HomeಚಳವಳಿAFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

AFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

- Advertisement -
- Advertisement -

ನಾಗಾಲ್ಯಾಂಡ್‌ನಿಂದ ವಿವಾದಿತ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (AFSPA) ಅನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಸಮಾನ ಮನಸ್ಕ ನಾಗರಿಕರು ಜ.10 ಮತ್ತು 11 (ಸೋಮವಾರ, ಮಂಗಳವಾರ) ರ್‍ಯಾಲಿ ಆಯೋಜಿಸಿದ್ದಾರೆ.

ಈಗಾಗಲೇ ಈ ಕಾನೂನನ್ನು ಭಾಗಶಃ ಅಥವಾ ಸಂಪೂರ್ಣವಾಗಿ ತೆಗೆದುಹಾಕಬಹುದೇ ಎಂದು ಅಧ್ಯಯನ ಮಾಡಲು ಒಕ್ಕೂಟ ಸರ್ಕಾರ ಸಮಿತಿಯನ್ನು ರಚಿಸಿದೆ.

ನಾಗಾಲ್ಯಾಂಡ್ ನಾಗರಿಕರು ಕರೆದಿರುವ “AFSPA ವಿರುದ್ಧದ ಮೆರವಣಿಗೆ ” ಸೋಮವಾರ ವಾಣಿಜ್ಯ ಕೇಂದ್ರವಾದ ದಿಮಾಪುರ್‌ನಿಂದ ಪ್ರಾರಂಭವಾಗಲಿದೆ. ಸೂಪರ್‌ಮಾರ್ಕೆಟ್ ದಿಮಾಪುರ್‌ನಿಂದ ರಾಜಭವನ ಕೊಹಿಮಾವರೆಗೆ ಎರಡು ದಿನಗಳಲ್ಲಿ ಸುಮಾರು 70 ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಅಲ್ಲಿ ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತದೆ.

ಇದೊಂದು ಸಾಮೂಹಿಕವಾಗಿ ಸಾರ್ವಜನಿಕರು ಆರಂಭಿಸಿರುವ ಪ್ರತಿಭಟನಾ ಮೆರವಣಿಗೆಯಾಗಿದ್ದು, ಯಾವುದೇ ನಾಗರಿಕ ಸಮಾಜ ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿಲ್ಲ ಎಂದು ರ್‍ಯಾಲಿ ಸಂಘಟಕರೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

“AFSPA ಅಡಿಯಲ್ಲಿ, ಬಹಳಷ್ಟು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ. ಓಟಿಂಗ್‌ನಲ್ಲಿ ನಡೆದ ನಾಗರಿಕರ ಹತ್ಯಾಕಾಂಡವು ಈ ಪೈಶಾಚಿಕ ಕೃತ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮತ್ತೆ ನೆನಪಿಸಿದೆ. ನಾವು ಭದ್ರತಾ ಪಡೆಗಳ ಹಿಂದಿನ ಎಲ್ಲಾ ದೌರ್ಜನ್ಯಗಳ ಸಂತ್ರಸ್ತರನ್ನು ಸಹ ನೆನಪಿಸಿಕೊಳ್ಳುತ್ತೇವೆ. ಹತ್ಯಾಕಾಂಡದಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಎಎಫ್‌ಎಸ್‌ಪಿಎಯನ್ನು ಭಾಗಶಃ ತೆಗೆದುಹಾಕುವುದರಿಂದ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ” ಎಂದು ಮೆರವಣಿಗೆಯಲ್ಲಿ ಭಾಗವಹಿಸಲಿರುವ ಸಾಮಾಜಿಕ ಕಾರ್ಯಕರ್ತ ಕೆವಿಥೋ ಕೆರಾ ಅವರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ಸರ್ಕಾರವು ಹೊಸ ಕೊರೊನಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಭಾಗವಹಿಸುವವರ ಸಂಖ್ಯೆಯನ್ನು 200 ಕ್ಕೆ ಮಿತಿಗೊಳಿಸಲು ನಮ್ಮಗೆ ಹೇಳಿದೆ. ಆದರೆ ನಾವು ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ನಾಗಾಲ್ಯಾಂಡ್‌ನ ಹೊರಗಿನ ಜನರು ಸಹ ನಮ್ಮೊಂದಿಗೆ ಸೇರಲು ಬಯಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸುವವರು ತಮ್ಮ ಮಲಗುವ ಚೀಲಗಳು, ಟಾರ್ಚ್‌ಗಳು, ಅಗತ್ಯ ಗ್ಯಾಜೆಟ್‌ಗಳು ಮತ್ತು ಪರಿಕರಗಳನ್ನು ಜೊತೆಗೆ ಒಯ್ಯುಲಿದ್ದಾರೆ. ಯಾವುದೇ ತುರ್ತುಯನ್ನು ಎದುರಿಸಲು ಆಂಬ್ಯುಲೆನ್ಸ್ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ 13 ನಾಗರಿಕರ ಹತ್ಯೆ ಪ್ರರಕಣದ ಹಿನ್ನೆಲೆಯಲ್ಲಿ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದರು.


ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...