Homeಕರ್ನಾಟಕಮಾರ್ಚ್ 2023ರ ಗೌರಿ ಲಂಕೇಶ್ ಹತ್ಯಾ ಪ್ರಕರಣ ವಿಚಾರಣಾ ವರದಿ

ಮಾರ್ಚ್ 2023ರ ಗೌರಿ ಲಂಕೇಶ್ ಹತ್ಯಾ ಪ್ರಕರಣ ವಿಚಾರಣಾ ವರದಿ

- Advertisement -
- Advertisement -

ಗೌರಿ ಲಂಕೇಶ್ ಹತ್ಯಾ ಪ್ರಕರಣದ ಮಾರ್ಚ್ ತಿಂಗಳ ವಿಚಾರಣೆಯು ಮಾರ್ಚ್ 13 ರಿಂದ 17 ರವರೆಗೆ ನಡೆಯಿತು. ಮೂವರು ಸಾಕ್ಷಿಗಳ ಪ್ರಧಾನ ಹೇಳಿಕೆ ಮತ್ತದರ ಮೇಲೆ ಆರೋಪಿ ಪರ ವಕೀಲರ ಪಾಟಿ ಸವಾಲುಗಳು ನಡೆದವು, ಹಾಗೂ ಬಾಕಿ ಉಳಿದಿದ್ದ ಇನ್ನಿಬ್ಬರು ಸಾಕ್ಷಿಗಳ ಹೇಳಿಕೆ ಮತ್ತು ಪಾಟಿ ಸವಾಲುಗಳು ಮುಂದುವರೆದವು.

ಬಾಲರಾಜ್:  CI- SIT ಟೀಮಿನ ಸದಸ್ಯರು.

ಇವರು 2018 ರ ಮೇ 23 ರಂದು ಆರೋಪಿ ಸುಜಿತ್ ಕುಮಾರ್ ಉಡುಪಿಯಲ್ಲಿ ವಾಸವಿದ್ದ ಮನೆಯನ್ನು ಪಂಚರ ಎದುರಿಗೆ ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿ ತಪಾಸಣೆ ಮಾಡಿದ್ದರ ಬಗ್ಗೆ ಸಾಕ್ಷಿ ನುಡಿದರು. ಸುಜಿತ್ ಮನೆಯಲ್ಲಿ ಸುಜಿತ್ ಓಟರ್ ಕಾರ್ಡ್, ಕರ್ನಾಟಕ-ಮಹಾರಾಷ್ಟ್ರ ಭೂಪಟ, ಸನಾತನ ಸಂಸ್ಥೆಯ ಅಂಜಲಿ ಗಾಡ್ಗಿಲ್ ಎಂಬುವರು ಬರೆದ ಲೇಖನದ ಜೆರಾಕ್ಸ್ ಪ್ರತಿ, 18 ಮೊಬೈಲ್ ಸೆಟ್ಟುಗಳು ಮತ್ತು 15 ಮೊಬೈಲ್ ಪೌಚುಗಳು, ಹಾಗೂ ಮೂರು ಮೊಬೈಲ್ ಖರೀದಿಗೆ ಸಂಬಧಿಸಿದ ರಸೀದಿಗಳನ್ನು ವಶಪಡಿಸಿಕೊಂಡ ಬಗ್ಗೆ ಸಾಕ್ಷಿ ನುಡಿದರು. ಆ ದಿನ ರಸೀದೆಯಲ್ಲಿ ಇದ್ದ ವಿಳಾಸದ ಮೇರೆಗೆ ಉಡುಪಿ ಬಸ್‌ ಸ್ಟ್ಯಾಂಡ್‌ನಲ್ಲಿದ ಐ ಮೊಬೈಲ್ ಅಂಗಡಿ ಮತ್ತು ಮಣಿಪಾಲದ ಸಿಟಿ ಪಾಯಿಂಟ್ ಮೊಬೈಲ್ ಅಂಗಡಿಯಲ್ಲಿ ಮೊಬೈಲ್ ಖರೀದಿಯ ಮೂಲ ರಸೀದಿಯನ್ನು ವಶಪಡಿಸಿಕೊಂಡ ಬಗ್ಗೆ ಸಾಕ್ಷಿ ನುಡಿದರು.

ಹಾಗೆಯೇ 2018 ರ ಜುಲೈ 21 ರಂದು ಹುಬ್ಬಳ್ಳಿಗೆ ಹೋಗಿ ಬಾತ್ಮೀದಾರದ ಸಹಕಾರದೊಂದಿಗೆ ಆರೋಪಿಗಳಾದ ಅಮಿತ್ ಬಡ್ಡಿ ಮತ್ತು ಗಣೇಶ್ ಮಿಸ್ಕಿನ್ ಅವರುಗಳನ್ನು ಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಿ, ಅಲ್ಲಿಂದ ಅವರನ್ನು ಬೆಂಗಳೂರಿಗೆ ಕರೆತಂದ ಬಗ್ಗೆಯೂ ಸಾಕ್ಷ್ಯ ನುಡಿದರು. ಹಾಗೂ ಸದರಿ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುತಿಸಿದರು.

ಪಾಟಿ ಸವಾಲು: ಆರೋಪಿ ಪರ ವಕೀಲ ಕೃಷ್ಣಮೂರ್ತಿಯವರು ಸಾಕ್ಷಿಯ ತಪಾಸಣೆ ಮಾಡುವಾಗ, ದಾಖಲು ಮಾಡುವಾಗ ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸದ ಬಗ್ಗೆ, ತಾವು ಸಹಿ ಮಾಡಿ ಪಡೆದುಕೊಂಡ ನೋಟೀಸಿನಲಿ ಕೈಬರಹದಿಂದ ಕೆಲವು ತಿದ್ದುಪಡಿ ಮಾಡಿರುವ ಬಗ್ಗೆ, ಹಾಗೂ ಸಾಕ್ಷಿಯ ಮೇಲೆ ಬೇರೆ ಪ್ರಕರಣದಲ್ಲಿ ಆರೋಪವಿರುವ ಬಗ್ಗೆ ಹಾಗೂ ಸಾಮಾನ್ಯವಾಗಿ ತಮ್ಮ ವ್ಯಾಪ್ತಿಯಲ್ಲಿ ಇಲ್ಲದ ಪ್ರಕರಣಗಳಲ್ಲಿ ತಲೆದೂರಿಸುತ್ತಾರೆ ಎಂಬ ಆರೋಪದ ಬಗ್ಗೆ ಪಾಟಿ ಸವಾಲು ಮಾಡಿದರು. ಹಾಗೂ ಅವರು ನುಡಿದ ಸಾಕ್ಷಿಗಳೆಲ್ಲವೂ ಸುಳ್ಳು ಎಂದು ಸವಾಲು ಹಾಕಿದರು. ಸಾಕ್ಷಿಯು ಅಲ್ಲಲ್ಲಿ ಕೈಬರಹದ ತಿದ್ದುಪಡಿ ಮಾಡಿರುವ ಬಗ್ಗೆ ಹಾಗೂ ಪಡೆದುಕೊಂಡ ನೋಟೀಸಿನಲ್ಲಿ ಕೆಲವು ನಿರ್ದಿಷ್ಟ ಸೂಚನೆಗಳು ಇಲ್ಲದಿರುವ ಬಗ್ಗೆ ಒಪ್ಪಿಕೊಂಡರೂ ಉಳಿದ ಎಲ್ಲಾ ಆರೋಪಗಳನ್ನು ನಿರಾಕರಿಸಿದರು.

ಮುಕುಂದ ವಿ: ಬಿಬಿಎಂಪಿ ಯಲ್ಲಿ ಎಸ್‌ಡಿಎ

ಇವರು 2018 ರ ಜೂನ್ 7 ರಂದು ಪೊಲೀಸರ ಕೋರಿಕೆ ಮೇರೆಗೆ ಮೇಲಧಿಕಾರಿಗಳು ಆದೇಶಿಸಿದ್ದರಿಂದ ತನಿಖೆಯಲ್ಲಿ ಪಂಚರಾಗಿ ಸಹಕರಿಸಿದ ಬಗ್ಗೆ ಸಾಕ್ಷಿ ನುಡಿದರು. ಜೂನ್ 7 ರಂದು ಸಿಐಡಿ ಕಚೇರಿಯಲ್ಲಿ ಆರೋಪಿ ಸುಜಿತ್ ಕುಮಾರ್ ಅವರ ಧ್ವನಿ ಮಾದರಿ ಮತ್ತು ಆರೋಪಿ ಸುಜಿತ್ ಕುಮಾರ್ ಮತ್ತು ಮತ್ತೊಬ್ಬ ಆರೋಪಿ ಮನೋಹರ್ ಅವರ ಕೈಬರಹದ ಮಾದರಿಗಳನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿ ಪೊಲೀಸರು ಪಡೆದುಕೊಂಡ ಬಗ್ಗೆ ಸಾಕ್ಷಿ ನುಡಿದರು. ಅದಕ್ಕೆ ಸಬಂಧಿಸಿದಂತೆ ತಾವು ಧೃಢಪಡಿಸಿ ನೀಡಿದ ಹೇಳಿಕೆ ಮತ್ತು ಸಹಿಗಳನ್ನು ಗುರುತಿಸಿದರು. ಮತ್ತು ವಿಡಿಯೋ ಕಾನ್ಫರೆನ್ಸಿನ ಮೂಲಕ ಆರೋಪಿ ಸುಜಿತ್ ಮತ್ತು ಮನೋಹರ್ ಅವರನ್ನು ಗುರುತಿಸಿದರು.

ಪಾಟಿ ಸವಾಲು: ಆರೋಪಿ ಪರ ವಕೀಲರು ಸಾಕ್ಷಿಯು ಪಂಚರಾಗಿ ಸಹಕರಿಸಲು ಅನುಸರಿಸಬೇಕಿದ್ದ ಪ್ರಕ್ರಿಯೆಗಳಲ್ಲಿ ಇರುವ ಲೋಪಗಳ ಬಗ್ಗೆ ಪ್ರಶ್ನಿಸಿದರು. ಹಾಗೂ ಸುಳ್ಳು ಸಾಕ್ಷ್ಯ ಹೇಳುತ್ತಿರುವುದಾಗಿ ಸವಾಲು ಮಾಡಿದರು. ಸಾಕ್ಷಿಯು ಅದನ್ನು ನಿರಾಕರಿಸಿದರು. ಧ್ವನಿ ಮುದ್ರಿಕೆಗಳ ಕಾಪಿಯನ್ನು ತಮಗೆ ಇನ್ನೂ ಒದಗಿಸದೇ ಇರುವುದರಿಂದ ಸಾಕ್ಷಿಯು ಅದನ್ನು ಧ್ರುಡೀಕರಿಸುವ ಬಗ್ಗೆ ಆರೋಪಿ ಪರ ವಕೀಲರು ತಕರಾರು ಮಾಡಿದರು. ಆದರೆ ಈಗಾಗಲೇ ಧ್ವನಿ ಮುದ್ರಿತ ಕಾಪಿಗಳನ್ನು ಡಿಫೆನ್ಸ್ ವಕೀಲರಿಗೆ ನೀಡದಿದ್ದಲ್ಲಿ ಅದರೊಳಗಿನ ಕಂಟೆಂಟ್ ಅನ್ನು ನ್ಯಾಯಾಲಯ ಮಾನ್ಯ ಮಾಡುವುದಿಲ್ಲ ಎಂದು ನೀಡಿರುವ ಆದೇಶವನ್ನು ನ್ಯಾಯಾಲಯದ ಗಮನಕ್ಕೆ ತರಲಾಯಿತು.

ಪ್ರವೀಣ್ ಕುಮಾರ್: ಕಡಬಗೆರೆ ಗ್ರಾಮ ಪಂಚಾಯತಿ ಸೆಕ್ರೆಟರಿ

ಇವರು ಪೊಲೀಸರ ಕೋರಿಕೆ ಮೇರೆಗೆ ಕಡಬಗರೆ ಗ್ರಾಮ ಪಂಚಾಯತಿಯ ಪಿಡಿಒ ಅವರಿಂದ ನಿರ್ದೇಶಿತನಾಗಿ ಪೊಲೀಸರ ತನಿಖೆಗೆ ಜೂನ್ 7 ರಂದು ಪಂಚರಾಗಿ ಸಹಕರಿಸಿದ ಬಗ್ಗೆ ಸಾಕ್ಷ್ಯ ನುಡಿದರು. ಪೊಲೀಸರೊಂದಿಗೆ ಸೀಗೆ ಹಳ್ಳಿ ಗೇಟ್ ಬಳಿ ಇರುವ ಸುರೇಶ್ ಎಂಬುವರ ಮನೆಯ ಮೊದಲ ಮಹಡಿಯಲ್ಲಿ ಆರೋಪಿ ತಾನು ವಾಸವಿದ್ದುದಾಗಿ ಪೊಲೀಸರು ಕರೆದುಕೊಂಡು ಬಂದಿದ್ದ ಆರೋಪಿ ಅಮೋಲ್ ಕಾಳೆ ಹೇಳಿದ್ದಾಗಿ ಸಾಕ್ಷಿ ನುಡಿದರು. ಆದರೆ ಮನೆಯ ತಪಾಸನೆಯ ಪಂಚನಾಮೆಗೆ ಸಹಿ ಹಾಕಲು ಆರೋಪಿ ನಿರಾಕರಿಸಿದ ಬಗೆಗೂ ಹೇಳಿಕೆ ನೀಡಿದರು. ಆ ನಂತರ ಸಾಯಿ ಲಕ್ಷ್ಮಿ ಲೇ ಔಟ್ ಬಳಿ ಇದ್ದ ಅಂಗಡಿ ಮಳಿಗೆಯಲ್ಲಿ ಒಂದೆರೆಡು ದಿನ ವಾಸವಿದ್ದ ಬಗ್ಗೆ ಆರೋಪಿ ಅಮೋಲ್ ಕಾಳೆ ಹೇಳಿದರೂ ನಂತರ ನಡೆದ ಅಂಗಡಿಯ ಪಂಚನಾಮೆಗೆ ಸಹಿ ಹಾಕಲು ಒಪ್ಪಲಿಲ್ಲ. ಆ ಪ್ರತಿಯೊಂದು ಕಡೆಯಲ್ಲೂ ಪೊಲಿಸರು ತಮ್ಮೆಲ್ಲರನ್ನು ಒಟ್ಟಾಗಿಸಿ ಫ಼ೋಟೊ ತೆಗೆದ ಬಗ್ಗೆ ಹೇಳಿದರು ಮತ್ತು ಅದನ್ನು ಗುರುತಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಅಮೋಲ್ ಕಾಳೆಯನ್ನು ಗುರುತಿಸಿದರು. ಖುದ್ದಾಗಿ ತೋರಿಸಿದರೆ ಸುರೇಶ್ ಅವರನ್ನು ಗುರುತಿಸುವುದಾಗಿ ಹೇಳಿದರು. ಪ್ರಾಸಿಕ್ಯುಷನ್ ವಕೀಲರು ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದು ಹಾಜರು ಮಾಡುವಂತೆ ಆದೇಶಿಸಲು ಕೋರಿದರು. ಮರುದಿನ ಖುದ್ದು ಹಾಜರಾದ ಆರೋಪಿಗಳ ಹತ್ತಿರ ಹೋಗಿ ಸಾಕ್ಷಿಯು ಆರೋಪಿ ಸುರೇಶ್ ಅವರನ್ನು ಗುರುತಿಸಿದರು. ಸಂಬಂಧಪಟ್ಟ ಆರೋಪಿ ತಾನು ಸುರೇಶ್ ಎಂದು ಒಪ್ಪಿಕೊಂಡರು.

ಪಾಟಿ ಸವಾಲು : ಆರೋಪಿ ಪರ ವಕೀಲರು ಸರ್ಕಾರಿ ಸಿಬ್ಬಂದಿಯಾಗಿ ಪೊಲಿಸ್ ಪಂಚನಾಮೆಗೆ ಸಹಕರಿಸುವ ಮುನ್ನ ಪಾಲಿಸ ಬೇಕಾದ ಪ್ರಕ್ರಿಯೆಗಳಲ್ಲಿ ಇರುವ ಲೋಪಗಳ ಬಗ್ಗೆ, ಹಾಗೂ ಅದರಲ್ಲಿ ಇರುವ ಕೈಬರಹ ತಿದ್ದುಪಡಿಗಳ ಬಗ್ಗೆ ಪ್ರಶ್ನಿಸಿದರು. ಸುಳ್ಳು ಸಾಕ್ಷ್ಯ ನುಡಿಯುತ್ತಿದೀರಿ ಎಂದು ಆರೋಪಿಸಿದರು. ಅವೆಲ್ಲವನ್ನು ಸಾಕ್ಷಿಯು ನಿರಾಕರಿಸಿದರು.

ರವಿಕುಮಾರ್: ಡಿವಿಆರ್ ಪಂಚನಾಮೆಯ ಸಾಕ್ಷಿ

ಇವರು ಎಮ್‌ಎನ್‌ಸಿ ಗಳಿಗೆ ಫುಡ್ ಸಪ್ಲೈ ಮಾಡುವ ಬಿಸಿನೆಸ್ ನಲ್ಲಿದ್ದು 2017 ರ ಸೆಪ್ಟೆಬರ್ 5ರ ಮಧ್ಯರಾತ್ರಿ ಟೀ ಕುಡಿಯಲು ರಾಜರಾಜೇಶ್ವರಿ ನಗರದ ಬಳಿ ನಿಂತಿದ್ದಾಗ ಪೊಲೀಸರ ಕೋರಿಕೆ ಮೇರೆಗೆ ಅವರು ವಶಪಡಿಸಿಕೊಂಡಿದ್ದ ಸಿಸಿಟಿವಿಗಳ ಡಿವಿಆರ್ ಗಳ ಪಂಚನಾಮೆಗೆ ಸಾಕ್ಷಿಯಾದ ಬಗ್ಗೆ ಹೇಳಿದರು.

ಪಾಟಿ ಸವಾಲು: ಮುಂದುವರೆದ ಇವರ ಪಾಟಿ ಸವಾಲಿನಲ್ಲಿ ಆರೋಪಿ ಪರ ವಕೀಲರು ಮುಖ್ಯವಾಗಿ ಪ್ರದರ್ಶಿತವಾದ ಡಿವಿಆರ್ ರೆಕಾರ್ಡ್ ನಲ್ಲಿ ಸೆಪ್ಟೆಂಬರ್ 5 ರ ರಾತ್ರಿ 7-7.30 ರವರೆಗಿನ ರೆಕಾರ್ಡಿಂಗ್ ನೋಡಿದಾಗ ಸಮಯ 7.19ಕ್ಕೆ ಗೌರಿಯವರು ಗೇಟನ್ನು ತೆರೆಯುತ್ತಿರುವ ದೃಶ್ಯವಿದೆ. ಆಗ ಅವರ ಮೇಲೆ ದಾಳಿ ನಡೆದಿಲ್ಲ ಅಲ್ಲವೇ ಎಂದು ಕೇಳಿದಾಗ ಹೌದು ಎಂದು ನುಡಿದರು. ಹಾಗೆಯೇ ತಮ್ಮ ವ್ಯವಹಾರಕ್ಕೆ ಪೊಲೀಸರಿಂದ ಸಹಾಯ ಬೇಕಾಗುತ್ತದೆ ಎಂಬ ಕಾರಣಕ್ಕೆ ಸುಳ್ಳು ಸಾಕ್ಷಿ ನುಡಿಯುತ್ತಿದೀರ ಎಂಬ ಆರೋಪವನ್ನು ನಿರಾಕರಿಸಿದರು.

ಪ್ರಕಾಶ್: ಎಸಿಪಿ- 2017 ಸೆಪ್ಟೆಂಬರ್ 5-7 ರವರೆಗೆ ಪ್ರಕರಣದ ತನಿಖಾಧಿಕಾರಿಯಾಗಿದ್ದವರು

ಮುಂದುವರೆದ ಈ ಸಾಕ್ಷಿಯ ವಿಚಾರಣೆಯಲ್ಲಿ ಸಾಕ್ಷಿಯು ತಾವು ವಶಪಡಿಸಿಕೊಂಡ ಡಿವಿಆರ್ ಇಂದ ಪ್ರದರ್ಶಿಸಲಾದ ದೃಶ್ಯದಲ್ಲಿ ಗೌರಿ ಲಂಕೇಶ್ ಗೇಟನ್ನು ತೆರೆಯುತ್ತಿರುವುದು, ಆಗ ಕಾರಿನ ಒಂದು ಸಿಂಗಲ್ ಲೈಟ್ ಆನ್ ಆಗಿರುವುದು ಮತ್ತು ಅಪರಿಚಿತನೊಬ್ಬ ಬಂದು ಗೌರಿ ಲಂಕೇಶ್ ಗೆ ಶೂಟ್ ಮಾಡಿ ಹೋಗುತ್ತಿರುವುದು ಕಂಡುಬರುತ್ತದೆಂದು ಗುರುತಿಸಿದರು. ಮತ್ತು ಈ ಪುರಾವೆಯನ್ನು ದಾಖಲಿಸಲಾಯಿತು….

ಪಾಟಿ ಸವಾಲು: ಆರೋಪಿ ಪರ ವಕೀಲರು ಪ್ರಧಾನವಾಗಿ

ಗೌರಿ ಲಂಕೇಶರ ಸಾವನ್ನು ಖಚಿತ ಪಡಿಸಿಕೊಳ್ಳದೆ ದೇಹವನ್ನು ಶವಾಗಾರಕ್ಕೆ ಕಳಿಸಿದ ಬಗ್ಗೆ,

ಪೊಲೀಸರ ವರದಿಯಲ್ಲಿ ನಮೂದಾಗಿದ್ದ ಸಮಯದಂತೆ ಸಿಸಿಟಿವಿ ಡಿವಿಆರ್ ನಲ್ಲಿ ಇಲ್ಲದಿರುವ ಬಗ್ಗೆ,

ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸದ ಬಗ್ಗೆ ಪ್ರಶ್ನಿಸಿದರು.

ಸಾಕ್ಷಿಯು ತಾನು2017 ರ ಸೆಪ್ಟೆಂಬರ್ 5 ರ ರಾತ್ರಿಯಿಂದ 7 ರ ಬೆಳಿಗ್ಗೆಯವರೆಗೆ ಕೇವಲ ತಾತ್ಕಾಲಿಕ ತನಿಖಾಧಿಕಾರಿಯಾಗಿದ್ದರಿಂದ ನಂತರದ ವಿವರಗಳನ್ನು ಗಮನಿಸದ ಬಗ್ಗೆ ಮತ್ತು ಪೊಲೀಸ್ ನಿಯಮಾವಳಿಗಳ ಪ್ರಕಾರ ನಡೆದುಕೊಂಡಿರುವ ಬಗ್ಗೆ ಸಾಕ್ಷಿ ನುಡಿದರು. ಸಾಮಾನ್ಯವಾಗಿ ಡಿವಿಅರ್ ನಲ್ಲಿ ನಮೂದಾಗಿರುವ ಸಮಯಕ್ಕೂ ನೈಜ ಸಮಯಕ್ಕೂ ವ್ಯತ್ಯಾಸವಿರುವ ಬಗ್ಗೆಯೂ ಹೇಳಿದರು.

ಮತ್ತು ಗೌರಿಯವರ ಸಾವನ್ನು ಖಚಿತಪಡಿಸಿಕೊಳ್ಳದೆ ಶವಾಗಾರಕ್ಕೆ ಕಳಿಸಲಾಯಿತೆಂಬ ಮತ್ತು ಸುಳ್ಳು ಸಾಕ್ಷಿ ನುಡಿಯುತ್ತಿದ್ದೇನೆ ಎಂಬ ಆರೋಪವನ್ನು ನಿರಾಕರಿಸಿದರು.

ಈ ಸಾಕ್ಷಿಯ ಪಾಟಿ ಸವಾಲು ಮುಂದುವರೆಯಲಿದೆ.
ಮುಂದಿನ ವಿಚಾರಣೆ 2023ರ ಮೇ 8 ಕ್ಕೆ ನಿಗದಿಯಾಗಿದೆ.

ಈ ಮಧ್ಯೆ ಗೌರಿಯವರು ಶೂಟ್ ಆದ ದೃಷ್ಯಾವಳಿಯನ್ನು ಕಾರಾಗೃಹದಲ್ಲಿರುವ ಆರೋಪಿಗಳಿಗೆ ತೋರಿಸಿ ಅವರೊಂದಿಗೆ ಸಮಾಲೋಚನೆ ಮಾಡಲು ಆರೋಪಿ ಪರ ವಕೀಲರು ಅವಕಾಶ ಕೋರಿದರು. ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಅವರಿಗೆ ಅವಕಾಶ ನೀಡಿತು.

ಈಗಾಗಲೇ ತಿಳಿಸಿದಂತೆ ಪೊಲೀಸ್ ಅಧಿಕಾರಿಗಳ ವಿಶೇಷ ಕೋರಿಕೆಯ ಮೇರೆಗೆ ಕಳೆದ ತಿಂಗಳಿಂದ ಗೌರಿ ಲಂಕೇಶ್ ಹತ್ಯಾ ವಿಚಾರಣೆಯು ಇನ್- ಕ್ಯಾಮೆರಾ – ಗೋಪ್ಯವಾಗಿ ನಡೆಯುತ್ತಿದೆ. ಅಂದರೆ ವಿಚಾರಣೆ ನಡೆಯುವಾಗ ಸಾರ್ವಜನಿಕರಿಗೆ ಮತ್ತು ಪತ್ರಕರ್ತರಿಗೆ ಪ್ರವೇಶವಿರುವುದಿಲ್ಲ.

ಈ ವರದಿಯನ್ನು, ಕೋರ್ಟ್ ವೆಬ್ ಸೈಟಿನಲ್ಲಿರುವ ಸಾಕ್ಷಿಗಳ deposition ಗಳನ್ನೂ ಮತ್ತು ಆರೋಪಿ ಪರ ವಕೀಲರಾದ ಕೃಷ್ಣಮೂರ್ತಿ ಪಿ. ಮತ್ತು ಸರ್ಕಾರಿ ವಕೀಲರಾದ ಬಾಲನ್ ಅವರು ಕೊಟ್ಟ ಮಾಹಿತಿಗಳನ್ನು ಆಧರಿಸಿ ಸಿದ್ಧಪಡಿಸಲಾಗಿದೆ.

  • ಶಿವಸುಂದರ್

ಇದನ್ನೂ ಓದಿ: ‘ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ’: ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...