Homeಮುಖಪುಟವೈವಾಹಿಕ ಅತ್ಯಾಚಾರ ಅಪರಾಧೀಕರಣ | ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ವಿರೋಧ!

ವೈವಾಹಿಕ ಅತ್ಯಾಚಾರ ಅಪರಾಧೀಕರಣ | ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ವಿರೋಧ!

- Advertisement -
- Advertisement -

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿದ್ದ ಅರ್ಜಿಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿರೋಧಿಸಿದೆ ಎಂದು ವರದಿಯಾಗಿದೆ. ಪ್ರಸ್ತುತ ಗಂಡ ಮತ್ತು ಹೆಂಡತಿಯ ನಡುವಿನ ಲೈಂಗಿಕ ಸಂಬಂಧಗಳಿಗೆ ವಿನಾಯಿತಿ ನೀಡುವ ಅತ್ಯಾಚಾರದ ವಿರುದ್ಧದ ಕಾನೂನುಗಳ ಪರವಾಗಿ ಕೇಂದ್ರ ಸರ್ಕಾರ ಬ್ಯಾಟಿಂಗ್ ಮಾಡಿದೆ ಎಂದು ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ, ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಕಳವಳವಾಗಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ವಿವಿಧ ಮಧ್ಯಸ್ಥಗಾರರೊಂದಿಗೆ ವ್ಯಾಪಕವಾದ ಸಮಾಲೋಚನೆಯ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಇದನ್ನೂ ಓದಿ: Bride in the Hills | ಕುವೆಂಪು ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ ಮತ್ತೆ ಇಂಗ್ಲಿಷ್‌ಗೆ ಅನುವಾದ

ಭಾರತದಲ್ಲಿ ಮದುವೆಯನ್ನು ಪರಸ್ಪರ ಬಾಧ್ಯತೆಗಳ ಸಂಸ್ಥೆ ಎಂದು ಪರಿಗಣಿಸಲಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದ್ದು, ಮದುವೆ ಎಂಬ ಸಂಸ್ಥೆಯಲ್ಲಿ ಪ್ರತಿಜ್ಞೆಗಳನ್ನು ಉಲ್ಲಂಘಿಸಬಾರದು ಎಂದು ಪರಿಗಣಿಸಲಾಗುತ್ತದೆ. ಮದುವೆಯಲ್ಲಿ ಮಹಿಳೆಯರ ಒಪ್ಪಿಗೆ ಶಾಸನಬದ್ಧವಾಗಿ ರಕ್ಷಿಸಲ್ಪಟ್ಟಿದ್ದರೂ, ಇದನ್ನು ನಿಯಂತ್ರಿಸುವ ದಂಡದ ನಿಬಂಧನೆಗಳು ವಿಭಿನ್ನವಾಗಿವೆ ಎಂದು ಅದು ಹೇಳಿದೆ.

ವೈವಾಹಿಕ ಸಂಬಂಧದ ದುರುಪಯೋಗದ ಸಂತ್ರಸ್ತರಿಗೆ ಪ್ರಸ್ತುತ ಕಾನೂನುಗಳ ಅಡಿಯಲ್ಲಿ ಸಾಕಷ್ಟು ಕಾನೂನು ಪರಿಹಾರಗಳು ಈಗಾಗಲೇ ಅಸ್ತಿತ್ವದಲ್ಲಿವೆ. ಈ ವಿನಾಯಿತಿಯನ್ನು ತೆಗೆದುಹಾಕಿದರೆ ಮದುವೆ ಎಂಬ ಸಂಸ್ಥೆಯನ್ನು ಅಸ್ಥಿರಗೊಳಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರವು ವಾದಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ರ ಎಕ್ಸೆಪ್ಶನ್ 2 ರ ಸಿಂಧುತ್ವದ ಕುರಿತು ದೆಹಲಿ ಹೈಕೋರ್ಟ್‌ನ ವಿಭಜಿತ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಪ್ರಸ್ತುತ ಮೇಲ್ಮನವಿಯನ್ನು ವಿಚಾರಣೆ ನಡೆಸುತ್ತಿದೆ. ಈ ಸೆಕ್ಷನ್ ವೈವಾಹಿಕ ಅತ್ಯಾಚಾರದ ಆರೋಪದಿಂದ ಗಂಡಂದಿರಿಗೆ ವಿನಾಯಿತಿ ನೀಡುತ್ತದೆ. ಈ ಬಗ್ಗೆ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ವಿಭಜಿತ ತೀರ್ಪನ್ನು ನೀಡಿತ್ತು. ನ್ಯಾಯಮೂರ್ತಿ ರಾಜೀವ್ ಶಕ್ಧರ್ ಅವರು ಈ ನಿಬಂಧನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದ್ದರು ಹಾಗೂ ನ್ಯಾಯಮೂರ್ತಿ ಸಿ. ಹರಿ ಶಂಕರ್ ಅದನ್ನು ಎತ್ತಿಹಿಡಿದಿದ್ದರು.

ಇದನ್ನೂ ಓದಿ: ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ಜೊತೆಗೆ, ತನ್ನ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯನ್ನು ಲೈಂಗಿಕ ಗುಲಾಮಳನ್ನಾಗಿ ಹಿಡಿದಿಟ್ಟಿದ್ದ ಅತ್ಯಾಚಾರ ಆರೋಪಗಳನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಹೋರಾಟಗಾರ್ತಿ ರುತ್ ಮನೋರಮಾ ಸೇರಿದಂತೆ ಇತರ ಅರ್ಜಿದಾರರು ವೈವಾಹಿಕ ಅತ್ಯಾಚಾರ ವಿನಾಯಿತಿಯು ಮಹಿಳೆಯರ ಒಪ್ಪಿಗೆ, ದೈಹಿಕ ಸ್ವಾಯತ್ತತೆ ಮತ್ತು ಘನತೆಯನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದು, ಅದನ್ನು ತೆಗೆದುಹಾಕಲು ಕರೆ ನೀಡಿದ್ದಾರೆ.

ಆದಾಗ್ಯೂ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಯಾವುದೇ ನಿರ್ಧಾರವನ್ನು ಶಾಸಕಾಂಗವು ತೆಗೆದುಕೊಳ್ಳಬೇಕಾಗಿದ್ದು, ನ್ಯಾಯಾಂಗವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಅದರ ದೂರಗಾಮಿ ಸಾಮಾಜಿಕ ಪರಿಣಾಮಗಳನ್ನು ಪರಿಗಣಿಸಿ ಎಂದು ಕೇಂದ್ರ ಸರ್ಕಾರ ಹೇಳಿದೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...