HomeಚಳವಳಿAFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

AFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

- Advertisement -
- Advertisement -

ನಾಗಾಲ್ಯಾಂಡ್‌ನಿಂದ ವಿವಾದಿತ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (AFSPA) ಅನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಸಮಾನ ಮನಸ್ಕ ನಾಗರಿಕರು ಜ.10 ಮತ್ತು 11 (ಸೋಮವಾರ, ಮಂಗಳವಾರ) ರ್‍ಯಾಲಿ ಆಯೋಜಿಸಿದ್ದಾರೆ.

ಈಗಾಗಲೇ ಈ ಕಾನೂನನ್ನು ಭಾಗಶಃ ಅಥವಾ ಸಂಪೂರ್ಣವಾಗಿ ತೆಗೆದುಹಾಕಬಹುದೇ ಎಂದು ಅಧ್ಯಯನ ಮಾಡಲು ಒಕ್ಕೂಟ ಸರ್ಕಾರ ಸಮಿತಿಯನ್ನು ರಚಿಸಿದೆ.

ನಾಗಾಲ್ಯಾಂಡ್ ನಾಗರಿಕರು ಕರೆದಿರುವ “AFSPA ವಿರುದ್ಧದ ಮೆರವಣಿಗೆ ” ಸೋಮವಾರ ವಾಣಿಜ್ಯ ಕೇಂದ್ರವಾದ ದಿಮಾಪುರ್‌ನಿಂದ ಪ್ರಾರಂಭವಾಗಲಿದೆ. ಸೂಪರ್‌ಮಾರ್ಕೆಟ್ ದಿಮಾಪುರ್‌ನಿಂದ ರಾಜಭವನ ಕೊಹಿಮಾವರೆಗೆ ಎರಡು ದಿನಗಳಲ್ಲಿ ಸುಮಾರು 70 ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಅಲ್ಲಿ ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತದೆ.

ಇದೊಂದು ಸಾಮೂಹಿಕವಾಗಿ ಸಾರ್ವಜನಿಕರು ಆರಂಭಿಸಿರುವ ಪ್ರತಿಭಟನಾ ಮೆರವಣಿಗೆಯಾಗಿದ್ದು, ಯಾವುದೇ ನಾಗರಿಕ ಸಮಾಜ ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿಲ್ಲ ಎಂದು ರ್‍ಯಾಲಿ ಸಂಘಟಕರೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

“AFSPA ಅಡಿಯಲ್ಲಿ, ಬಹಳಷ್ಟು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ. ಓಟಿಂಗ್‌ನಲ್ಲಿ ನಡೆದ ನಾಗರಿಕರ ಹತ್ಯಾಕಾಂಡವು ಈ ಪೈಶಾಚಿಕ ಕೃತ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮತ್ತೆ ನೆನಪಿಸಿದೆ. ನಾವು ಭದ್ರತಾ ಪಡೆಗಳ ಹಿಂದಿನ ಎಲ್ಲಾ ದೌರ್ಜನ್ಯಗಳ ಸಂತ್ರಸ್ತರನ್ನು ಸಹ ನೆನಪಿಸಿಕೊಳ್ಳುತ್ತೇವೆ. ಹತ್ಯಾಕಾಂಡದಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಎಎಫ್‌ಎಸ್‌ಪಿಎಯನ್ನು ಭಾಗಶಃ ತೆಗೆದುಹಾಕುವುದರಿಂದ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ” ಎಂದು ಮೆರವಣಿಗೆಯಲ್ಲಿ ಭಾಗವಹಿಸಲಿರುವ ಸಾಮಾಜಿಕ ಕಾರ್ಯಕರ್ತ ಕೆವಿಥೋ ಕೆರಾ ಅವರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ಸರ್ಕಾರವು ಹೊಸ ಕೊರೊನಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಭಾಗವಹಿಸುವವರ ಸಂಖ್ಯೆಯನ್ನು 200 ಕ್ಕೆ ಮಿತಿಗೊಳಿಸಲು ನಮ್ಮಗೆ ಹೇಳಿದೆ. ಆದರೆ ನಾವು ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ನಾಗಾಲ್ಯಾಂಡ್‌ನ ಹೊರಗಿನ ಜನರು ಸಹ ನಮ್ಮೊಂದಿಗೆ ಸೇರಲು ಬಯಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸುವವರು ತಮ್ಮ ಮಲಗುವ ಚೀಲಗಳು, ಟಾರ್ಚ್‌ಗಳು, ಅಗತ್ಯ ಗ್ಯಾಜೆಟ್‌ಗಳು ಮತ್ತು ಪರಿಕರಗಳನ್ನು ಜೊತೆಗೆ ಒಯ್ಯುಲಿದ್ದಾರೆ. ಯಾವುದೇ ತುರ್ತುಯನ್ನು ಎದುರಿಸಲು ಆಂಬ್ಯುಲೆನ್ಸ್ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ 13 ನಾಗರಿಕರ ಹತ್ಯೆ ಪ್ರರಕಣದ ಹಿನ್ನೆಲೆಯಲ್ಲಿ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದರು.


ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...