HomeಚಳವಳಿAFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

AFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

- Advertisement -
- Advertisement -

ನಾಗಾಲ್ಯಾಂಡ್‌ನಿಂದ ವಿವಾದಿತ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (AFSPA) ಅನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಸಮಾನ ಮನಸ್ಕ ನಾಗರಿಕರು ಜ.10 ಮತ್ತು 11 (ಸೋಮವಾರ, ಮಂಗಳವಾರ) ರ್‍ಯಾಲಿ ಆಯೋಜಿಸಿದ್ದಾರೆ.

ಈಗಾಗಲೇ ಈ ಕಾನೂನನ್ನು ಭಾಗಶಃ ಅಥವಾ ಸಂಪೂರ್ಣವಾಗಿ ತೆಗೆದುಹಾಕಬಹುದೇ ಎಂದು ಅಧ್ಯಯನ ಮಾಡಲು ಒಕ್ಕೂಟ ಸರ್ಕಾರ ಸಮಿತಿಯನ್ನು ರಚಿಸಿದೆ.

ನಾಗಾಲ್ಯಾಂಡ್ ನಾಗರಿಕರು ಕರೆದಿರುವ “AFSPA ವಿರುದ್ಧದ ಮೆರವಣಿಗೆ ” ಸೋಮವಾರ ವಾಣಿಜ್ಯ ಕೇಂದ್ರವಾದ ದಿಮಾಪುರ್‌ನಿಂದ ಪ್ರಾರಂಭವಾಗಲಿದೆ. ಸೂಪರ್‌ಮಾರ್ಕೆಟ್ ದಿಮಾಪುರ್‌ನಿಂದ ರಾಜಭವನ ಕೊಹಿಮಾವರೆಗೆ ಎರಡು ದಿನಗಳಲ್ಲಿ ಸುಮಾರು 70 ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಅಲ್ಲಿ ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತದೆ.

ಇದೊಂದು ಸಾಮೂಹಿಕವಾಗಿ ಸಾರ್ವಜನಿಕರು ಆರಂಭಿಸಿರುವ ಪ್ರತಿಭಟನಾ ಮೆರವಣಿಗೆಯಾಗಿದ್ದು, ಯಾವುದೇ ನಾಗರಿಕ ಸಮಾಜ ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿಲ್ಲ ಎಂದು ರ್‍ಯಾಲಿ ಸಂಘಟಕರೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

“AFSPA ಅಡಿಯಲ್ಲಿ, ಬಹಳಷ್ಟು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ. ಓಟಿಂಗ್‌ನಲ್ಲಿ ನಡೆದ ನಾಗರಿಕರ ಹತ್ಯಾಕಾಂಡವು ಈ ಪೈಶಾಚಿಕ ಕೃತ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮತ್ತೆ ನೆನಪಿಸಿದೆ. ನಾವು ಭದ್ರತಾ ಪಡೆಗಳ ಹಿಂದಿನ ಎಲ್ಲಾ ದೌರ್ಜನ್ಯಗಳ ಸಂತ್ರಸ್ತರನ್ನು ಸಹ ನೆನಪಿಸಿಕೊಳ್ಳುತ್ತೇವೆ. ಹತ್ಯಾಕಾಂಡದಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಎಎಫ್‌ಎಸ್‌ಪಿಎಯನ್ನು ಭಾಗಶಃ ತೆಗೆದುಹಾಕುವುದರಿಂದ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ” ಎಂದು ಮೆರವಣಿಗೆಯಲ್ಲಿ ಭಾಗವಹಿಸಲಿರುವ ಸಾಮಾಜಿಕ ಕಾರ್ಯಕರ್ತ ಕೆವಿಥೋ ಕೆರಾ ಅವರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ಸರ್ಕಾರವು ಹೊಸ ಕೊರೊನಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಭಾಗವಹಿಸುವವರ ಸಂಖ್ಯೆಯನ್ನು 200 ಕ್ಕೆ ಮಿತಿಗೊಳಿಸಲು ನಮ್ಮಗೆ ಹೇಳಿದೆ. ಆದರೆ ನಾವು ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ನಾಗಾಲ್ಯಾಂಡ್‌ನ ಹೊರಗಿನ ಜನರು ಸಹ ನಮ್ಮೊಂದಿಗೆ ಸೇರಲು ಬಯಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸುವವರು ತಮ್ಮ ಮಲಗುವ ಚೀಲಗಳು, ಟಾರ್ಚ್‌ಗಳು, ಅಗತ್ಯ ಗ್ಯಾಜೆಟ್‌ಗಳು ಮತ್ತು ಪರಿಕರಗಳನ್ನು ಜೊತೆಗೆ ಒಯ್ಯುಲಿದ್ದಾರೆ. ಯಾವುದೇ ತುರ್ತುಯನ್ನು ಎದುರಿಸಲು ಆಂಬ್ಯುಲೆನ್ಸ್ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ 13 ನಾಗರಿಕರ ಹತ್ಯೆ ಪ್ರರಕಣದ ಹಿನ್ನೆಲೆಯಲ್ಲಿ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದರು.


ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...