Homeಕರ್ನಾಟಕಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಸಮಗ್ರ ಒಳಮೀಸಲಾತಿ ಜಾರಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಗ್ರಹಿಸಿ, ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಪೊಲೀಸರು ಹತ್ತಿಕ್ಕಿದ್ದಾರೆ. ಇಂದು ಬೆಳಗ್ಗೆ ಆರಂಭವಾದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಬಂಧಿಸಿದ್ದಾರೆ.

ಈ ಕುರಿತು ಮಾತನಾಡಿದ ಒಳಮೀಸಲಾತಿ ಹಿರಿಯ ಹೋರಾಟಗಾರ ಎಸ್‌.ಮಾರೆಪ್ಪ, “ದುರುದ್ದೇಶದಿಂದ ಪೊಲೀಸರು ಪಾದಯಾತ್ರೆಗೆ ಅನುಮತಿ ನಿರಾಕರಿಸಿ ಈಗ ನಮ್ಮನ್ನು ಬಂಧಿಸಿದ್ದಾರೆ. ನಮ್ಮ ಸಮುದಾಯದ ಜನರ ಸಮಸ್ಯೆ ಕುರಿತು ಚರ್ಚಿಸಲು ನಮ್ಮದೇ ಸಮುದಾಯದ ನಾಯಕರ ಬಳಿಗೆ ಹೋಗುತ್ತಿರುವಾಗ ಬಂಧಿಸಿರುವುದು ಮೊದಲು. ಈಗ ನಾವು ಯಾರನ್ನು ಕೇಳಬೇಕು? ಈ ರೀತಿ ನಡೆದಿರುವುದು ಕರ್ನಾಟಕದ ಚರಿತ್ರಿಯಲ್ಲೇ ಮೊದಲು. ಸಿದ್ದರಾಮಯ್ಯ ಅವರ ಸರ್ಕಾರ ಹೀಗೆಲ್ಲಾ ಮಾಡುತ್ತಿರುವುದು ಸರಿಯಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಒಳಮೀಸಲಾತಿ ಪ್ರಕ್ರಿಯೆ ಜಾರಿಗೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅವರ ಈ ವಿಳಂಬ ಧೋರಣೆಗೆ ಪೂರಕವಾಗಿ ಪೊಲೀಸರು ಕೂಡ ಕೆಲಸ ಮಾಡುತ್ತಿದ್ದು, ನಮ್ಮನ್ನು ಬಂಧಿಸಿರುವುದನ್ನು ಖಂಡಿಸುತ್ತೇವೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಒಳಮೀಸಲಾತಿ ಹೋರಾಟಗಾರರು ಸಿದ್ದರಾಮನಹುಂಡಿಗೆ ನೇರವಾಗಿ ತೆರಳಿ ಪಾದಯಾತ್ರೆ ಆರಂಭಿಸಬೇಕು. ರಾಜ್ಯದ ಜನರು, ಸರ್ಕಾರ ಮತ್ತು ಪೊಲೀಸರ ಈ ನಡೆಯನ್ನು ಖಂಡಿಸಬೇಕು” ಎಂದು ಒಳಮೀಸಲಾತಿ ಹೋರಾಟಗಾರ ಶಿವರಾಜ್ ಅಕ್ಕರಕಿ ಹೇಳಿದರು.

“ಮಾನ್ಯ ಮುಖ್ಯಮಂತ್ರಿಗಳೆ.. ಸಚಿವರಾದ ಎಚ್‌.ಸಿ. ಮಹದೇವಪ್ಪ ಅವರೇ.. ನಿಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದವರು ನಾವು; ಕೋಮುವಾದಿಗಳನ್ನು ಸೋಲಿಸಿದ್ದು ನಾವು. ರಾಜ್ಯದಲ್ಲಿ ಶಾಂತಿ-ನೆಮ್ಮದಿ ಇರಬೇಕು ಎಂದು ಬಯಸಿದವರು. ನ್ಯಾಯಯುತವಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಹತ್ತಿಕ್ಕಿ, ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಇಡೀ ಆಡಳಿತ ಯಂತ್ರದಲ್ಲಿ ಮೀಸಲಾತಿ ಉದ್ದೇಶವನ್ನೇ ಬುಡಮೇಲು ಮಾಡುವ ಯತ್ನ ನಡೆಯುತ್ತಿದೆ. ನಮ್ಮ ಹೋರಾಟ ಸರ್ಕಾರ ಅಥವಾ ಸಿದ್ದರಾಮಯ್ಯನವರ ವಿರುದ್ಧ ಅಲ್ಲ. ಏಕೆಂದರೆ, ಕೋಮುವಾದಿಗಳು ಅಧಿಕಾರಕ್ಕೆ ಬರಬಾರದು ಎಂದು ಬಯಸಿದವರು ನಾವು. ನಮ್ಮದು ಶಾಂತಿಯುತ ಪಾದಯಾತ್ರೆ. ಆದರೆ, ನಮ್ಮನ್ನು ಪೊಲೀಸರು ಬಂಧಿಸಿ ಕರೆದೊಯ್ಯತ್ತಿದ್ದಾರೆ. ಬೇಕಿದ್ದರೆ ನಮ್ಮನ್ನು ಬಂಧಿಸಿ ಜೈಲಿನಲ್ಲಿಡಿ ಅದಕ್ಕಾಗಿ ನಾವು ತಯಾರಿದ್ದೇವೆ. ಆದರೆ ಒಳಮೀಸಲಾತಿ ವಿಚಾರದಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗಬೇಕು” ಎಂದು ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿ ಬೇಸರ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...