HomeಚಳವಳಿAFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

AFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

- Advertisement -
- Advertisement -

ನಾಗಾಲ್ಯಾಂಡ್‌ನಿಂದ ವಿವಾದಿತ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (AFSPA) ಅನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಸಮಾನ ಮನಸ್ಕ ನಾಗರಿಕರು ಜ.10 ಮತ್ತು 11 (ಸೋಮವಾರ, ಮಂಗಳವಾರ) ರ್‍ಯಾಲಿ ಆಯೋಜಿಸಿದ್ದಾರೆ.

ಈಗಾಗಲೇ ಈ ಕಾನೂನನ್ನು ಭಾಗಶಃ ಅಥವಾ ಸಂಪೂರ್ಣವಾಗಿ ತೆಗೆದುಹಾಕಬಹುದೇ ಎಂದು ಅಧ್ಯಯನ ಮಾಡಲು ಒಕ್ಕೂಟ ಸರ್ಕಾರ ಸಮಿತಿಯನ್ನು ರಚಿಸಿದೆ.

ನಾಗಾಲ್ಯಾಂಡ್ ನಾಗರಿಕರು ಕರೆದಿರುವ “AFSPA ವಿರುದ್ಧದ ಮೆರವಣಿಗೆ ” ಸೋಮವಾರ ವಾಣಿಜ್ಯ ಕೇಂದ್ರವಾದ ದಿಮಾಪುರ್‌ನಿಂದ ಪ್ರಾರಂಭವಾಗಲಿದೆ. ಸೂಪರ್‌ಮಾರ್ಕೆಟ್ ದಿಮಾಪುರ್‌ನಿಂದ ರಾಜಭವನ ಕೊಹಿಮಾವರೆಗೆ ಎರಡು ದಿನಗಳಲ್ಲಿ ಸುಮಾರು 70 ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಅಲ್ಲಿ ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತದೆ.

ಇದೊಂದು ಸಾಮೂಹಿಕವಾಗಿ ಸಾರ್ವಜನಿಕರು ಆರಂಭಿಸಿರುವ ಪ್ರತಿಭಟನಾ ಮೆರವಣಿಗೆಯಾಗಿದ್ದು, ಯಾವುದೇ ನಾಗರಿಕ ಸಮಾಜ ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿಲ್ಲ ಎಂದು ರ್‍ಯಾಲಿ ಸಂಘಟಕರೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

“AFSPA ಅಡಿಯಲ್ಲಿ, ಬಹಳಷ್ಟು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ. ಓಟಿಂಗ್‌ನಲ್ಲಿ ನಡೆದ ನಾಗರಿಕರ ಹತ್ಯಾಕಾಂಡವು ಈ ಪೈಶಾಚಿಕ ಕೃತ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮತ್ತೆ ನೆನಪಿಸಿದೆ. ನಾವು ಭದ್ರತಾ ಪಡೆಗಳ ಹಿಂದಿನ ಎಲ್ಲಾ ದೌರ್ಜನ್ಯಗಳ ಸಂತ್ರಸ್ತರನ್ನು ಸಹ ನೆನಪಿಸಿಕೊಳ್ಳುತ್ತೇವೆ. ಹತ್ಯಾಕಾಂಡದಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಎಎಫ್‌ಎಸ್‌ಪಿಎಯನ್ನು ಭಾಗಶಃ ತೆಗೆದುಹಾಕುವುದರಿಂದ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ” ಎಂದು ಮೆರವಣಿಗೆಯಲ್ಲಿ ಭಾಗವಹಿಸಲಿರುವ ಸಾಮಾಜಿಕ ಕಾರ್ಯಕರ್ತ ಕೆವಿಥೋ ಕೆರಾ ಅವರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ಸರ್ಕಾರವು ಹೊಸ ಕೊರೊನಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಭಾಗವಹಿಸುವವರ ಸಂಖ್ಯೆಯನ್ನು 200 ಕ್ಕೆ ಮಿತಿಗೊಳಿಸಲು ನಮ್ಮಗೆ ಹೇಳಿದೆ. ಆದರೆ ನಾವು ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ನಾಗಾಲ್ಯಾಂಡ್‌ನ ಹೊರಗಿನ ಜನರು ಸಹ ನಮ್ಮೊಂದಿಗೆ ಸೇರಲು ಬಯಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸುವವರು ತಮ್ಮ ಮಲಗುವ ಚೀಲಗಳು, ಟಾರ್ಚ್‌ಗಳು, ಅಗತ್ಯ ಗ್ಯಾಜೆಟ್‌ಗಳು ಮತ್ತು ಪರಿಕರಗಳನ್ನು ಜೊತೆಗೆ ಒಯ್ಯುಲಿದ್ದಾರೆ. ಯಾವುದೇ ತುರ್ತುಯನ್ನು ಎದುರಿಸಲು ಆಂಬ್ಯುಲೆನ್ಸ್ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ 13 ನಾಗರಿಕರ ಹತ್ಯೆ ಪ್ರರಕಣದ ಹಿನ್ನೆಲೆಯಲ್ಲಿ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದರು.


ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...