Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

“ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಕಸಾಪ ಅಧ್ಯಕ್ಷರು ಹೇಳಿಕೊಳ್ಳುತ್ತಾರೆ. ಶರೀಫರು ಯಾರು? ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?”

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕಡೆಗಣಿಸಲಾಗಿದ್ದು, ಪರ್ಯಾಯ ಸಮ್ಮೇಳನ ನಡೆಸುವ ಚಿಂತನೆಯನ್ನು ಕನ್ನಡದ ಜಾತ್ಯತೀಯ ಮನಸ್ಸುಗಳು ಮಾಡುತ್ತಿವೆ.

ಕನ್ನಡದ ಪ್ರಾತಿನಿಧಿಕ ಸಂಸ್ಥೆ ಎಂದೇ ಕರೆಯಲಾಗುವ ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಈ ಹಿಂದೆ ಯಾವತ್ತೂ ಈ ರೀತಿಯ ಪ್ರಮಾದವನ್ನು ಮಾಡಿರಲಿಲ್ಲ. ಮಹೇಶ ಜೋಷಿಯವರು ಅಧ್ಯಕ್ಷರಾದ ಮೇಲೆ ವಿವಾದಗಳ ಮೂಲಕ ಸದ್ದು ಮಾಡುತ್ತಿರುವ ಕಸಾಪ, “ಈಗ ಮುಸ್ಲಿಮರನ್ನು ಹೊರಗಿಡುವ ಮಟ್ಟಕ್ಕೆ ತಲುಪಿದೆ” ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

“ಆರ್‌ಎಸ್‌ಎಸ್ ಮನಸ್ಥಿತಿ ಇಲ್ಲಿ ಕೆಲಸ ಮಾಡಿದೆ. ಜಾತಿ ದ್ವೇಷ, ಧರ್ಮದ್ವೇಷ ಢಾಳಾಗಿ ಕಾಣುತ್ತಿದೆ” ಎಂಬ ಟೀಕೆಗೆ ಸಮ್ಮೇಳನ ಗುರಿಯಾಗಿದೆ.

ಕನ್ನಡ ಸಾಹಿತ್ಯ ಪರಿಷತ್‌ ಮಾಡಿರುವ ಎಡವಟ್ಟಿನ ಕುರಿತು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ಫೇಸ್‌ಬು‌ಕ್‌ನಲ್ಲಿ ಪೋಸ್ಟ್ ಮಾಡಿದ್ದು, “ಹಾವೇರಿಯ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಮುಸ್ಲಿಂ ಲೇಖಕರನ್ನು ಹೊರಗಿಟ್ಟಿರುವುದು ಆಕಸ್ಮಿಕ ಏನೂ ಅಲ್ಲ. ನೆಹರೂ ಅಂಥ ಲೇಖಕರನ್ನೇ ಹೊರಗಿಟ್ಟವರಿವರು. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ತನ್ನ ನಿಲುವನ್ನು ನೇರವಾಗಿಯೇ ಪ್ರಕಟಿಸಬೇಕು” ಎಂದು ಆಗ್ರಹಿಸಿದ್ದಾರೆ. ಜೊತೆಗೆ “ಕೆಲವರನ್ನು ಕರೆದಿದ್ದು ಅವರು ಬರುವುದಿಲ್ಲ ಎಂದೂ ಹೇಳಿರಬಹುದು” ಎಂಬ ಮಾತನ್ನೂ ಸೇರಿಸಿದ್ದಾರೆ.

“ಆಧುನಿಕ ಕನ್ನಡ ಸಾಹಿತ್ಯದಲ್ಲಿ ಶಿಶುನಾಳ ಷರೀಫರೇ ನಮಗೆ ಸಿಗುವ ಮೊದಲ ಮಹತ್ವದ ಕವಿ. ಆನಂತರ ಕೆ.ಎಸ್‌.ನಿಸಾರ್‌ ಅಹಮದ್‌, ಬೊಳುವಾರು ಮಹಮ್ಮದ್‌ ಕುಞಿ, ಸಾರಾ ಅಬೂಬಕರ್,‌ ಹಸನ್ ನಯೀಂ ಸುರಕೋಡ, ರಹಮತ್‌ ತರೀಕರೆ ಮೊದಲಾದವರು ಕನ್ನಡದ ಸುಪ್ರಸಿದ್ಧ ಲೇಖಕರು. ಬೊಳುವಾರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕಿತ್ತು. ಅವರಿಗೆ ಜ್ಞಾನಪೀಠ ಪ್ರಶಸ್ತಿಯೂ ಬರಬೇಕು. ದಾದಾಪೀರ್‌ ಜೈನ್ ಅವರಿಗೆ ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಸಬೀಹಾ ಭೂಮಿ ಗೌಡರು ಲೇಖಕಿಯಾಗಿ ಪ್ರಸಿದ್ಧರು” ಎಂದು ಕಸಾಪಕ್ಕೆ ನೆನಪಿಸಿದ್ದಾರೆ.

“ಒಂದಾದರೂ ಪುಸ್ತಕ ಪ್ರಕಟಿಸಿದ ಮುಸ್ಲಿಂ ಲೇಖಕರು ಬಹಳ ಜನ ಇದ್ದಾರೆ. ಬಹುಶಃ ಮುಂದಿನ 10 ವರ್ಷದಲ್ಲಿ ಕನ್ನಡದ ಲೇಖಕರೆಂದರೆ ಮುಸ್ಲಿಮರೇ ಆಗಿರುತ್ತಾರೆ. ಅವರಲ್ಲಿ ನನಗೆ ಕೂಡಲೇ ನೆನಪಿಗೆ ಬರುವವರೆಂದರೆ, ಆರಿಫ್‌ ರಾಜಾ, ಎ.ಕೆ.ಕುಕ್ಕಿಲ, ಬಿ.ಎಂ.ಬಷೀರ್, ಇಸ್ಮಾಯಿಲ್ , ಮಹಮ್ಮದ್‌ ಕುಳಾಯಿ, ಗಂಗಾವತಿ ಸಲೀಮಾ, ಅಬ್ಬುಸ್ಸಲಾಮ್ ಪುತ್ತಿಗೆ, ಇಬ್ರಾಹಿಂ ಸಯೀದ್ ಸಾಬ್, ಸಲಾಂ ಸಮ್ಮಿ, ಬಾನು ಮುಷ್ತಾಕ್, ಫಾತಿಮಾ ರಲಿಯಾ, ಕೆ.ಷರೀಫಾ, ಡಿ.ಬಿ.ರಜಿಯಾ, ಜಹಾನ್ ಆರಾ, ಎ.ಎಸ್.ಮಕಾನದಾರ , ಬಿ.ಪೀರ್ ಭಾಷಾ, ಅಜಮೀರ ನಂದಾಪುರ, ದಸ್ತಗೀರ್ ದಿನ್ನಿ, ಇಮಾಮ್ ಹಡಗಲಿ, ಮುಸ್ತಾಫಾ, ಡಾ.ಮಕ್ತೂಂಬಿ ಮುಲ್ಲಾ, ಶಿ ಜು ಪಾಶಾ, ಮೆಹಬೂಬ್ಬಿ ಶೇಖ್ , ಸಿರಾಜ್ ಬಿಸರಳ್ಳಿ, ನಜ್ಮಾ ನಜೀರ್ ಚಿಕ್ಕನೇರಳೆ, ಮುನವ್ವರ್ ಜೋಗಿಬೆಟ್ಟು, ಬಿ.ಎಂ.ಹನೀಫ್‌, ಮೆಹಬೂಬಭಾಷಾ ಮಕಾನದಾರ, ಬಾಬು ಮನಸೇ, ಹಕೀಂ ಪದಡ್ಕ, ಹಸನ್ಮುಖಿ ಬಡಗನ್ನೂರು, ಆಸೀಫಾ, ನೂರಜಾನ್, ಸಕೀನಾ ಬೇಗಂ, ಸುನೈಫ್ ವಿಟ್ಲ, ಇಮಾಮ್ ಹಡಗಲಿ, ಅಮೀರಸಾಬ ವಂಟಿ, ಉಮರ್ ದೇವರಮನಿ, ಅಮೀನ್ ಅತ್ತಾರ್, ಸಯ್ಯದ್ ಸಿಕಂದರ್ ಮೀರ್ ಅಲಿ, ಚಾಂದ್ ಕವಿಚಂದ್ರ, ಕಾ ಹು ಚಾನಪಾಶಾ, ಸೈಫ್ ಜಾನ್ಸೆ, ರಾಜೇಸಾಬ ಬಾಗವಾನ್, ಶರೀಫ್ ಹಸಮಕಲ್, ಆಶಿಖ್ ಮುಲ್ಕಿ , ಇಮಾಮ್ ಗೋಡೆಕಾರ, ಸಿಹಾನಾ ಎಂ ಬಿ ಮೊದಲಾದವರು” ಎಂದು ಪಟ್ಟಿ ಮಾಡಿದ್ದಾರೆ.

ಮತ್ತೊಂದು ಪೋಸ್ಟ್ ಮಾಡಿರುವ ಅವರು, “ಪರ್ಯಾಯ ಸಮ್ಮೇಳನ ಇವತ್ತಿನ ತುರ್ತು. ದಾವಣಗೆರೆ ಅಥವಾ ಬೆಂಗಳೂರು ಅನುಕೂಲ. ಕೋಲಾರ, ಮೈಸೂರು, ಶಿವಮೊಗ್ಗವೂ ಆದೀತು. ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವ, ಪ್ರೊ.ಬರಗೂರು ರಾಮಚಂದ್ರಪ್ಪ ಬರಬೇಕು. ಪ್ರೊ.ರಾಜೇಂದ್ರ ಚೆನ್ನಿ, ಅರುಣ್‌ ಜೋಳದಕೂಡ್ಲಿಗಿ, ಬಿ.ಎಂ.ಹನೀಫ್‌ ಮೊದಲಾದವರು ಬರುತ್ತಾರೆ. ಅವರವರದೇ ಖರ್ಚು. ಸಭಾಂಗಣ, ಮಧ್ಯಾಹ್ನ ಊಟ, ಧ್ವನಿವರ್ಧಕ, ಚಹಾ ಇತ್ಯಾದಿಗಳಿಗೆ ಕ್ರೌಡ್‌ ಫಂಡಿಂಗ್‌ ಮಾಡೋಣ. ನಾನು ನನ್ನ ಖರ್ಚಲ್ಲಿ ಬರುತ್ತೇನೆ. ಸತ್ಯನಾರಾಯಣ ಪೂಜೆಗೆ ಸುದ್ದಿ ಕೇಳಿಯೇ ಹೋಗಬೇಕಂತೆ. ಇದೂ ಹಾಗೆಯೇ ಆಗಲಿ. ಸಮ್ಮೇಳನದಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ. ಯಾವುದೂ ಯಃಕಶ್ಚಿತವೂ ಅಲ್ಲ. ಯಾರಾದರೂ ಸಮರ್ಥ ನಾಯಕತ್ವ ಕೊಡಿ” ಎಂದು ಕೋರಿದ್ದಾರೆ.

ಬಿಳಿಮಲೆಯವರ ಪೋಸ್ಟ್‌ಗೆ ಹತ್ತಾರು ಲೇಖಕರು ಪ್ರತಿಕ್ರಿಯೆ ನೀಡಿದ್ದು, ಪರ್ಯಾಯ ಸಮ್ಮೇಳನಕ್ಕೆ ಬೆಂಬಲ ನೀಡುತ್ತಿದ್ದಾರೆ.

ಹಿರಿಯ ಪತ್ರಕರ್ತರು ಹಾಗೂ ಲೇಖಕರಾದ ಬಿ.ಎಂ.ಹನೀಫ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಹಾವೇರಿಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸುಮಾರು 80 ಮಂದಿ ಸಾಧಕರಿಗೆ ಸನ್ಮಾನ ಆಗುತ್ತಿದೆ. ಪ್ರತಿಸಲವು ಸನ್ಮಾನ ಮಾಡುವಾಗ ರಾಜ್ಯದ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಈ ವೇದಿಕೆಯಲ್ಲಿ ಗೌರವಿಸಲಾಗುತ್ತಿತ್ತು. ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಸಾಧಕರು ಇವರಿಗೆ ಸಿಗಲಿಲ್ಲವೆಂದರೆ ಇವರು ಸ್ಪಷ್ಟವಾಗಿ ಕಮ್ಯುನಲ್‌ ಆಗಿದ್ದಾರೆ ಎಂದರ್ಥ. ಅಪ್ರಜ್ಞಾಪೂರ್ವಕವಾಗಿ ಮುಸ್ಲಿಮರ ಹೆಸರು ಬಿಟ್ಟು ಹೋಗಿರಲು ಸಾಧ್ಯವಿಲ್ಲ. ಶಿಕ್ಷಣ, ಸಹಕಾರಿ ಕ್ಷೇತ್ರ, ಪತ್ರಿಕೋದ್ಯಮ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆಗೈದ ಮುಸ್ಲಿಮರಿದ್ದಾರೆ” ಎಂದು ವಿವರಿಸಿದರು.

“ಕಾವ್ಯಕ್ಷೇತ್ರದಲ್ಲಿ ಬಹುಮುಖ್ಯವಾಗಿ ಹೆಸರು ಮಾಡಿದವರನ್ನು ಪ್ರಧಾನ ಕವಿಗೋಷ್ಠಿಯಲ್ಲಿ ಗುರುತಿಸಲಾಗುತ್ತದೆ. 25 ಮಂದಿ ಕವಿಗಳಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಬೇರೆ ಕವಿಗೋಷ್ಠಿಗಳಲ್ಲಿ ಹೆಸರಿಗೆ ನಾಲ್ಕು ಮುಸ್ಲಿಮರನ್ನು ಹಾಕಿಕೊಂಡಿದ್ದಾರೆ. ಹಾಗೆ ಆಯ್ಕೆಯಾದವರು ಅನರ್ಹರೇನಲ್ಲ. ಇತ್ತೀಚೆಗೆ ಬರೆಯುತ್ತಿರುವ ಪ್ರತಿಭಾವಂತರೇ ಆಗಿದ್ದಾರೆ. ಆದರೆ ಪ್ರಧಾನ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಗೆ ಯಾವ ಮುಸ್ಲಿಮರೂ ಸಿಗಲಿಲ್ಲವೇ? ಪ್ರಧಾನ ವೇದಿಕೆಯಲ್ಲಿ ನಡೆಯುವ 9 ವಿಚಾರಗೋಷ್ಠಿಗಳಲ್ಲಿ ಸುಮಾರು 34 ಮಂದಿ ಮಾತನಾಡುತ್ತಾರೆ. ಇದರಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ” ಎಂದು ವಿಷಾದಿಸಿದರು.

“ಮುಸ್ಲಿಂ ಎಂದು ಹೇಳಿದ ತಕ್ಷಣ- ತಮ್ಮ ಜಾತಿಯವರ ಬಗ್ಗೆ ಇವರು ಹೇಳುತ್ತಿದ್ದಾನೆಂದು ಕೆಲವರು ಆರೋಪಿಸಬಹುದು. ಆದರೆ ಕನ್ನಡ ಸಾಹಿತ್ಯ ಪರಿಷತ್ ಎಂದಿಗೂ ಕಮ್ಯುನಲ್ ಆಗಿ ವರ್ತಿಸಿಲ್ಲ. ಈ ರೀತಿಯ ತಾರತಮ್ಯ ಎಂದೂ ಆಗಿರಲಿಲ್ಲ. ದಲಿತರು, ಮಹಿಳೆಯರು, ಮುಸ್ಲಿಮರು- ಹೀಗೆ ಎಲ್ಲರಿಗೂ ಪ್ರಾತಿನಿಧ್ಯವನ್ನು ನೀಡಲಾಗುತ್ತಿತ್ತು” ಎಂದು ಸ್ಮರಿಸಿದರು.

“ಹಿರಿಯರ ಸ್ಮರಣೆ ಗೋಷ್ಠಿಗೆ ನಿಸಾರ್‌ ಅಹಮ್ಮದ್ ಅವರ ಹೆಸರು ನೆನಪಾಗಲಿಲ್ಲವಾ? ಕರ್ನಾಟಕ ಪ್ರಾದೇಶಿಕ ವೈವಿಧ್ಯತೆ ಎಂಬ ಗೋಷ್ಠಿ ಇದೆ. ಪ್ರಾದೇಶಿಕ ವೈವಿಧ್ಯತೆ ಎಂದು ತುಳು, ಕೊಂಕಣಿ, ಕೊಡವ, ಅರೆಭಾಷೆಗಳನ್ನು ಗುರುತಿಸಲಾಗಿದೆ. ಆದರೆ ಬ್ಯಾರಿ ಭಾಷೆಯನ್ನು ಏಕೆ ಬಿಟ್ಟಿದ್ದೀರಿ? ರಾಜ್ಯದಲ್ಲಿ ಹದಿನಾಲ್ಕು ಲಕ್ಷ ಮುಸ್ಲಿಮರು ಬ್ಯಾರಿ ಭಾಷೆ ಮಾತನಾಡುತ್ತಾರೆ. ಕರ್ನಾಟಕ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿದೆ. ಕನ್ನಡ ಸಾಹಿತ್ಯ ಕೃಷಿ ಮಾಡಿರುವ ಮುಸ್ಲಿಂ ಲೇಖಕರನ್ನು ಪಟ್ಟಿ ಮಾಡಿದರೆ ಶೇ. 60ರಷ್ಟು ಲೇಖಕರು ಬ್ಯಾರಿ ಮಾತೃಭಾಷೆಯ ಕನ್ನಡಿಗ ಲೇಖಕರೇ ಇದ್ದಾರೆ. ಇದ್ಯಾವುದನ್ನೂ ಗಮನಿಸದೆ ಸುಮ್ಮನೆ ಬಿಟ್ಟಿದ್ದೀರಿ ಎಂದರೆ ನೀವು ಕನ್ನಡ ಸಾಹಿತ್ಯದ ಬಗ್ಗೆ ಕುರುಡಾಗಿದ್ದೀರಿ ಎಂದರ್ಥ. ನಿಮ್ಮ ಮನಸ್ಸಿನಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ, ಜಾತಿ ದ್ವೇಷ, ಧರ್ಮ ದ್ವೇಷವನ್ನು ನಿಮ್ಮೊಳಗೆ ತುಂಬಿಕೊಂಡಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಸಾಪ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಇಂದು ಉಳಿಯಲಿಲ್ಲ. ಕಸಾಪ ಅಧ್ಯಕ್ಷರಿಗೆ ಇದು ತಿಳಿಯಲಿಲ್ಲವಾ? ಕಸಾಪ ಅಧ್ಯಕ್ಷರು ಕನ್ನಡದ ಬಗ್ಗೆ ಕಂಠಶೋಷಣೆ ಮಾಡಿಕೊಳ್ಳುತ್ತಾರೆ. ಗುರುಗೋವಿಂದ ಭಟ್ಟರ ಮೊಮ್ಮಗ ಎಂದು ಹೇಳಿಕೊಳ್ಳುತ್ತಾರೆ. ಶಿಶುನಾಳ ಶರೀಫರ ಪದ ಹಾಡಿಕೊಂಡು ತಿರುತ್ತಾರೆ. ಶರೀಫರು ಯಾರು? ಗುರು ಗೋವಿಂದ ಭಟ್ಟರು ಯಾರು? ಅಷ್ಟೂ ಗೊತ್ತಾಗಲ್ಲವಾ?” ಎಂದು ಕೇಳಿದರು.

“ಮುಸ್ಲಿಮರಷ್ಟೇ ಅಲ್ಲ. ದಲಿತರು ಎಷ್ಟು ಮಂದಿ ಇದ್ದಾರೆ? ಮಹಿಳೆಯರಿಗೆ ಎಷ್ಟು ಸ್ಥಾನಮಾನ ನೀಡಿದ್ದೀರಿ? ಸ್ವಾಗತ, ವಂದನಾರ್ಪಣೆ, ನಿರೂಪಣೆ ಮಾಡೋದಷ್ಟೇ ಮಹಿಳೆಯರ ಕೆಲಸವಾ?” ಎಂದು ಪ್ರಶ್ನಿಸಿದರು.

ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ ಜೋಶಿಯವರ ಪ್ರತಿಕ್ರಿಯೆ ಪಡೆಯಲು ಮೂರ್ನಾಲ್ಕು ಬಾರಿ ಕರೆ ಮಾಡಲಾಯಿತು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...