Homeಮುಖಪುಟವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!

ವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!

- Advertisement -
- Advertisement -

ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ನೀಡಿರುವ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನಾಲ್ಕು ವಾರಗಳ ಕಾಲ ಮುಂದೂಡಿದಿದ್ದಾರೆ. ಆದರೆ, ಈ ವೇಳೆ ಚಂದ್ರಚೂಡ್ ಅವರು ನಿವೃತ್ತಿಯಾಗಲಿದ್ದು, ಅವರ ಅಧಿಕಾರಾವಧಿ ನವೆಂಬರ್ 10ರಂದು ಮುಗಿಯಲಿದೆ.

ದೀಪಾವಳಿ ರಜೆಗಿಂತ ಮೊದಲು ವಿಚಾರಣೆ ಮುಕ್ತಾಯಗೊಳ್ಳದಿದ್ದರೆ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ತೀರ್ಪು ನೀಡಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಈ ವೇಳೆ ಹೇಳಿದ್ದಾರೆ. ಈ ವಿಚಾರದಲ್ಲಿ ವಾದಿಸಲು ಸಂಬಂಧಪಟ್ಟ ಎಲ್ಲ ವಕೀಲರಿಗೆ ಕಾಲಾವಕಾಶ ನೀಡಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನಾಲ್ಕು ವಾರಗಳ ನಂತರ ಮತ್ತೊಂದು ಪೀಠದಿಂದ ವಿಚಾರಣೆಗೆ ಅರ್ಜಿಗಳನ್ನು ನಿಗದಿಪಡಿಸಿತು. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17 ರಂದು ಪ್ರಾರಂಭಿಸಲಾಗಿತ್ತು.

ಭಾರತೀಯ ದಂಡ ಸಂಹಿತೆ (IPC) ಮತ್ತು ಭಾರತೀಯ ನ್ಯಾಯ ಸಂಹಿತೆ (BNS)ಯು ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಪತ್ನಿ ವಿರುದ್ಧ ನಡೆಸುವ ಅತ್ಯಾಚಾರಕ್ಕೆ ವಿನಾಯಿತಿ ನೀಡುತ್ತದೆ. ಇಂತಹ ಪ್ರಕಣದಲ್ಲಿ ಪತಿಯ ವಿರುದ್ಧ ಪತ್ನಿ ನೀಡುವ ದೂರಿಗೆ ಯಾವುದೆ ಕಾನೂನು ಮಾನ್ಯತೆ ಇರುವುದಿಲ್ಲ. ಅದನ್ನು ಪ್ರಸ್ತುತ ಇರುವ ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ.

IPC ಯ ಸೆಕ್ಷನ್ 375 ರ ವಿನಾಯಿತಿ ಷರತ್ತಿನ ಅಡಿಯಲ್ಲಿ, ಪತಿಯು ತನ್ನ ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ಹೆಂಡತಿ ಅಪ್ರಾಪ್ತಳಾಗಿಲ್ಲದೆ ಇದ್ದರೆ ಅದು ಅತ್ಯಾಚಾರವಲ್ಲ.

ಹೊಸ ಬಿಎನ್‌ಎಸ್ ಕಾನೂನಿನ ಅಡಿಯಲ್ಲಿಯೂ ಕೂಡಾ, ಸೆಕ್ಷನ್ 63 (ಅತ್ಯಾಚಾರ) ಗೆ ವಿನಾಯಿತಿ 2, “ಪತಿ ತನ್ನ ಸ್ವಂತ ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ, ಹೆಂಡತಿಯು ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನವಳಾಗಿ ಇರದಿದ್ದರೆ ಅದು ಅತ್ಯಾಚಾರವಲ್ಲ.” ಎಂದು ಹೇಳುತ್ತದೆ.

ಇದನ್ನೂ ಓದಿ: “ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿದ್ದ ಅರ್ಜಿಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಹಿಂದೆ ವಿರೋಧಿಸಿತ್ತು. ಪ್ರಸ್ತುತ ಗಂಡ ಮತ್ತು ಹೆಂಡತಿಯ ನಡುವಿನ ಲೈಂಗಿಕ ಸಂಬಂಧಗಳಿಗೆ ವಿನಾಯಿತಿ ನೀಡುವ ಅತ್ಯಾಚಾರದ ವಿರುದ್ಧದ ಕಾನೂನುಗಳ ಪರವಾಗಿ ಕೇಂದ್ರ ಸರ್ಕಾರ ಬ್ಯಾಟಿಂಗ್ ಮಾಡಿತ್ತು.

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ, ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ವಿಚಾರವಾಗಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ವಿವಿಧ ಮಧ್ಯಸ್ಥಗಾರರೊಂದಿಗೆ ವ್ಯಾಪಕವಾದ ಸಮಾಲೋಚನೆಯ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

“ಭಾರತದಲ್ಲಿ ಮದುವೆಯನ್ನು ಪರಸ್ಪರ ಬಾಧ್ಯತೆಗಳ ಸಂಸ್ಥೆ ಎಂದು ಪರಿಗಣಿಸಲಾಗಿದೆ. ಮದುವೆ ಎಂಬ ಸಂಸ್ಥೆಯಲ್ಲಿ ಪ್ರತಿಜ್ಞೆಗಳನ್ನು ಉಲ್ಲಂಘಿಸಬಾರದು ಎಂದು ಪರಿಗಣಿಸಲಾಗುತ್ತದೆ. ಮದುವೆಯಲ್ಲಿ ಮಹಿಳೆಯರ ಒಪ್ಪಿಗೆ ಶಾಸನಬದ್ಧವಾಗಿ ರಕ್ಷಿಸಲ್ಪಟ್ಟಿದ್ದರೂ, ಇದನ್ನು ನಿಯಂತ್ರಿಸುವ ದಂಡದ ನಿಬಂಧನೆಗಳು ವಿಭಿನ್ನವಾಗಿವೆ” ಎಂದು ಕೇಂದ್ರ ಸರ್ಕಾರ ಹೇಳಿತ್ತು.

ವೈವಾಹಿಕ ಸಂಬಂಧದ ದುರುಪಯೋಗದ ಸಂತ್ರಸ್ತರಿಗೆ ಪ್ರಸ್ತುತ ಕಾನೂನುಗಳ ಅಡಿಯಲ್ಲಿ ಸಾಕಷ್ಟು ಕಾನೂನು ಪರಿಹಾರಗಳು ಈಗಾಗಲೇ ಅಸ್ತಿತ್ವದಲ್ಲಿವೆ. ಈ ವಿನಾಯಿತಿಯನ್ನು ತೆಗೆದುಹಾಕಿದರೆ ಮದುವೆ ಎಂಬ ಸಂಸ್ಥೆಯನ್ನು ಅಸ್ಥಿರಗೊಳಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರವು ವಾದಿಸಿತ್ತು.

ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...