Homeಮುಖಪುಟವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

- Advertisement -
- Advertisement -

ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪವಾಗಿದೆ ಎಂದು ಅರ್ಜಿದಾರರು ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಹೇಳಿದ್ದಾರೆ. ಆದರೆ, ದೆಹಲಿ ಸರ್ಕಾರವು, ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಇದನ್ನು “ಕ್ರೌರ್ಯದ ಅಪರಾಧ” ಎಂದು ಈಗಾಗಲೇ ಪರಿಗಣಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದೆ. ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್‌ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

“ವೈವಾಹಿಕ ಅತ್ಯಾಚಾರ ನಮ್ಮ ಮನೆಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯದ ದೊಡ್ಡ ರೂಪವಾಗಿದೆ. ಮದುವೆಯ ಪದ್ದತಿಯಲ್ಲಿ ಎಷ್ಟು ಬಾರಿ ಅತ್ಯಾಚಾರ ನಡೆಯುತ್ತದೆ? ಅದು ಯಾಕೆ ವರದಿಯಾಗುವುದಿಲ್ಲ? ಈ ಅಂಕಿಅಂಶವನ್ನು ವರದಿ ಮಾಡಲಾಗಿಲ್ಲ ಅಥವಾ ವಿಶ್ಲೇಷಿಸಲಾಗಿಲ್ಲ” ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಹೇಳಿದ್ದಾರೆ. ಸಂತ್ರಸ್ತರ ಸಹಾಯಕ್ಕೆ ಕುಟುಂಬಗಳು ಅಥವಾ ಪೊಲೀಸ್ ಅಧಿಕಾರಿಗಳು ಬರುವುದಿಲ್ಲ ಎಂದು ಅವರು ವಾದಿಸಿದರು.

ಇದನ್ನೂ ಓದಿ:ಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

ಭಾರತೀಯ ಅತ್ಯಾಚಾರ ಕಾನೂನಿನಡಿಯಲ್ಲಿ ಅತ್ಯಾಚಾರದ ಬಗ್ಗೆ ಗಂಡಂದಿರಿಗೆ ನೀಡಿರುವ ವಿನಾಯಿತಿಯನ್ನು ರದ್ದುಪಡಿಸುವಂತೆ ಕೋರಿ ಆರ್‌ಐಟಿ ಫೌಂಡೇಶನ್ ಎಂಬ ಎನ್‌ಜಿಒ, ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್ ಸೇರಿದಂತೆ ಒಬ್ಬ ಮಹಿಳೆ ಮತ್ತು ಪುರುಷ ಈ ಸಾರ್ವಜನಿಯ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.

ಅರ್ಜಿದಾರ ಮಹಿಳೆಯನ್ನು ಪ್ರತಿನಿಧಿಸಿದ ಗೊನ್ಸಾಲ್ವೆಸ್, “ಪ್ರಪಂಚದಾದ್ಯಂತದ ನ್ಯಾಯಾಲಯಗಳು ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಗುರುತಿಸಿವೆ” ಎಂದು ವಾದಿಸಿದ್ದಾರೆ.

ಪ್ರತಿ ಕಾನೂನಿನ ಅಡಿಯಲ್ಲಿ ವಿವಾಹಿತ ಮಹಿಳೆಯರು ಮತ್ತು ಅವಿವಾಹಿತ ಮಹಿಳೆಯರನ್ನು ವಿಭಿನ್ನವಾಗಿ ಇರಿಸಲಾಗಿದೆ ಎಂದು ದೆಹಲಿ ಸರ್ಕಾರದ ವಕೀಲರಾದ ನಂದಿತಾ ರಾವ್ ಹೇಳಿದ್ದಾರೆ.

“ಭಾರತದಲ್ಲಿ ವೈವಾಹಿಕ ಅತ್ಯಾಚಾರವು ಕ್ರೌರ್ಯದ ಅಪರಾಧವಾಗಿದೆ. ವಿವಾಹಿತ ಮಹಿಳೆಯರು ಮತ್ತು ಅವಿವಾಹಿತ ಮಹಿಳೆಯರು ಪ್ರತಿಯೊಂದು ಕಾನೂನಿನ ಅಡಿಯಲ್ಲಿ ವಿಭಿನ್ನರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಹೆಣ್ಣುಮಕ್ಕಳ ಮದುವೆ ವಯಸ್ಸು ಹೆಚ್ಚಿಸುವ ಮಸೂದೆ ಪರಿಶೀಲಿಸುವ 31 ಸದಸ್ಯರ ಸಮಿತಿಯಲ್ಲಿ ಕೇವಲ ಒಬ್ಬರೇ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...