Homeಮುಖಪುಟವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

- Advertisement -
- Advertisement -

ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪವಾಗಿದೆ ಎಂದು ಅರ್ಜಿದಾರರು ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಹೇಳಿದ್ದಾರೆ. ಆದರೆ, ದೆಹಲಿ ಸರ್ಕಾರವು, ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಇದನ್ನು “ಕ್ರೌರ್ಯದ ಅಪರಾಧ” ಎಂದು ಈಗಾಗಲೇ ಪರಿಗಣಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದೆ. ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್‌ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

“ವೈವಾಹಿಕ ಅತ್ಯಾಚಾರ ನಮ್ಮ ಮನೆಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯದ ದೊಡ್ಡ ರೂಪವಾಗಿದೆ. ಮದುವೆಯ ಪದ್ದತಿಯಲ್ಲಿ ಎಷ್ಟು ಬಾರಿ ಅತ್ಯಾಚಾರ ನಡೆಯುತ್ತದೆ? ಅದು ಯಾಕೆ ವರದಿಯಾಗುವುದಿಲ್ಲ? ಈ ಅಂಕಿಅಂಶವನ್ನು ವರದಿ ಮಾಡಲಾಗಿಲ್ಲ ಅಥವಾ ವಿಶ್ಲೇಷಿಸಲಾಗಿಲ್ಲ” ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಹೇಳಿದ್ದಾರೆ. ಸಂತ್ರಸ್ತರ ಸಹಾಯಕ್ಕೆ ಕುಟುಂಬಗಳು ಅಥವಾ ಪೊಲೀಸ್ ಅಧಿಕಾರಿಗಳು ಬರುವುದಿಲ್ಲ ಎಂದು ಅವರು ವಾದಿಸಿದರು.

ಇದನ್ನೂ ಓದಿ:ಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

ಭಾರತೀಯ ಅತ್ಯಾಚಾರ ಕಾನೂನಿನಡಿಯಲ್ಲಿ ಅತ್ಯಾಚಾರದ ಬಗ್ಗೆ ಗಂಡಂದಿರಿಗೆ ನೀಡಿರುವ ವಿನಾಯಿತಿಯನ್ನು ರದ್ದುಪಡಿಸುವಂತೆ ಕೋರಿ ಆರ್‌ಐಟಿ ಫೌಂಡೇಶನ್ ಎಂಬ ಎನ್‌ಜಿಒ, ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್ ಸೇರಿದಂತೆ ಒಬ್ಬ ಮಹಿಳೆ ಮತ್ತು ಪುರುಷ ಈ ಸಾರ್ವಜನಿಯ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.

ಅರ್ಜಿದಾರ ಮಹಿಳೆಯನ್ನು ಪ್ರತಿನಿಧಿಸಿದ ಗೊನ್ಸಾಲ್ವೆಸ್, “ಪ್ರಪಂಚದಾದ್ಯಂತದ ನ್ಯಾಯಾಲಯಗಳು ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಗುರುತಿಸಿವೆ” ಎಂದು ವಾದಿಸಿದ್ದಾರೆ.

ಪ್ರತಿ ಕಾನೂನಿನ ಅಡಿಯಲ್ಲಿ ವಿವಾಹಿತ ಮಹಿಳೆಯರು ಮತ್ತು ಅವಿವಾಹಿತ ಮಹಿಳೆಯರನ್ನು ವಿಭಿನ್ನವಾಗಿ ಇರಿಸಲಾಗಿದೆ ಎಂದು ದೆಹಲಿ ಸರ್ಕಾರದ ವಕೀಲರಾದ ನಂದಿತಾ ರಾವ್ ಹೇಳಿದ್ದಾರೆ.

“ಭಾರತದಲ್ಲಿ ವೈವಾಹಿಕ ಅತ್ಯಾಚಾರವು ಕ್ರೌರ್ಯದ ಅಪರಾಧವಾಗಿದೆ. ವಿವಾಹಿತ ಮಹಿಳೆಯರು ಮತ್ತು ಅವಿವಾಹಿತ ಮಹಿಳೆಯರು ಪ್ರತಿಯೊಂದು ಕಾನೂನಿನ ಅಡಿಯಲ್ಲಿ ವಿಭಿನ್ನರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಹೆಣ್ಣುಮಕ್ಕಳ ಮದುವೆ ವಯಸ್ಸು ಹೆಚ್ಚಿಸುವ ಮಸೂದೆ ಪರಿಶೀಲಿಸುವ 31 ಸದಸ್ಯರ ಸಮಿತಿಯಲ್ಲಿ ಕೇವಲ ಒಬ್ಬರೇ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...