Homeಮುಖಪುಟವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!

ವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!

- Advertisement -
- Advertisement -

ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ನೀಡಿರುವ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನಾಲ್ಕು ವಾರಗಳ ಕಾಲ ಮುಂದೂಡಿದಿದ್ದಾರೆ. ಆದರೆ, ಈ ವೇಳೆ ಚಂದ್ರಚೂಡ್ ಅವರು ನಿವೃತ್ತಿಯಾಗಲಿದ್ದು, ಅವರ ಅಧಿಕಾರಾವಧಿ ನವೆಂಬರ್ 10ರಂದು ಮುಗಿಯಲಿದೆ.

ದೀಪಾವಳಿ ರಜೆಗಿಂತ ಮೊದಲು ವಿಚಾರಣೆ ಮುಕ್ತಾಯಗೊಳ್ಳದಿದ್ದರೆ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ತೀರ್ಪು ನೀಡಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಈ ವೇಳೆ ಹೇಳಿದ್ದಾರೆ. ಈ ವಿಚಾರದಲ್ಲಿ ವಾದಿಸಲು ಸಂಬಂಧಪಟ್ಟ ಎಲ್ಲ ವಕೀಲರಿಗೆ ಕಾಲಾವಕಾಶ ನೀಡಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನಾಲ್ಕು ವಾರಗಳ ನಂತರ ಮತ್ತೊಂದು ಪೀಠದಿಂದ ವಿಚಾರಣೆಗೆ ಅರ್ಜಿಗಳನ್ನು ನಿಗದಿಪಡಿಸಿತು. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17 ರಂದು ಪ್ರಾರಂಭಿಸಲಾಗಿತ್ತು.

ಭಾರತೀಯ ದಂಡ ಸಂಹಿತೆ (IPC) ಮತ್ತು ಭಾರತೀಯ ನ್ಯಾಯ ಸಂಹಿತೆ (BNS)ಯು ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಪತ್ನಿ ವಿರುದ್ಧ ನಡೆಸುವ ಅತ್ಯಾಚಾರಕ್ಕೆ ವಿನಾಯಿತಿ ನೀಡುತ್ತದೆ. ಇಂತಹ ಪ್ರಕಣದಲ್ಲಿ ಪತಿಯ ವಿರುದ್ಧ ಪತ್ನಿ ನೀಡುವ ದೂರಿಗೆ ಯಾವುದೆ ಕಾನೂನು ಮಾನ್ಯತೆ ಇರುವುದಿಲ್ಲ. ಅದನ್ನು ಪ್ರಸ್ತುತ ಇರುವ ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ.

IPC ಯ ಸೆಕ್ಷನ್ 375 ರ ವಿನಾಯಿತಿ ಷರತ್ತಿನ ಅಡಿಯಲ್ಲಿ, ಪತಿಯು ತನ್ನ ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ಹೆಂಡತಿ ಅಪ್ರಾಪ್ತಳಾಗಿಲ್ಲದೆ ಇದ್ದರೆ ಅದು ಅತ್ಯಾಚಾರವಲ್ಲ.

ಹೊಸ ಬಿಎನ್‌ಎಸ್ ಕಾನೂನಿನ ಅಡಿಯಲ್ಲಿಯೂ ಕೂಡಾ, ಸೆಕ್ಷನ್ 63 (ಅತ್ಯಾಚಾರ) ಗೆ ವಿನಾಯಿತಿ 2, “ಪತಿ ತನ್ನ ಸ್ವಂತ ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ, ಹೆಂಡತಿಯು ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನವಳಾಗಿ ಇರದಿದ್ದರೆ ಅದು ಅತ್ಯಾಚಾರವಲ್ಲ.” ಎಂದು ಹೇಳುತ್ತದೆ.

ಇದನ್ನೂ ಓದಿ: “ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿದ್ದ ಅರ್ಜಿಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಹಿಂದೆ ವಿರೋಧಿಸಿತ್ತು. ಪ್ರಸ್ತುತ ಗಂಡ ಮತ್ತು ಹೆಂಡತಿಯ ನಡುವಿನ ಲೈಂಗಿಕ ಸಂಬಂಧಗಳಿಗೆ ವಿನಾಯಿತಿ ನೀಡುವ ಅತ್ಯಾಚಾರದ ವಿರುದ್ಧದ ಕಾನೂನುಗಳ ಪರವಾಗಿ ಕೇಂದ್ರ ಸರ್ಕಾರ ಬ್ಯಾಟಿಂಗ್ ಮಾಡಿತ್ತು.

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ, ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ವಿಚಾರವಾಗಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ವಿವಿಧ ಮಧ್ಯಸ್ಥಗಾರರೊಂದಿಗೆ ವ್ಯಾಪಕವಾದ ಸಮಾಲೋಚನೆಯ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

“ಭಾರತದಲ್ಲಿ ಮದುವೆಯನ್ನು ಪರಸ್ಪರ ಬಾಧ್ಯತೆಗಳ ಸಂಸ್ಥೆ ಎಂದು ಪರಿಗಣಿಸಲಾಗಿದೆ. ಮದುವೆ ಎಂಬ ಸಂಸ್ಥೆಯಲ್ಲಿ ಪ್ರತಿಜ್ಞೆಗಳನ್ನು ಉಲ್ಲಂಘಿಸಬಾರದು ಎಂದು ಪರಿಗಣಿಸಲಾಗುತ್ತದೆ. ಮದುವೆಯಲ್ಲಿ ಮಹಿಳೆಯರ ಒಪ್ಪಿಗೆ ಶಾಸನಬದ್ಧವಾಗಿ ರಕ್ಷಿಸಲ್ಪಟ್ಟಿದ್ದರೂ, ಇದನ್ನು ನಿಯಂತ್ರಿಸುವ ದಂಡದ ನಿಬಂಧನೆಗಳು ವಿಭಿನ್ನವಾಗಿವೆ” ಎಂದು ಕೇಂದ್ರ ಸರ್ಕಾರ ಹೇಳಿತ್ತು.

ವೈವಾಹಿಕ ಸಂಬಂಧದ ದುರುಪಯೋಗದ ಸಂತ್ರಸ್ತರಿಗೆ ಪ್ರಸ್ತುತ ಕಾನೂನುಗಳ ಅಡಿಯಲ್ಲಿ ಸಾಕಷ್ಟು ಕಾನೂನು ಪರಿಹಾರಗಳು ಈಗಾಗಲೇ ಅಸ್ತಿತ್ವದಲ್ಲಿವೆ. ಈ ವಿನಾಯಿತಿಯನ್ನು ತೆಗೆದುಹಾಕಿದರೆ ಮದುವೆ ಎಂಬ ಸಂಸ್ಥೆಯನ್ನು ಅಸ್ಥಿರಗೊಳಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರವು ವಾದಿಸಿತ್ತು.

ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...