Homeಮುಖಪುಟವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

- Advertisement -
- Advertisement -

ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪವಾಗಿದೆ ಎಂದು ಅರ್ಜಿದಾರರು ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಹೇಳಿದ್ದಾರೆ. ಆದರೆ, ದೆಹಲಿ ಸರ್ಕಾರವು, ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಇದನ್ನು “ಕ್ರೌರ್ಯದ ಅಪರಾಧ” ಎಂದು ಈಗಾಗಲೇ ಪರಿಗಣಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದೆ. ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್‌ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

“ವೈವಾಹಿಕ ಅತ್ಯಾಚಾರ ನಮ್ಮ ಮನೆಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯದ ದೊಡ್ಡ ರೂಪವಾಗಿದೆ. ಮದುವೆಯ ಪದ್ದತಿಯಲ್ಲಿ ಎಷ್ಟು ಬಾರಿ ಅತ್ಯಾಚಾರ ನಡೆಯುತ್ತದೆ? ಅದು ಯಾಕೆ ವರದಿಯಾಗುವುದಿಲ್ಲ? ಈ ಅಂಕಿಅಂಶವನ್ನು ವರದಿ ಮಾಡಲಾಗಿಲ್ಲ ಅಥವಾ ವಿಶ್ಲೇಷಿಸಲಾಗಿಲ್ಲ” ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಹೇಳಿದ್ದಾರೆ. ಸಂತ್ರಸ್ತರ ಸಹಾಯಕ್ಕೆ ಕುಟುಂಬಗಳು ಅಥವಾ ಪೊಲೀಸ್ ಅಧಿಕಾರಿಗಳು ಬರುವುದಿಲ್ಲ ಎಂದು ಅವರು ವಾದಿಸಿದರು.

ಇದನ್ನೂ ಓದಿ:ಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

ಭಾರತೀಯ ಅತ್ಯಾಚಾರ ಕಾನೂನಿನಡಿಯಲ್ಲಿ ಅತ್ಯಾಚಾರದ ಬಗ್ಗೆ ಗಂಡಂದಿರಿಗೆ ನೀಡಿರುವ ವಿನಾಯಿತಿಯನ್ನು ರದ್ದುಪಡಿಸುವಂತೆ ಕೋರಿ ಆರ್‌ಐಟಿ ಫೌಂಡೇಶನ್ ಎಂಬ ಎನ್‌ಜಿಒ, ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್ ಸೇರಿದಂತೆ ಒಬ್ಬ ಮಹಿಳೆ ಮತ್ತು ಪುರುಷ ಈ ಸಾರ್ವಜನಿಯ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.

ಅರ್ಜಿದಾರ ಮಹಿಳೆಯನ್ನು ಪ್ರತಿನಿಧಿಸಿದ ಗೊನ್ಸಾಲ್ವೆಸ್, “ಪ್ರಪಂಚದಾದ್ಯಂತದ ನ್ಯಾಯಾಲಯಗಳು ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಗುರುತಿಸಿವೆ” ಎಂದು ವಾದಿಸಿದ್ದಾರೆ.

ಪ್ರತಿ ಕಾನೂನಿನ ಅಡಿಯಲ್ಲಿ ವಿವಾಹಿತ ಮಹಿಳೆಯರು ಮತ್ತು ಅವಿವಾಹಿತ ಮಹಿಳೆಯರನ್ನು ವಿಭಿನ್ನವಾಗಿ ಇರಿಸಲಾಗಿದೆ ಎಂದು ದೆಹಲಿ ಸರ್ಕಾರದ ವಕೀಲರಾದ ನಂದಿತಾ ರಾವ್ ಹೇಳಿದ್ದಾರೆ.

“ಭಾರತದಲ್ಲಿ ವೈವಾಹಿಕ ಅತ್ಯಾಚಾರವು ಕ್ರೌರ್ಯದ ಅಪರಾಧವಾಗಿದೆ. ವಿವಾಹಿತ ಮಹಿಳೆಯರು ಮತ್ತು ಅವಿವಾಹಿತ ಮಹಿಳೆಯರು ಪ್ರತಿಯೊಂದು ಕಾನೂನಿನ ಅಡಿಯಲ್ಲಿ ವಿಭಿನ್ನರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಹೆಣ್ಣುಮಕ್ಕಳ ಮದುವೆ ವಯಸ್ಸು ಹೆಚ್ಚಿಸುವ ಮಸೂದೆ ಪರಿಶೀಲಿಸುವ 31 ಸದಸ್ಯರ ಸಮಿತಿಯಲ್ಲಿ ಕೇವಲ ಒಬ್ಬರೇ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...