Homeರಾಷ್ಟ್ರೀಯವೈವಾಹಿಕ ಅತ್ಯಾಚಾರ: ಭಿನ್ನ ತೀರ್ಪು ನೀಡಿದ ದೆಹಲಿ ಹೈಕೋರ್ಟ್‌‌!; ಸುಪ್ರೀಂ ಮೆಟ್ಟಿಲೇರಲಿರುವ ಅರ್ಜಿದಾರರು

ವೈವಾಹಿಕ ಅತ್ಯಾಚಾರ: ಭಿನ್ನ ತೀರ್ಪು ನೀಡಿದ ದೆಹಲಿ ಹೈಕೋರ್ಟ್‌‌!; ಸುಪ್ರೀಂ ಮೆಟ್ಟಿಲೇರಲಿರುವ ಅರ್ಜಿದಾರರು

ಪತ್ನಿಗೆ ಹಲ್ಲೆ ಮಾಡುವುದು ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವಾಗಿದೆ, ಆದರೆ ಆಕೆಯ ಮೇಲೆ ಅತ್ಯಾಚಾರ ನಡೆಸಿದರೆ ಅದು ಅಪರಾಧವಾಗಿ ಪರಿಗಣಿಸುತ್ತಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವೈವಾಹಿಕ ಅತ್ಯಾಚಾರದ ಅಪರಾಧೀಕರಣದ ಕುರಿತು ದೆಹಲಿ ಹೈಕೋರ್ಟ್ ದ್ವೀಸದಸ್ಯ ಪೀಠವೂ ಬುಧವಾರದಂದು ಭಿನ್ನ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ರ ಅಡಿಯಲ್ಲಿ ಅತ್ಯಾಚಾರ ಕಾನೂನಿನಲ್ಲಿರುವ 2 ನೇ ವಿನಾಯಿತಿ ಅಸಂವಿಧಾನಿಕ ಎಂದು ಪೀಠ ನ್ಯಾಯಮೂರ್ತಿ ರಾಜೀವ್ ಶೇಕ್ಧರ್‌ ಅಭಿಪ್ರಾಯಪಟ್ಟಿದ್ದಾರೆ. ಪತಿಯು ತನ್ನ ಹೆಂಡತಿಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದರೆ, ಪತ್ನಿಯು 15 ವರ್ಷಕ್ಕಿಂತ ಕಡಿಮೆ ವಯಸ್ಸಿನವಳಲ್ಲದಿದ್ದರೆ ಅದು ಅತ್ಯಾಚಾರವಲ್ಲ ಎಂದು 2ನೇ ವಿನಾಯಿತಿ ಹೇಳುತ್ತದೆ.

“ಒಪ್ಪಿಗೆಯಿಲ್ಲದೆ ತನ್ನ ಹೆಂಡತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಪತಿಗೆ ಸಂಬಂಧಿಸಿದಂತೆ ಇದುವರೆಗೆ ವಿಧಿಸಲಾದ ನಿಬಂಧನೆಗಳು ಆರ್ಟಿಕಲ್ 14ರ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಅದನ್ನು ತಳ್ಳಿಹಾಕಲಾಗುತ್ತದೆ” ಎಂದು ನ್ಯಾಯಮೂರ್ತಿ ಶಕ್ಧರ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಹರಿ ಶಂಕರ್‌‌ ಅವರು ಭಿನ್ನವಾದ ತೀರ್ಪನ್ನು ನೀಡಿದ್ದು, ಲೈಂಗಿಕ ಅತ್ಯಾಚಾರದಲ್ಲಿ ಪತಿಗೆ ನೀಡಿರುವ ವಿನಾಯಿತಿಯನ್ನು ತಡೆಹಿಡಿಯುವ ನ್ಯಾಯಮೂರ್ತಿ ಶೇಕ್ಧರ್ ಅವರ ತೀರ್ಪನ್ನು ತಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಅವರು ಸೆಕ್ಷನ್‌ 376ಬಿ (ವಿಚ್ಛೇದನದ ಸಮಯದಲ್ಲಿ ಪತ್ನಿಯ ಮೇಲೆ ಲೈಂಗಿಕ ಕ್ರಿಯೆ ಶಿಕ್ಷಾರ್ಹ) ಮತ್ತು 198 ಬಿ (ಪತಿ-ಪತ್ನಿ ವೈವಾಹಿಕ ಸಂಬಂಧದಲ್ಲಿರುವಾಗ ಅತ್ಯಾಚಾರ ಅಪರಾಧದ ಬಗ್ಗೆ ನ್ಯಾಯಾಲಯ ಪ್ರಕರಣ ತೆಗೆದುಕೊಳ್ಳದಿರುವುದು) ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ.

ಇದನ್ನೂ ಓದಿ: ಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಪೀಠವೂ ಭಿನ್ನ ತೀರ್ಪು ನೀಡಿದ್ದರಿಂದ ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿಯನ್ನೂ ನೀಡಿದ್ದಾರೆ.

ಜನವರಿ 7 ರಿಂದ, ನ್ಯಾಯಮೂರ್ತಿಗಳಾದ ರಾಜೀವ್ ಶಕ್ಧೇರ್ ಮತ್ತು ಸಿ. ಹರಿ ಶಂಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅತ್ಯಾಚಾರ ಕಾನೂನಿನಿಂದ 2ನೇ ವಿನಾಯಿತಿಯನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಕೆಲವು ಅರ್ಜಿಗಳನ್ನು ದೈನಂದಿನ ವಿಚಾರಣೆಯನ್ನು ನಡೆಸುತ್ತಿದೆ.

ಫೆಬ್ರವರಿ 21 ರಂದು ಪೀಠವು ಈ ವಿಷಯದ ಬಗ್ಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎರಡು ಸರ್ಕಾರೇತರ ಸಂಸ್ಥೆಗಳಾದ RIT ಫೌಂಡೇಶನ್ ಮತ್ತು ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್  ಹಾಗೂ ಇಬ್ಬರು ವ್ಯಕ್ತಿಗಳು ವೈವಾಹಿಕ ಅತ್ಯಾಚಾರದ ಬಗ್ಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವೈವಾಹಿಕ ಅತ್ಯಾಚಾರದಲ್ಲಿ ಪತಿಗೆ ನೀಡಿರುವ ವಿನಾಯಿತಿ ಅಸಂವಿಧಾನಿಕವಾಗಿದೆ ಮತ್ತು ಅದನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಇದು ವಿವಾಹಿತ ಮಹಿಳೆಯ ಸಮಾನತೆಯ ಹಕ್ಕು, ಘನತೆಯಿಂದ ಬದುಕುವ ಹಕ್ಕು ಮತ್ತು ಸ್ವಯಂ ಅಭಿವ್ಯಕ್ತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ. ಈ ಎಲ್ಲಾ ಹಕ್ಕುಗಳನ್ನು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಲಾಗಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ವಿಶೇಷವಾಗಿ, ಈ ನಿಬಂಧನೆಯು ಅಸಂಗತತೆಯನ್ನು ಸೃಷ್ಟಿಸುತ್ತದೆ ಎಂದು ಅರ್ಜಿವಾರರು ವಾದಿಸಿದ್ದಾರೆ. ಒಬ್ಬ ತನ್ನ ಪತ್ನಿಗೆ ಹಲ್ಲೆ ಮಾಡುವುದು ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವಾಗಿದೆ. ಆದರೆ ಆಕೆಯ ಮೇಲೆ ಅತ್ಯಾಚಾರ ನಡೆಸಿದರೆ ಅದು ಅಪರಾಧವಾಗಿ ಪರಿಗಣಿಸುತ್ತಿಲ್ಲ ಎಂಬುದು ಎಂದು ಅರ್ಜಿದಾರರು ಸೂಚಿಸಿದ್ದಾರೆ.

ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ: ಅರ್ಜಿದಾರರು

ದೆಹಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಟ್ಟಿದೆ. ಪ್ರಕರಣದಲ್ಲಿ, “ಕಾನೂನಿನ ಗಣನೀಯ ಪ್ರಶ್ನೆಗಳು” ಒಳಗೊಂಡಿವೆ ಎಂದು ಹೈಕೋರ್ಟ್‌ ಹೇಳಿದೆ.

ಇಬ್ಬರು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಕರುಣಾ ನುಂಡಿ ಅವರು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವುದಾಗಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಈ ಕಾನೂನು ದೇಶದ ಮುಖದ ಮೇಲಿರುವ ಕಳಂಕವಾಗಿದೆ” ಎಂದು ಕರುಣಾ ನುಂಡಿ ತಿಳಿಸಿದ್ದಾರೆ. “ವಿವಾಹಿತ ಮಹಿಳೆಯರು ನಾನು ನನ್ನ ಧ್ವನಿಯನ್ನು, ನನ್ನ ದೇಹದ ಮೇಲಿನ ಹಕ್ಕನ್ನು, ಲೈಂಗಿಕ ಸ್ವಾಯತ್ತತೆಯ ಹಕ್ಕನ್ನು ಶಾಶ್ವತವಾಗಿ ಬಿಟ್ಟುಬಿಡುತ್ತೇನೆ ಎಂದು ಹೇಳಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ತಾನು ಪ್ರತಿನಿಧಿಸುವ ಎನ್‌ಜಿಒಗಳು ವೈವಾಹಿಕ ಅತ್ಯಾಚಾರದ ಪ್ರಕರಣಗಳನ್ನು ಪ್ರತಿದಿನವೂ ನೋಡುತ್ತಾ ಇರುತ್ತೇನೆ ಎಂದು ಅವರು ಹೇಳಿದ್ದಾರೆ. ವಿವಾಹಿತ ಸಂಬಂಧದಲ್ಲಿ ಅತ್ಯಾಚಾರಕ್ಕೆ ಕಾನೂನಿನಲ್ಲಿ ಅವಕಾಶಗಳಿಲ್ಲದ ಕಾರಣ ಪ್ರಕರಣಗಳನ್ನು ಪರಿಹರಿಸುವ ವಿಧಾನಗಳು ಸೀಮಿತವಾಗಿವೆ. ಒಕ್ಕೂಟ ಸರ್ಕಾರ ಈ ವಿಷಯದ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಂಡಿದ್ದರೆ ತೀರ್ಪು ಸ್ಪಷ್ಟವಾಗಬಹುದಿತ್ತು ಎಂದು ವಕೀಲೆ ಹೇಳಿದ್ದಾರೆ.

ವೈವಾಹಿಕ ಅತ್ಯಾಚಾರದಲ್ಲಿ ಪತಿಗೆ ನೀಡಿದ ವಿನಾಯಿತಿ ಸಮರ್ಥಿಸಿಕೊಂಡ ಒಕ್ಕೂಟ ಸರ್ಕಾರ!

ಜನವರಿ 12 ರಂದು ಸಲ್ಲಿಸಿದ ಅಫಿಡವಿಟ್‌ನಲ್ಲಿ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವುದರಿಂದ, “ದುರುದ್ದೇಶದಿಂದ ಮಾಡಲಾಗಿರುವ ಸುಳ್ಳು ಪ್ರಕರಣಗಳ ಪ್ರವಾಹ ಹರಿದು ಬರಬಹುದು” ಎಂದು ಒಕ್ಕೂಟ ಸರ್ಕಾರ ಹೇಳಿದೆ. ಫೆಬ್ರವರಿ 3 ರಂದು ಸಲ್ಲಿಸಿದ ಮತ್ತೊಂದು ಅಫಿಡವಿಟ್‌ನಲ್ಲಿ, ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಲು ಸಮಯ ಬೇಕಾಗುತ್ತದೆ ಎಂದಿರುವ ಒಕ್ಕೂಟ ಸರ್ಕಾರ ವಿಚಾರಣೆಯನ್ನು ಮುಂದೂಡಲು ಕೋರಿದೆ.

ಪ್ರಕರಣದಲ್ಲಿ ಒಳಗೊಂಡಿರುವ ಪ್ರಶ್ನೆಗಳು ‘‘ದೂರಗಾಮಿ ಸಾಮಾಜಿಕ-ಕಾನೂನು ಪರಿಣಾಮಗಳನ್ನು’’ ಹೊಂದಿವೆ ಎಂದು ಸರ್ಕಾರ ವಾದಿಸಿತ್ತು ಮತ್ತು ಬಾಕಿ ಉಳಿದಿರುವ ಸಮಾಲೋಚನಾ ಪ್ರಕ್ರಿಯೆಯನ್ನು ಉಲ್ಲೇಖಿಸಿ ವಿಷಯವನ್ನು ಮುಂದೂಡಲು ಪ್ರಯತ್ನಿಸಿದೆ. ಈ ವಿಷಯವು ಕೇವಲ ಕಟ್ಟುನಿಟ್ಟಾದ ಕಾನೂನು ದೃಷ್ಟಿಕೋನಕ್ಕಿಂತ ಹೆಚ್ಚಾಗಿ ಸಮಗ್ರ ವಿಧಾನದ ಅಗತ್ಯವಿದೆ ಎಂದು ಅದು ಹೇಳಿತ್ತು.

ಇದನ್ನೂ ಓದಿ: ಒಡಿಶಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ, ಆತನ ಪತ್ನಿಗೆ 20 ವರ್ಷ ಜೈಲು

ಪ್ರಕರಣದ ಬಗ್ಗೆ 2017 ರಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವುದನ್ನು ಸರ್ಕಾರ ವಿರೋಧಿಸಿತ್ತು, ಇದು ‘ಮದುವೆ’ ಎಂಬ ವ್ಯವಸ್ಥೆಯನ್ನು ಅಸ್ಥಿರಗೊಳಿಸುತ್ತದೆ ಎಂದು ಹೇಳಿತ್ತು.

ಒಕ್ಕೂಟ ಸರ್ಕಾರದ ಅಫಿಡವಿಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ವಕೀಲೆ ಕರುಣಾ ನುಂಡಿ, ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ವಿನಾಯಿತಿಯು ಅಸಾಂವಿಧಾನಿಕವಾಗಿದೆ. ಏಕೆಂದರೆ ಇದು ಮದುವೆಯಲ್ಲಿ ವ್ಯಕ್ತಿಗಳಿಗಿಂತ ಮದುವೆ ಎಂಬ ವ್ಯವಸ್ಥೆಗೆ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...