Homeಮುಖಪುಟಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುತ್ತದೆ: ರಾಹುಲ್ ಗಾಂಧಿ ವಿಡಿಯೋ ವೈರಲ್

ಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುತ್ತದೆ: ರಾಹುಲ್ ಗಾಂಧಿ ವಿಡಿಯೋ ವೈರಲ್

ಇದು ರಾಹುಲ್ ಗಾಂಧಿಗೆ ಪ್ರಮುಖ ರಾಜಕೀಯ ಗೆಲುವು. ಅವರು ಯಾರಿಗೂ ಮಣಿಯದೆ ಧರಣಿ ನಿರತ ರೈತರ ಬೆಂಬಲಕ್ಕೆ ನಿಂತರು -ಪತ್ರಕರ್ತೆ ಸ್ವಾತು ಚತುರ್ವೇದಿ

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ರದ್ದಾಗಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾನೂನಿಗೆ ಒತ್ತಾಯಿಸಿ ಸತತ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಮತ್ತು ದೇಶಾದ್ಯಂತ ನಡೆದ ಚಾರಿತ್ರಿಕ ರೈತ ಹೋರಾಟಕ್ಕೆ ಜಯ ಲಭಿಸಿದೆ. ದಿಟ್ಟ ರೈತ ಹೋರಾಟ ಎದುರು ಮಂಡಿಯೂರಿರುವ ನರೇಂದ್ರ ಮೋದಿ ಸರ್ಕಾರ ಕೊನೆಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದು ಅನ್ಯಾಯದ ವಿರುದ್ಧ ಜಯ ಎಂದು ಕರೆದಿದ್ದಾರೆ.

“ಈ ದೇಶದ ಅನ್ನದಾತರು ತಮ್ಮ ಸತ್ಯಾಗ್ರಹದಿಂದ ಅಹಂಕಾರದ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದಾರೆ.

ಇದರೊಟ್ಟಿಗೆ ರಾಹುಲ್ ಗಾಂಧಿ ಈ ವರ್ಷದ ಜನವರಿ 14 ರಂದು ಮಾಧ್ಯಮಗಳೆದುರು ರೈತ ಹೋರಾಟ ಬೆಂಬಲಿಸಿ ಮಾತನಾಡಿದ್ದ ವಿಡಿಯೋವನ್ನು ಸಹ ಹಂಚಿಕೊಂಡಿದ್ದಾರೆ. ಅದರಲ್ಲಿ “ಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುತ್ತದೆ” ಎಂದು ಆತ್ಮವಿಶ್ವಾಸದಿಂದ ಎಂದು ಅವರು ಮಾತನಾಡಿದ್ದರು. ಅದು ಇಂದು ನಿಜವಾದ ಹಿನ್ನೆಲೆಯಲ್ಲಿ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆ ವೈರಲ್ ವಿಡಿಯೋದಲ್ಲಿ, “ರೈತರ ಹೋರಾಟದ ಬಗ್ಗೆ ಅತೀವ ಹೆಮ್ಮೆಯೆನಿಸುತ್ತಿದೆ. ನಾನು ರೈತರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಮುಂದೆಯು ರೈತರೊಂದಿಗೆ ನಿಲ್ಲುತ್ತೇನೆ. ಅವರ ಹಕ್ಕೊತ್ತಾಯಗಳನ್ನು ಪಂಜಾಬ್ ಯಾತ್ರೆಯಲ್ಲಿ ಮುನ್ನೆಲೆಗೆ ತರುತ್ತೇನೆ. ಬರೆದಿಟ್ಟುಕೊಳ್ಳಿ, ನಾನು ಹೇಳುತ್ತೇನೆ, ಒತ್ತಾಯದಿಂದ ಈ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುತ್ತದೆ. ನಾನು ಹೇಳಿದ್ದನ್ನು ನೆನಪಿಟ್ಟುಕೊಳ್ಳಿ, ಧನ್ಯವಾದಗಳು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದು ರಾಹುಲ್ ಗಾಂಧಿಗೆ ಪ್ರಮುಖ ರಾಜಕೀಯ ಗೆಲುವು. ಅವರು ಯಾರಿಗೂ ಮಣಿಯದೆ ಧರಣಿ ನಿರತ ರೈತರ ಬೆಂಬಲಕ್ಕೆ ನಿಂತರು ಎಂದು ಪತ್ರಕರ್ತೆ ಸ್ವಾತು ಚತುರ್ವೇದಿಯವರು ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಕೃಷಿ ಕಾನೂನುಗಳು, ನೋಟು ಅಮಾನ್ಯೀಕರಣ, ಭೂ ಸ್ವಾಧೀನ ಮಸೂದೆ, ಕರೋನಾ ಮತ್ತು ವ್ಯಾಕ್ಸಿನೇಷನ್, GST (ಗಬ್ಬರ್ ಸಿಂಗ್ ತೆರಿಗೆ). ರಾಹುಲ್ ಗಾಂಧಿ ಮೊದಲೇ ಹೇಳಿದ್ದ ಈ ಐದು ವಿಷಯಗಳು 100% ಸರಿಯಾಗಿದ್ದವು. ಅವರು ಮೋದಿಯವರಂತೆ ತಮ್ಮ ನಿಲುವನ್ನು ಎಂದಿಗೂ ಬದಲಾಯಿಸುವುದಿಲ್ಲ. ಅವರು ತನ್ನ ನಂಬಿಕೆಗಳಿಗೆ ಬದ್ಧನಾಗಿರುತ್ತಾರೆ ಮತ್ತು ಯಾವಾಗಲೂ ಸರಿ ಎಂದು ಸಾಬೀತುಪಡಿಸುತ್ತಾನೆ. ರಾಹುಲ್ ಗಾಂಧಿ ದೂರದೃಷ್ಟಿಯ ನಾಯಕ ಎಂದು ಕಾಂಗ್ರೆಸ್ ವಕ್ತಾರ ಶ್ರೀವತ್ಸ ಬರೆದಿದ್ದಾರೆ.

ಮತ್ತಷ್ಟು ಜನರ ಅನಿಸಿಕೆಗಳು ಈ ಕೆಳಗಿನಂತಿವೆ.


ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...