HomeಚಳವಳಿAFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

AFSPA ರದ್ದುಗೊಳಿಸಲು ಒತ್ತಡ: ಜ.10 ಮತ್ತು 11ಕ್ಕೆ ನಾಗಾಲ್ಯಾಂಡ್ ಜನರಿಂದ ರ್‍ಯಾಲಿ

- Advertisement -
- Advertisement -

ನಾಗಾಲ್ಯಾಂಡ್‌ನಿಂದ ವಿವಾದಿತ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ (AFSPA) ಅನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಸಮಾನ ಮನಸ್ಕ ನಾಗರಿಕರು ಜ.10 ಮತ್ತು 11 (ಸೋಮವಾರ, ಮಂಗಳವಾರ) ರ್‍ಯಾಲಿ ಆಯೋಜಿಸಿದ್ದಾರೆ.

ಈಗಾಗಲೇ ಈ ಕಾನೂನನ್ನು ಭಾಗಶಃ ಅಥವಾ ಸಂಪೂರ್ಣವಾಗಿ ತೆಗೆದುಹಾಕಬಹುದೇ ಎಂದು ಅಧ್ಯಯನ ಮಾಡಲು ಒಕ್ಕೂಟ ಸರ್ಕಾರ ಸಮಿತಿಯನ್ನು ರಚಿಸಿದೆ.

ನಾಗಾಲ್ಯಾಂಡ್ ನಾಗರಿಕರು ಕರೆದಿರುವ “AFSPA ವಿರುದ್ಧದ ಮೆರವಣಿಗೆ ” ಸೋಮವಾರ ವಾಣಿಜ್ಯ ಕೇಂದ್ರವಾದ ದಿಮಾಪುರ್‌ನಿಂದ ಪ್ರಾರಂಭವಾಗಲಿದೆ. ಸೂಪರ್‌ಮಾರ್ಕೆಟ್ ದಿಮಾಪುರ್‌ನಿಂದ ರಾಜಭವನ ಕೊಹಿಮಾವರೆಗೆ ಎರಡು ದಿನಗಳಲ್ಲಿ ಸುಮಾರು 70 ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಅಲ್ಲಿ ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತದೆ.

ಇದೊಂದು ಸಾಮೂಹಿಕವಾಗಿ ಸಾರ್ವಜನಿಕರು ಆರಂಭಿಸಿರುವ ಪ್ರತಿಭಟನಾ ಮೆರವಣಿಗೆಯಾಗಿದ್ದು, ಯಾವುದೇ ನಾಗರಿಕ ಸಮಾಜ ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿಲ್ಲ ಎಂದು ರ್‍ಯಾಲಿ ಸಂಘಟಕರೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

“AFSPA ಅಡಿಯಲ್ಲಿ, ಬಹಳಷ್ಟು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ. ಓಟಿಂಗ್‌ನಲ್ಲಿ ನಡೆದ ನಾಗರಿಕರ ಹತ್ಯಾಕಾಂಡವು ಈ ಪೈಶಾಚಿಕ ಕೃತ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮತ್ತೆ ನೆನಪಿಸಿದೆ. ನಾವು ಭದ್ರತಾ ಪಡೆಗಳ ಹಿಂದಿನ ಎಲ್ಲಾ ದೌರ್ಜನ್ಯಗಳ ಸಂತ್ರಸ್ತರನ್ನು ಸಹ ನೆನಪಿಸಿಕೊಳ್ಳುತ್ತೇವೆ. ಹತ್ಯಾಕಾಂಡದಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಎಎಫ್‌ಎಸ್‌ಪಿಎಯನ್ನು ಭಾಗಶಃ ತೆಗೆದುಹಾಕುವುದರಿಂದ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ” ಎಂದು ಮೆರವಣಿಗೆಯಲ್ಲಿ ಭಾಗವಹಿಸಲಿರುವ ಸಾಮಾಜಿಕ ಕಾರ್ಯಕರ್ತ ಕೆವಿಥೋ ಕೆರಾ ಅವರನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ಸರ್ಕಾರವು ಹೊಸ ಕೊರೊನಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಭಾಗವಹಿಸುವವರ ಸಂಖ್ಯೆಯನ್ನು 200 ಕ್ಕೆ ಮಿತಿಗೊಳಿಸಲು ನಮ್ಮಗೆ ಹೇಳಿದೆ. ಆದರೆ ನಾವು ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ನಾಗಾಲ್ಯಾಂಡ್‌ನ ಹೊರಗಿನ ಜನರು ಸಹ ನಮ್ಮೊಂದಿಗೆ ಸೇರಲು ಬಯಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸುವವರು ತಮ್ಮ ಮಲಗುವ ಚೀಲಗಳು, ಟಾರ್ಚ್‌ಗಳು, ಅಗತ್ಯ ಗ್ಯಾಜೆಟ್‌ಗಳು ಮತ್ತು ಪರಿಕರಗಳನ್ನು ಜೊತೆಗೆ ಒಯ್ಯುಲಿದ್ದಾರೆ. ಯಾವುದೇ ತುರ್ತುಯನ್ನು ಎದುರಿಸಲು ಆಂಬ್ಯುಲೆನ್ಸ್ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ 13 ನಾಗರಿಕರ ಹತ್ಯೆ ಪ್ರರಕಣದ ಹಿನ್ನೆಲೆಯಲ್ಲಿ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದರು.


ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...