Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

“ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಕಸಾಪ ಅಧ್ಯಕ್ಷರು ಹೇಳಿಕೊಳ್ಳುತ್ತಾರೆ. ಶರೀಫರು ಯಾರು? ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?”

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕಡೆಗಣಿಸಲಾಗಿದ್ದು, ಪರ್ಯಾಯ ಸಮ್ಮೇಳನ ನಡೆಸುವ ಚಿಂತನೆಯನ್ನು ಕನ್ನಡದ ಜಾತ್ಯತೀಯ ಮನಸ್ಸುಗಳು ಮಾಡುತ್ತಿವೆ.

ಕನ್ನಡದ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲಾಗುವ ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಈ ಹಿಂದೆ ಯಾವತ್ತೂ ಈ ರೀತಿಯ ಪ್ರಮಾದವನ್ನು ಮಾಡಿರಲಿಲ್ಲ. ಮಹೇಶ ಜೋಷಿಯವರು ಅಧ್ಯಕ್ಷರಾದ ಮೇಲೆ ವಿವಾದಗಳ ಮೂಲಕ ಸದ್ದು ಮಾಡುತ್ತಿರುವ ಕಸಾಪ, “ಈಗ ಮುಸ್ಲಿಮರನ್ನು ಹೊರಗಿಡುವ ಮಟ್ಟಕ್ಕೆ ತಲುಪಿದೆ” ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

“ಆರ್‌ಎಸ್‌ಎಸ್ ಮನಸ್ಥಿತಿ ಇಲ್ಲಿ ಕೆಲಸ ಮಾಡಿದೆ. ಜಾತಿ ದ್ವೇಷ, ಧರ್ಮದ್ವೇಷ ಢಾಳಾಗಿ ಕಾಣುತ್ತಿದೆ” ಎಂಬ ಟೀಕೆಗೆ ಸಮ್ಮೇಳನ ಗುರಿಯಾಗಿದೆ.

ಕನ್ನಡ ಸಾಹಿತ್ಯ ಪರಿಷತ್‌ ಮಾಡಿರುವ ಎಡವಟ್ಟಿನ ಕುರಿತು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬು‌ಕ್‌ನಲ್ಲಿ ಪೋಸ್ಟ್ ಮಾಡಿದ್ದು, “ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಲೇಖಕರನ್ನು ಹೊರಗಿಟ್ಟಿರುವುದು ಆಕಸ್ಮಿಕ ಏನೂ ಅಲ್ಲ. ನೆಹರೂ ಅಂಥ ಲೇಖಕರನ್ನೇ ಹೊರಗಿಟ್ಟವರಿವರು. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ತನ್ನ ನಿಲುವನ್ನು ನೇರವಾಗಿಯೇ ಪ್ರಕಟಿಸಬೇಕು” ಎಂದು ಆಗ್ರಹಿಸಿದ್ದಾರೆ. ಜೊತೆಗೆ “ಕೆಲವರನ್ನು ಕರೆದಿದ್ದು ಅವರು ಬರುವುದಿಲ್ಲ ಎಂದೂ ಹೇಳಿರಬಹುದು” ಎಂಬ ಮಾತನ್ನೂ ಸೇರಿಸಿದ್ದಾರೆ.

“ಆಧುನಿಕ ಕನ್ನಡ ಸಾಹಿತ್ಯದಲ್ಲಿ ಶಿಶುನಾಳ ಷರೀಫರೇ ನಮಗೆ ಸಿಗುವ ಮೊದಲ ಮಹತ್ವದ ಕವಿ. ಆನಂತರ ಕೆ.ಎಸ್‌.ನಿಸಾರ್‌ ಅಹಮದ್‌, ಬೊಳುವಾರು ಮಹಮ್ಮದ್‌ ಕುಞಿ, ಸಾರಾ ಅಬೂಬಕರ್,‌ ಹಸನ್ ನಯೀಂ ಸುರಕೋಡ, ರಹಮತ್‌ ತರೀಕರೆ ಮೊದಲಾದವರು ಕನ್ನಡದ ಸುಪ್ರಸಿದ್ಧ ಲೇಖಕರು. ಬೊಳುವಾರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕಿತ್ತು. ಅವರಿಗೆ ಜ್ಞಾನಪೀಠ ಪ್ರಶಸ್ತಿಯೂ ಬರಬೇಕು. ದಾದಾಪೀರ್‌ ಜೈನ್ ಅವರಿಗೆ ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಸಬೀಹಾ ಭೂಮಿ ಗೌಡರು ಲೇಖಕಿಯಾಗಿ ಪ್ರಸಿದ್ಧರು” ಎಂದು ಕಸಾಪಕ್ಕೆ ನೆನಪಿಸಿದ್ದಾರೆ.

“ಒಂದಾದರೂ ಪುಸ್ತಕ ಪ್ರಕಟಿಸಿದ ಮುಸ್ಲಿಂ ಲೇಖಕರು ಬಹಳ ಜನ ಇದ್ದಾರೆ. ಬಹುಶಃ ಮುಂದಿನ 10 ವರ್ಷದಲ್ಲಿ ಕನ್ನಡದ ಲೇಖಕರೆಂದರೆ ಮುಸ್ಲಿಮರೇ ಆಗಿರುತ್ತಾರೆ. ಅವರಲ್ಲಿ ನನಗೆ ಕೂಡಲೇ ನೆನಪಿಗೆ ಬರುವವರೆಂದರೆ, ಆರಿಫ್‌ ರಾಜಾ, ಎ.ಕೆ.ಕುಕ್ಕಿಲ, ಬಿ.ಎಂ.ಬಷೀರ್, ಇಸ್ಮಾಯಿಲ್ , ಮಹಮ್ಮದ್‌ ಕುಳಾಯಿ, ಗಂಗಾವತಿ ಸಲೀಮಾ, ಅಬ್ಬುಸ್ಸಲಾಮ್ ಪುತ್ತಿಗೆ, ಇಬ್ರಾಹಿಂ ಸಯೀದ್ ಸಾಬ್, ಸಲಾಂ ಸಮ್ಮಿ, ಬಾನು ಮುಷ್ತಾಕ್, ಫಾತಿಮಾ ರಲಿಯಾ, ಕೆ.ಷರೀಫಾ, ಡಿ.ಬಿ.ರಜಿಯಾ, ಜಹಾನ್ ಆರಾ, ಎ.ಎಸ್.ಮಕಾನದಾರ , ಬಿ.ಪೀರ್ ಭಾಷಾ, ಅಜಮೀರ ನಂದಾಪುರ, ದಸ್ತಗೀರ್ ದಿನ್ನಿ, ಇಮಾಮ್ ಹಡಗಲಿ, ಮುಸ್ತಾಫಾ, ಡಾ.ಮಕ್ತೂಂಬಿ ಮುಲ್ಲಾ, ಶಿ ಜು ಪಾಶಾ, ಮೆಹಬೂಬ್ಬಿ ಶೇಖ್ , ಸಿರಾಜ್ ಬಿಸರಳ್ಳಿ, ನಜ್ಮಾ ನಜೀರ್ ಚಿಕ್ಕನೇರಳೆ, ಮುನವ್ವರ್ ಜೋಗಿಬೆಟ್ಟು, ಬಿ.ಎಂ.ಹನೀಫ್‌, ಮೆಹಬೂಬಭಾಷಾ ಮಕಾನದಾರ, ಬಾಬು ಮನಸೇ, ಹಕೀಂ ಪದಡ್ಕ, ಹಸನ್ಮುಖಿ ಬಡಗನ್ನೂರು, ಆಸೀಫಾ, ನೂರಜಾನ್, ಸಕೀನಾ ಬೇಗಂ, ಸುನೈಫ್ ವಿಟ್ಲ, ಇಮಾಮ್ ಹಡಗಲಿ, ಅಮೀರಸಾಬ ವಂಟಿ, ಉಮರ್ ದೇವರಮನಿ, ಅಮೀನ್ ಅತ್ತಾರ್, ಸಯ್ಯದ್ ಸಿಕಂದರ್ ಮೀರ್ ಅಲಿ, ಚಾಂದ್ ಕವಿಚಂದ್ರ, ಕಾ ಹು ಚಾನಪಾಶಾ, ಸೈಫ್ ಜಾನ್ಸೆ, ರಾಜೇಸಾಬ ಬಾಗವಾನ್, ಶರೀಫ್ ಹಸಮಕಲ್, ಆಶಿಖ್ ಮುಲ್ಕಿ , ಇಮಾಮ್ ಗೋಡೆಕಾರ, ಸಿಹಾನಾ ಎಂ ಬಿ ಮೊದಲಾದವರು” ಎಂದು ಪಟ್ಟಿ ಮಾಡಿದ್ದಾರೆ.

ಮತ್ತೊಂದು ಪೋಸ್ಟ್ ಮಾಡಿರುವ ಅವರು, “ಪರ್ಯಾಯ ಸಮ್ಮೇಳನ ಇವತ್ತಿನ ತುರ್ತು. ದಾವಣಗೆರೆ ಅಥವಾ ಬೆಂಗಳೂರು ಅನುಕೂಲ. ಕೋಲಾರ, ಮೈಸೂರು, ಶಿವಮೊಗ್ಗವೂ ಆದೀತು. ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವ, ಪ್ರೊ.ಬರಗೂರು ರಾಮಚಂದ್ರಪ್ಪ ಬರಬೇಕು. ಪ್ರೊ.ರಾಜೇಂದ್ರ ಚೆನ್ನಿ, ಅರುಣ್‌ ಜೋಳದಕೂಡ್ಲಿಗಿ, ಬಿ.ಎಂ.ಹನೀಫ್‌ ಮೊದಲಾದವರು ಬರುತ್ತಾರೆ. ಅವರವರದೇ ಖರ್ಚು. ಸಭಾಂಗಣ, ಮಧ್ಯಾಹ್ನ ಊಟ, ಧ್ವನಿವರ್ಧಕ, ಚಹಾ ಇತ್ಯಾದಿಗಳಿಗೆ ಕ್ರೌಡ್‌ ಫಂಡಿಂಗ್‌ ಮಾಡೋಣ. ನಾನು ನನ್ನ ಖರ್ಚಲ್ಲಿ ಬರುತ್ತೇನೆ. ಸತ್ಯನಾರಾಯಣ ಪೂಜೆಗೆ ಸುದ್ದಿ ಕೇಳಿಯೇ ಹೋಗಬೇಕಂತೆ. ಇದೂ ಹಾಗೆಯೇ ಆಗಲಿ. ಸಮ್ಮೇಳನದಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ. ಯಾವುದೂ ಯಃಕಶ್ಚಿತವೂ ಅಲ್ಲ. ಯಾರಾದರೂ ಸಮರ್ಥ ನಾಯಕತ್ವ ಕೊಡಿ” ಎಂದು ಕೋರಿದ್ದಾರೆ.

ಬಿಳಿಮಲೆಯವರ ಪೋಸ್ಟ್‌ಗೆ ಹತ್ತಾರು ಲೇಖಕರು ಪ್ರತಿಕ್ರಿಯೆ ನೀಡಿದ್ದು, ಪರ್ಯಾಯ ಸಮ್ಮೇಳನಕ್ಕೆ ಬೆಂಬಲ ನೀಡುತ್ತಿದ್ದಾರೆ.

ಹಿರಿಯ ಪತ್ರಕರ್ತರು ಹಾಗೂ ಲೇಖಕರಾದ ಬಿ.ಎಂ.ಹನೀಫ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಹಾವೇರಿಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸುಮಾರು 80 ಮಂದಿ ಸಾಧಕರಿಗೆ ಸನ್ಮಾನ ಆಗುತ್ತಿದೆ. ಪ್ರತಿಸಲವು ಸನ್ಮಾನ ಮಾಡುವಾಗ ರಾಜ್ಯದ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಈ ವೇದಿಕೆಯಲ್ಲಿ ಗೌರವಿಸಲಾಗುತ್ತಿತ್ತು. ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಸಾಧಕರು ಇವರಿಗೆ ಸಿಗಲಿಲ್ಲವೆಂದರೆ ಇವರು ಸ್ಪಷ್ಟವಾಗಿ ಕಮ್ಯುನಲ್‌ ಆಗಿದ್ದಾರೆ ಎಂದರ್ಥ. ಅಪ್ರಜ್ಞಾಪೂರ್ವಕವಾಗಿ ಮುಸ್ಲಿಮರ ಹೆಸರು ಬಿಟ್ಟು ಹೋಗಿರಲು ಸಾಧ್ಯವಿಲ್ಲ. ಶಿಕ್ಷಣ, ಸಹಕಾರಿ ಕ್ಷೇತ್ರ, ಪತ್ರಿಕೋದ್ಯಮ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆಗೈದ ಮುಸ್ಲಿಮರಿದ್ದಾರೆ” ಎಂದು ವಿವರಿಸಿದರು.

“ಕಾವ್ಯಕ್ಷೇತ್ರದಲ್ಲಿ ಬಹುಮುಖ್ಯವಾಗಿ ಹೆಸರು ಮಾಡಿದವರನ್ನು ಪ್ರಧಾನ ಕವಿಗೋಷ್ಠಿಯಲ್ಲಿ ಗುರುತಿಸಲಾಗುತ್ತದೆ. 25 ಮಂದಿ ಕವಿಗಳಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಬೇರೆ ಕವಿಗೋಷ್ಠಿಗಳಲ್ಲಿ ಹೆಸರಿಗೆ ನಾಲ್ಕು ಮುಸ್ಲಿಮರನ್ನು ಹಾಕಿಕೊಂಡಿದ್ದಾರೆ. ಹಾಗೆ ಆಯ್ಕೆಯಾದವರು ಅನರ್ಹರೇನಲ್ಲ. ಇತ್ತೀಚೆಗೆ ಬರೆಯುತ್ತಿರುವ ಪ್ರತಿಭಾವಂತರೇ ಆಗಿದ್ದಾರೆ. ಆದರೆ ಪ್ರಧಾನ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಗೆ ಯಾವ ಮುಸ್ಲಿಮರೂ ಸಿಗಲಿಲ್ಲವೇ? ಪ್ರಧಾನ ವೇದಿಕೆಯಲ್ಲಿ ನಡೆಯುವ 9 ವಿಚಾರಗೋಷ್ಠಿಗಳಲ್ಲಿ ಸುಮಾರು 34 ಮಂದಿ ಮಾತನಾಡುತ್ತಾರೆ. ಇದರಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ” ಎಂದು ವಿಷಾದಿಸಿದರು.

“ಮುಸ್ಲಿಂ ಎಂದು ಹೇಳಿದ ತಕ್ಷಣ- ತಮ್ಮ ಜಾತಿಯವರ ಬಗ್ಗೆ ಇವರು ಹೇಳುತ್ತಿದ್ದಾನೆಂದು ಕೆಲವರು ಆರೋಪಿಸಬಹುದು. ಆದರೆ ಕನ್ನಡ ಸಾಹಿತ್ಯ ಪರಿಷತ್ ಎಂದಿಗೂ ಕಮ್ಯುನಲ್ ಆಗಿ ವರ್ತಿಸಿಲ್ಲ. ಈ ರೀತಿಯ ತಾರತಮ್ಯ ಎಂದೂ ಆಗಿರಲಿಲ್ಲ. ದಲಿತರು, ಮಹಿಳೆಯರು, ಮುಸ್ಲಿಮರು- ಹೀಗೆ ಎಲ್ಲರಿಗೂ ಪ್ರಾತಿನಿಧ್ಯವನ್ನು ನೀಡಲಾಗುತ್ತಿತ್ತು” ಎಂದು ಸ್ಮರಿಸಿದರು.

“ಹಿರಿಯರ ಸ್ಮರಣೆ ಗೋಷ್ಠಿಗೆ ನಿಸಾರ್‌ ಅಹಮ್ಮದ್ ಅವರ ಹೆಸರು ನೆನಪಾಗಲಿಲ್ಲವಾ? ಕರ್ನಾಟಕ ಪ್ರಾದೇಶಿಕ ವೈವಿಧ್ಯತೆ ಎಂಬ ಗೋಷ್ಠಿ ಇದೆ. ಪ್ರಾದೇಶಿಕ ವೈವಿಧ್ಯತೆ ಎಂದು ತುಳು, ಕೊಂಕಣಿ, ಕೊಡವ, ಅರೆಭಾಷೆಗಳನ್ನು ಗುರುತಿಸಲಾಗಿದೆ. ಆದರೆ ಬ್ಯಾರಿ ಭಾಷೆಯನ್ನು ಏಕೆ ಬಿಟ್ಟಿದ್ದೀರಿ? ರಾಜ್ಯದಲ್ಲಿ ಹದಿನಾಲ್ಕು ಲಕ್ಷ ಮುಸ್ಲಿಮರು ಬ್ಯಾರಿ ಭಾಷೆ ಮಾತನಾಡುತ್ತಾರೆ. ಕರ್ನಾಟಕ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿದೆ. ಕನ್ನಡ ಸಾಹಿತ್ಯ ಕೃಷಿ ಮಾಡಿರುವ ಮುಸ್ಲಿಂ ಲೇಖಕರನ್ನು ಪಟ್ಟಿ ಮಾಡಿದರೆ ಶೇ. 60ರಷ್ಟು ಲೇಖಕರು ಬ್ಯಾರಿ ಮಾತೃಭಾಷೆಯ ಕನ್ನಡಿಗ ಲೇಖಕರೇ ಇದ್ದಾರೆ. ಇದ್ಯಾವುದನ್ನೂ ಗಮನಿಸದೆ ಸುಮ್ಮನೆ ಬಿಟ್ಟಿದ್ದೀರಿ ಎಂದರೆ ನೀವು ಕನ್ನಡ ಸಾಹಿತ್ಯದ ಬಗ್ಗೆ ಕುರುಡಾಗಿದ್ದೀರಿ ಎಂದರ್ಥ. ನಿಮ್ಮ ಮನಸ್ಸಿನಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ, ಜಾತಿ ದ್ವೇಷ, ಧರ್ಮ ದ್ವೇಷವನ್ನು ನಿಮ್ಮೊಳಗೆ ತುಂಬಿಕೊಂಡಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಸಾಪ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಇಂದು ಉಳಿಯಲಿಲ್ಲ. ಕಸಾಪ ಅಧ್ಯಕ್ಷರಿಗೆ ಇದು ತಿಳಿಯಲಿಲ್ಲವಾ? ಕಸಾಪ ಅಧ್ಯಕ್ಷರು ಕನ್ನಡದ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುತ್ತಾರೆ. ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಹೇಳಿಕೊಳ್ಳುತ್ತಾರೆ. ಶಿಶುನಾಳ ಶರೀಫರ ಪದ ಹಾಡಿಕೊಂಡು ತಿರುತ್ತಾರೆ. ಶರೀಫರು ಯಾರು? ಗುರು ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?” ಎಂದು ಕೇಳಿದರು.

“ಮುಸ್ಲಿಮರಷ್ಟೇ ಅಲ್ಲ. ದಲಿತರು ಎಷ್ಟು ಮಂದಿ ಇದ್ದಾರೆ? ಮಹಿಳೆಯರಿಗೆ ಎಷ್ಟು ಸ್ಥಾನಮಾನ ನೀಡಿದ್ದೀರಿ? ಸ್ವಾಗತ, ವಂದನಾರ್ಪಣೆ, ನಿರೂಪಣೆ ಮಾಡೋದಷ್ಟೇ ಮಹಿಳೆಯರ ಕೆಲಸವಾ?” ಎಂದು ಪ್ರಶ್ನಿಸಿದರು.

ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ಮೂರ್ನಾಲ್ಕು ಬಾರಿ ಕರೆ ಮಾಡಲಾಯಿತು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...