Homeಮುಖಪುಟವೈವಾಹಿಕ ಅತ್ಯಾಚಾರ ಅಪರಾಧೀಕರಣ | ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ವಿರೋಧ!

ವೈವಾಹಿಕ ಅತ್ಯಾಚಾರ ಅಪರಾಧೀಕರಣ | ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ವಿರೋಧ!

- Advertisement -
- Advertisement -

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿದ್ದ ಅರ್ಜಿಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿರೋಧಿಸಿದೆ ಎಂದು ವರದಿಯಾಗಿದೆ. ಪ್ರಸ್ತುತ ಗಂಡ ಮತ್ತು ಹೆಂಡತಿಯ ನಡುವಿನ ಲೈಂಗಿಕ ಸಂಬಂಧಗಳಿಗೆ ವಿನಾಯಿತಿ ನೀಡುವ ಅತ್ಯಾಚಾರದ ವಿರುದ್ಧದ ಕಾನೂನುಗಳ ಪರವಾಗಿ ಕೇಂದ್ರ ಸರ್ಕಾರ ಬ್ಯಾಟಿಂಗ್ ಮಾಡಿದೆ ಎಂದು ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ, ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಕಳವಳವಾಗಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ವಿವಿಧ ಮಧ್ಯಸ್ಥಗಾರರೊಂದಿಗೆ ವ್ಯಾಪಕವಾದ ಸಮಾಲೋಚನೆಯ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಇದನ್ನೂ ಓದಿ: Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

ಭಾರತದಲ್ಲಿ ಮದುವೆಯನ್ನು ಪರಸ್ಪರ ಬಾಧ್ಯತೆಗಳ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದ್ದು, ಮದುವೆ ಎಂಬ ಸಂಸ್ಥೆಯಲ್ಲಿ ಪ್ರತಿಜ್ಞೆಗಳನ್ನು ಉಲ್ಲಂಘಿಸಬಾರದು ಎಂದು ಪರಿಗಣಿಸಲಾಗುತ್ತದೆ. ಮದುವೆಯಲ್ಲಿ ಮಹಿಳೆಯರ ಒಪ್ಪಿಗೆ ಶಾಸನಬದ್ಧವಾಗಿ ರಕ್ಷಿಸಲ್ಪಟ್ಟಿದ್ದರೂ, ಇದನ್ನು ನಿಯಂತ್ರಿಸುವ ದಂಡದ ನಿಬಂಧನೆಗಳು ವಿಭಿನ್ನವಾಗಿವೆ ಎಂದು ಅದು ಹೇಳಿದೆ.

ವೈವಾಹಿಕ ಸಂಬಂಧದ ದುರುಪಯೋಗದ ಸಂತ್ರಸ್ತರಿಗೆ ಪ್ರಸ್ತುತ ಕಾನೂನುಗಳ ಅಡಿಯಲ್ಲಿ ಸಾಕಷ್ಟು ಕಾನೂನು ಪರಿಹಾರಗಳು ಈಗಾಗಲೇ ಅಸ್ತಿತ್ವದಲ್ಲಿವೆ. ಈ ವಿನಾಯಿತಿಯನ್ನು ತೆಗೆದುಹಾಕಿದರೆ ಮದುವೆ ಎಂಬ ಸಂಸ್ಥೆಯನ್ನು ಅಸ್ಥಿರಗೊಳಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರವು ವಾದಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ರ ಎಕ್ಸೆಪ್ಶನ್ 2 ರ ಸಿಂಧುತ್ವದ ಕುರಿತು ದೆಹಲಿ ಹೈಕೋರ್ಟ್‌ನ ವಿಭಜಿತ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಪ್ರಸ್ತುತ ಮೇಲ್ಮನವಿಯನ್ನು ವಿಚಾರಣೆ ನಡೆಸುತ್ತಿದೆ. ಈ ಸೆಕ್ಷನ್ ವೈವಾಹಿಕ ಅತ್ಯಾಚಾರದ ಆರೋಪದಿಂದ ಗಂಡಂದಿರಿಗೆ ವಿನಾಯಿತಿ ನೀಡುತ್ತದೆ. ಈ ಬಗ್ಗೆ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ವಿಭಜಿತ ತೀರ್ಪನ್ನು ನೀಡಿತ್ತು. ನ್ಯಾಯಮೂರ್ತಿ ರಾಜೀವ್ ಶಕ್ಧರ್ ಅವರು ಈ ನಿಬಂಧನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದ್ದರು ಹಾಗೂ ನ್ಯಾಯಮೂರ್ತಿ ಸಿ. ಹರಿ ಶಂಕರ್ ಅದನ್ನು ಎತ್ತಿಹಿಡಿದಿದ್ದರು.

ಇದನ್ನೂ ಓದಿ: ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ಜೊತೆಗೆ, ತನ್ನ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯನ್ನು ಲೈಂಗಿಕ ಗುಲಾಮಳನ್ನಾಗಿ ಹಿಡಿದಿಟ್ಟಿದ್ದ ಅತ್ಯಾಚಾರ ಆರೋಪಗಳನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಹೋರಾಟಗಾರ್ತಿ ರುತ್ ಮನೋರಮಾ ಸೇರಿದಂತೆ ಇತರ ಅರ್ಜಿದಾರರು ವೈವಾಹಿಕ ಅತ್ಯಾಚಾರ ವಿನಾಯಿತಿಯು ಮಹಿಳೆಯರ ಒಪ್ಪಿಗೆ, ದೈಹಿಕ ಸ್ವಾಯತ್ತತೆ ಮತ್ತು ಘನತೆಯನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದು, ಅದನ್ನು ತೆಗೆದುಹಾಕಲು ಕರೆ ನೀಡಿದ್ದಾರೆ.

ಆದಾಗ್ಯೂ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಯಾವುದೇ ನಿರ್ಧಾರವನ್ನು ಶಾಸಕಾಂಗವು ತೆಗೆದುಕೊಳ್ಳಬೇಕಾಗಿದ್ದು, ನ್ಯಾಯಾಂಗವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಅದರ ದೂರಗಾಮಿ ಸಾಮಾಜಿಕ ಪರಿಣಾಮಗಳನ್ನು ಪರಿಗಣಿಸಿ ಎಂದು ಕೇಂದ್ರ ಸರ್ಕಾರ ಹೇಳಿದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...