Homeರಾಷ್ಟ್ರೀಯವೈವಾಹಿಕ ಅತ್ಯಾಚಾರ: ಭಿನ್ನ ತೀರ್ಪು ನೀಡಿದ ದೆಹಲಿ ಹೈಕೋರ್ಟ್‌‌!; ಸುಪ್ರೀಂ ಮೆಟ್ಟಿಲೇರಲಿರುವ ಅರ್ಜಿದಾರರು

ವೈವಾಹಿಕ ಅತ್ಯಾಚಾರ: ಭಿನ್ನ ತೀರ್ಪು ನೀಡಿದ ದೆಹಲಿ ಹೈಕೋರ್ಟ್‌‌!; ಸುಪ್ರೀಂ ಮೆಟ್ಟಿಲೇರಲಿರುವ ಅರ್ಜಿದಾರರು

ಪತ್ನಿಗೆ ಹಲ್ಲೆ ಮಾಡುವುದು ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವಾಗಿದೆ, ಆದರೆ ಆಕೆಯ ಮೇಲೆ ಅತ್ಯಾಚಾರ ನಡೆಸಿದರೆ ಅದು ಅಪರಾಧವಾಗಿ ಪರಿಗಣಿಸುತ್ತಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ

- Advertisement -
- Advertisement -

ವೈವಾಹಿಕ ಅತ್ಯಾಚಾರದ ಅಪರಾಧೀಕರಣದ ಕುರಿತು ದೆಹಲಿ ಹೈಕೋರ್ಟ್ ದ್ವೀಸದಸ್ಯ ಪೀಠವೂ ಬುಧವಾರದಂದು ಭಿನ್ನ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ರ ಅಡಿಯಲ್ಲಿ ಅತ್ಯಾಚಾರ ಕಾನೂನಿನಲ್ಲಿರುವ 2 ನೇ ವಿನಾಯಿತಿ ಅಸಂವಿಧಾನಿಕ ಎಂದು ಪೀಠ ನ್ಯಾಯಮೂರ್ತಿ ರಾಜೀವ್ ಶೇಕ್ಧರ್‌ ಅಭಿಪ್ರಾಯಪಟ್ಟಿದ್ದಾರೆ. ಪತಿಯು ತನ್ನ ಹೆಂಡತಿಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದರೆ, ಪತ್ನಿಯು 15 ವರ್ಷಕ್ಕಿಂತ ಕಡಿಮೆ ವಯಸ್ಸಿನವಳಲ್ಲದಿದ್ದರೆ ಅದು ಅತ್ಯಾಚಾರವಲ್ಲ ಎಂದು 2ನೇ ವಿನಾಯಿತಿ ಹೇಳುತ್ತದೆ.

“ಒಪ್ಪಿಗೆಯಿಲ್ಲದೆ ತನ್ನ ಹೆಂಡತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಪತಿಗೆ ಸಂಬಂಧಿಸಿದಂತೆ ಇದುವರೆಗೆ ವಿಧಿಸಲಾದ ನಿಬಂಧನೆಗಳು ಆರ್ಟಿಕಲ್ 14ರ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಅದನ್ನು ತಳ್ಳಿಹಾಕಲಾಗುತ್ತದೆ” ಎಂದು ನ್ಯಾಯಮೂರ್ತಿ ಶಕ್ಧರ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಹರಿ ಶಂಕರ್‌‌ ಅವರು ಭಿನ್ನವಾದ ತೀರ್ಪನ್ನು ನೀಡಿದ್ದು, ಲೈಂಗಿಕ ಅತ್ಯಾಚಾರದಲ್ಲಿ ಪತಿಗೆ ನೀಡಿರುವ ವಿನಾಯಿತಿಯನ್ನು ತಡೆಹಿಡಿಯುವ ನ್ಯಾಯಮೂರ್ತಿ ಶೇಕ್ಧರ್ ಅವರ ತೀರ್ಪನ್ನು ತಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಅವರು ಸೆಕ್ಷನ್‌ 376ಬಿ (ವಿಚ್ಛೇದನದ ಸಮಯದಲ್ಲಿ ಪತ್ನಿಯ ಮೇಲೆ ಲೈಂಗಿಕ ಕ್ರಿಯೆ ಶಿಕ್ಷಾರ್ಹ) ಮತ್ತು 198 ಬಿ (ಪತಿ-ಪತ್ನಿ ವೈವಾಹಿಕ ಸಂಬಂಧದಲ್ಲಿರುವಾಗ ಅತ್ಯಾಚಾರ ಅಪರಾಧದ ಬಗ್ಗೆ ನ್ಯಾಯಾಲಯ ಪ್ರಕರಣ ತೆಗೆದುಕೊಳ್ಳದಿರುವುದು) ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ.

ಇದನ್ನೂ ಓದಿ: ಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಪೀಠವೂ ಭಿನ್ನ ತೀರ್ಪು ನೀಡಿದ್ದರಿಂದ ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿಯನ್ನೂ ನೀಡಿದ್ದಾರೆ.

ಜನವರಿ 7 ರಿಂದ, ನ್ಯಾಯಮೂರ್ತಿಗಳಾದ ರಾಜೀವ್ ಶಕ್ಧೇರ್ ಮತ್ತು ಸಿ. ಹರಿ ಶಂಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅತ್ಯಾಚಾರ ಕಾನೂನಿನಿಂದ 2ನೇ ವಿನಾಯಿತಿಯನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಕೆಲವು ಅರ್ಜಿಗಳನ್ನು ದೈನಂದಿನ ವಿಚಾರಣೆಯನ್ನು ನಡೆಸುತ್ತಿದೆ.

ಫೆಬ್ರವರಿ 21 ರಂದು ಪೀಠವು ಈ ವಿಷಯದ ಬಗ್ಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎರಡು ಸರ್ಕಾರೇತರ ಸಂಸ್ಥೆಗಳಾದ RIT ಫೌಂಡೇಶನ್ ಮತ್ತು ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್  ಹಾಗೂ ಇಬ್ಬರು ವ್ಯಕ್ತಿಗಳು ವೈವಾಹಿಕ ಅತ್ಯಾಚಾರದ ಬಗ್ಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವೈವಾಹಿಕ ಅತ್ಯಾಚಾರದಲ್ಲಿ ಪತಿಗೆ ನೀಡಿರುವ ವಿನಾಯಿತಿ ಅಸಂವಿಧಾನಿಕವಾಗಿದೆ ಮತ್ತು ಅದನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಇದು ವಿವಾಹಿತ ಮಹಿಳೆಯ ಸಮಾನತೆಯ ಹಕ್ಕು, ಘನತೆಯಿಂದ ಬದುಕುವ ಹಕ್ಕು ಮತ್ತು ಸ್ವಯಂ ಅಭಿವ್ಯಕ್ತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ. ಈ ಎಲ್ಲಾ ಹಕ್ಕುಗಳನ್ನು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಲಾಗಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ವಿಶೇಷವಾಗಿ, ಈ ನಿಬಂಧನೆಯು ಅಸಂಗತತೆಯನ್ನು ಸೃಷ್ಟಿಸುತ್ತದೆ ಎಂದು ಅರ್ಜಿವಾರರು ವಾದಿಸಿದ್ದಾರೆ. ಒಬ್ಬ ತನ್ನ ಪತ್ನಿಗೆ ಹಲ್ಲೆ ಮಾಡುವುದು ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವಾಗಿದೆ. ಆದರೆ ಆಕೆಯ ಮೇಲೆ ಅತ್ಯಾಚಾರ ನಡೆಸಿದರೆ ಅದು ಅಪರಾಧವಾಗಿ ಪರಿಗಣಿಸುತ್ತಿಲ್ಲ ಎಂಬುದು ಎಂದು ಅರ್ಜಿದಾರರು ಸೂಚಿಸಿದ್ದಾರೆ.

ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ: ಅರ್ಜಿದಾರರು

ದೆಹಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಟ್ಟಿದೆ. ಪ್ರಕರಣದಲ್ಲಿ, “ಕಾನೂನಿನ ಗಣನೀಯ ಪ್ರಶ್ನೆಗಳು” ಒಳಗೊಂಡಿವೆ ಎಂದು ಹೈಕೋರ್ಟ್‌ ಹೇಳಿದೆ.

ಇಬ್ಬರು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಕರುಣಾ ನುಂಡಿ ಅವರು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವುದಾಗಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಈ ಕಾನೂನು ದೇಶದ ಮುಖದ ಮೇಲಿರುವ ಕಳಂಕವಾಗಿದೆ” ಎಂದು ಕರುಣಾ ನುಂಡಿ ತಿಳಿಸಿದ್ದಾರೆ. “ವಿವಾಹಿತ ಮಹಿಳೆಯರು ನಾನು ನನ್ನ ಧ್ವನಿಯನ್ನು, ನನ್ನ ದೇಹದ ಮೇಲಿನ ಹಕ್ಕನ್ನು, ಲೈಂಗಿಕ ಸ್ವಾಯತ್ತತೆಯ ಹಕ್ಕನ್ನು ಶಾಶ್ವತವಾಗಿ ಬಿಟ್ಟುಬಿಡುತ್ತೇನೆ ಎಂದು ಹೇಳಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ತಾನು ಪ್ರತಿನಿಧಿಸುವ ಎನ್‌ಜಿಒಗಳು ವೈವಾಹಿಕ ಅತ್ಯಾಚಾರದ ಪ್ರಕರಣಗಳನ್ನು ಪ್ರತಿದಿನವೂ ನೋಡುತ್ತಾ ಇರುತ್ತೇನೆ ಎಂದು ಅವರು ಹೇಳಿದ್ದಾರೆ. ವಿವಾಹಿತ ಸಂಬಂಧದಲ್ಲಿ ಅತ್ಯಾಚಾರಕ್ಕೆ ಕಾನೂನಿನಲ್ಲಿ ಅವಕಾಶಗಳಿಲ್ಲದ ಕಾರಣ ಪ್ರಕರಣಗಳನ್ನು ಪರಿಹರಿಸುವ ವಿಧಾನಗಳು ಸೀಮಿತವಾಗಿವೆ. ಒಕ್ಕೂಟ ಸರ್ಕಾರ ಈ ವಿಷಯದ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಂಡಿದ್ದರೆ ತೀರ್ಪು ಸ್ಪಷ್ಟವಾಗಬಹುದಿತ್ತು ಎಂದು ವಕೀಲೆ ಹೇಳಿದ್ದಾರೆ.

ವೈವಾಹಿಕ ಅತ್ಯಾಚಾರದಲ್ಲಿ ಪತಿಗೆ ನೀಡಿದ ವಿನಾಯಿತಿ ಸಮರ್ಥಿಸಿಕೊಂಡ ಒಕ್ಕೂಟ ಸರ್ಕಾರ!

ಜನವರಿ 12 ರಂದು ಸಲ್ಲಿಸಿದ ಅಫಿಡವಿಟ್‌ನಲ್ಲಿ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವುದರಿಂದ, “ದುರುದ್ದೇಶದಿಂದ ಮಾಡಲಾಗಿರುವ ಸುಳ್ಳು ಪ್ರಕರಣಗಳ ಪ್ರವಾಹ ಹರಿದು ಬರಬಹುದು” ಎಂದು ಒಕ್ಕೂಟ ಸರ್ಕಾರ ಹೇಳಿದೆ. ಫೆಬ್ರವರಿ 3 ರಂದು ಸಲ್ಲಿಸಿದ ಮತ್ತೊಂದು ಅಫಿಡವಿಟ್‌ನಲ್ಲಿ, ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಲು ಸಮಯ ಬೇಕಾಗುತ್ತದೆ ಎಂದಿರುವ ಒಕ್ಕೂಟ ಸರ್ಕಾರ ವಿಚಾರಣೆಯನ್ನು ಮುಂದೂಡಲು ಕೋರಿದೆ.

ಪ್ರಕರಣದಲ್ಲಿ ಒಳಗೊಂಡಿರುವ ಪ್ರಶ್ನೆಗಳು ‘‘ದೂರಗಾಮಿ ಸಾಮಾಜಿಕ-ಕಾನೂನು ಪರಿಣಾಮಗಳನ್ನು’’ ಹೊಂದಿವೆ ಎಂದು ಸರ್ಕಾರ ವಾದಿಸಿತ್ತು ಮತ್ತು ಬಾಕಿ ಉಳಿದಿರುವ ಸಮಾಲೋಚನಾ ಪ್ರಕ್ರಿಯೆಯನ್ನು ಉಲ್ಲೇಖಿಸಿ ವಿಷಯವನ್ನು ಮುಂದೂಡಲು ಪ್ರಯತ್ನಿಸಿದೆ. ಈ ವಿಷಯವು ಕೇವಲ ಕಟ್ಟುನಿಟ್ಟಾದ ಕಾನೂನು ದೃಷ್ಟಿಕೋನಕ್ಕಿಂತ ಹೆಚ್ಚಾಗಿ ಸಮಗ್ರ ವಿಧಾನದ ಅಗತ್ಯವಿದೆ ಎಂದು ಅದು ಹೇಳಿತ್ತು.

ಇದನ್ನೂ ಓದಿ: ಒಡಿಶಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ, ಆತನ ಪತ್ನಿಗೆ 20 ವರ್ಷ ಜೈಲು

ಪ್ರಕರಣದ ಬಗ್ಗೆ 2017 ರಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವುದನ್ನು ಸರ್ಕಾರ ವಿರೋಧಿಸಿತ್ತು, ಇದು ‘ಮದುವೆ’ ಎಂಬ ವ್ಯವಸ್ಥೆಯನ್ನು ಅಸ್ಥಿರಗೊಳಿಸುತ್ತದೆ ಎಂದು ಹೇಳಿತ್ತು.

ಒಕ್ಕೂಟ ಸರ್ಕಾರದ ಅಫಿಡವಿಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ವಕೀಲೆ ಕರುಣಾ ನುಂಡಿ, ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ವಿನಾಯಿತಿಯು ಅಸಾಂವಿಧಾನಿಕವಾಗಿದೆ. ಏಕೆಂದರೆ ಇದು ಮದುವೆಯಲ್ಲಿ ವ್ಯಕ್ತಿಗಳಿಗಿಂತ ಮದುವೆ ಎಂಬ ವ್ಯವಸ್ಥೆಗೆ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...