ಸೆಪ್ಟೆಂಬರ್ 5 ರ ರಾತ್ರಿಯಿಂದ 7 ರ ಬೆಳಿಗ್ಗೆಯವರೆಗೆ ಕೇವಲ ತಾತ್ಕಾಲಿಕ ತನಿಖಾಧಿಕಾರಿಯಾಗಿದ್ದರಿಂದ ನಂತರದ ವಿವರಗಳನ್ನು ಗಮನಿಸದ ಬಗ್ಗೆ ಮತ್ತು ಪೊಲೀಸ್ ನಿಯಮಾವಳಿಗಳ ಪ್ರಕಾರ ನಡೆದುಕೊಂಡಿರುವ ಬಗ್ಗೆ ಸಾಕ್ಷಿ ನುಡಿದರು. ಸಾಮಾನ್ಯವಾಗಿ ಡಿವಿಅರ್ ನಲ್ಲಿ ನಮೂದಾಗಿರುವ ಸಮಯಕ್ಕೂ ನೈಜ ಸಮಯಕ್ಕೂ ವ್ಯತ್ಯಾಸವಿರುವ ಬಗ್ಗೆಯೂ ಹೇಳಿದರು.

ಮತ್ತು ಗೌರಿಯವರ ಸಾವನ್ನು ಖಚಿತಪಡಿಸಿಕೊಳ್ಳದೆ ಶವಾಗಾರಕ್ಕೆ ಕಳಿಸಲಾಯಿತೆಂಬ ಮತ್ತು ಸುಳ್ಳು ಸಾಕ್ಷಿ ನುಡಿಯುತ್ತಿದ್ದೇನೆ ಎಂಬ ಆರೋಪವನ್ನು ನಿರಾಕರಿಸಿದರು.

ಈ ಸಾಕ್ಷಿಯ ಪಾಟಿ ಸವಾಲು ಮುಂದುವರೆಯಲಿದೆ.
ಮುಂದಿನ ವಿಚಾರಣೆ 2023ರ ಮೇ 8 ಕ್ಕೆ ನಿಗದಿಯಾಗಿದೆ.

ಈ ಮಧ್ಯೆ ಗೌರಿಯವರು ಶೂಟ್ ಆದ ದೃಷ್ಯಾವಳಿಯನ್ನು ಕಾರಾಗೃಹದಲ್ಲಿರುವ ಆರೋಪಿಗಳಿಗೆ ತೋರಿಸಿ ಅವರೊಂದಿಗೆ ಸಮಾಲೋಚನೆ ಮಾಡಲು ಆರೋಪಿ ಪರ ವಕೀಲರು ಅವಕಾಶ ಕೋರಿದರು. ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಅವರಿಗೆ ಅವಕಾಶ ನೀಡಿತು.

ಈಗಾಗಲೇ ತಿಳಿಸಿದಂತೆ ಪೊಲೀಸ್ ಅಧಿಕಾರಿಗಳ ವಿಶೇಷ ಕೋರಿಕೆಯ ಮೇರೆಗೆ ಕಳೆದ ತಿಂಗಳಿಂದ ಗೌರಿ ಲಂಕೇಶ್ ಹತ್ಯಾ ವಿಚಾರಣೆಯು ಇನ್- ಕ್ಯಾಮೆರಾ – ಗೋಪ್ಯವಾಗಿ ನಡೆಯುತ್ತಿದೆ. ಅಂದರೆ ವಿಚಾರಣೆ ನಡೆಯುವಾಗ ಸಾರ್ವಜನಿಕರಿಗೆ ಮತ್ತು ಪತ್ರಕರ್ತರಿಗೆ ಪ್ರವೇಶವಿರುವುದಿಲ್ಲ.

ಈ ವರದಿಯನ್ನು, ಕೋರ್ಟ್ ವೆಬ್ ಸೈಟಿನಲ್ಲಿರುವ ಸಾಕ್ಷಿಗಳ deposition ಗಳನ್ನೂ ಮತ್ತು ಆರೋಪಿ ಪರ ವಕೀಲರಾದ ಕೃಷ್ಣಮೂರ್ತಿ ಪಿ. ಮತ್ತು ಸರ್ಕಾರಿ ವಕೀಲರಾದ ಬಾಲನ್ ಅವರು ಕೊಟ್ಟ ಮಾಹಿತಿಗಳನ್ನು ಆಧರಿಸಿ ಸಿದ್ಧಪಡಿಸಲಾಗಿದೆ.

  • ಶಿವಸುಂದರ್

ಇದನ್ನೂ ಓದಿ: ‘ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ’: ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...