Homeಮುಖಪುಟಮದುವೆಯಲ್ಲಿ ನೀಡುವ ಉಡುಗೊರೆಗಳು ವರದಕ್ಷಿಣೆಯಲ್ಲ: ಕೇರಳ ಹೈಕೋರ್ಟ್

ಮದುವೆಯಲ್ಲಿ ನೀಡುವ ಉಡುಗೊರೆಗಳು ವರದಕ್ಷಿಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವರದಕ್ಷಿಣೆ ನಿಷೇಧ ಕಾಯಿದೆ-1961ರ ಅಡಿಯಲ್ಲಿ ವಧುವಿನ ಒಳಿತಿಗಾಗಿ ಮದುವೆಯ ಸಮಯದಲ್ಲಿ ನೀಡಿದ ಉಡುಗೊರೆಗಳನ್ನು ವರದಕ್ಷಿಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ.

“ಮದುವೆಯ ಸಮಯದಲ್ಲಿ ವಧುವಿಗೆ ಯಾವುದೇ ಬೇಡಿಕೆಯಿಲ್ಲದೆ ನೀಡಿದ ಉಡುಗೊರೆಗಳು ಮತ್ತು ಈ ಕಾಯಿದೆಯಡಿಯಲ್ಲಿ ಮಾಡಲಾದ ನಿಯಮಗಳಿಗೆ ಅನುಸಾರವಾಗಿ ನಿರ್ವಹಿಸಲಾದ ಪಟ್ಟಿಯಲ್ಲಿ ನಮೂದಿಸಲಾದ ವರದಕ್ಷಿಣೆ ನೀಡುವುದು ಅಥವಾ ತೆಗೆದುಕೊಳ್ಳುವುದನ್ನು ನಿಷೇಧಿಸುವ ಸೆಕ್ಷನ್ 3 (1) ರ ವ್ಯಾಪ್ತಿಯಲ್ಲಿ ಬರುವುದಿಲ್ಲ” ಎಂದು ನ್ಯಾಯಮೂರ್ತಿ ಎಂ.ಆರ್. ಅನಿತಾ ಹೇಳಿದ್ದಾರೆ.

ಇದನ್ನೂ ಓದಿ:ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

ಕೊಲ್ಲಂನ ವರದಕ್ಷಿಣೆ ನಿಷೇಧ ಅಧಿಕಾರಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಕೇರಳ ಹೈಕೋರ್ಟ್‌ನ ತೀರ್ಪು ಈ ನೀಡಿದೆ. ಕೊಲ್ಲಂ ನಿವಾಸಿಯಾಗಿರುವ ಅರ್ಜಿದಾರರೊಬ್ಬರಿಗೆ ಅವರ ಪತ್ನಿಯ ಕುಟುಂಬದವರು ಉಡುಗೊರೆಯಾಗಿ ನೀಡಿದ ಆಭರಣಗಳನ್ನು ಮತ್ತೇ ಅವರಿಗೆ ಹಿಂದಿರುಗಿಸುವಂತೆ ಸೂಚಿಸಲಾಗಿತ್ತು.

ದಂಪತಿಯ ಹೆಸರಿನಲ್ಲಿ ಚಿನ್ನಾಭರಣಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇರಿಸಲಾಗಿತ್ತು. ಪತಿಯೊಂದಿಗೆ ಸಂಬಂಧ ಹಳಸಿದ ಹಿನ್ನೆಲೆಯಲ್ಲಿ ಅರ್ಜಿದಾರರ ಪತ್ನಿ ವರದಕ್ಷಿಣೆ ನಿಷೇಧ ಅಧಿಕಾರಿಯನ್ನು ಸಂಪರ್ಕಿಸಿದ್ದರು ಮತ್ತು ಎಲ್ಲಾ ಉಡುಗೊರೆಗಳನ್ನು ಹಿಂತಿರುಗಿಸಲು ಒತ್ತಾಯಿಸಿದ್ದರು.

ಆಭರಣಗಳು ಅಥವಾ ಉಡುಗೊರೆಗಳು ವರದಕ್ಷಿಣೆಯಾಗಿದ್ದರೆ ಮಾತ್ರ ಅಂತಹ ಆದೇಶವನ್ನು ಹೊರಡಿಸಲು ವರದಕ್ಷಿಣೆ ನಿಷೇಧ ಅಧಿಕಾರಿಗೆ ಅಧಿಕಾರವಿದೆ ಎಂದು ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ. ಆದರೆ ಈ ಪ್ರಕರಣದಲ್ಲಿ ಉಡುಗೊರೆಗಳು ವರದಕ್ಷಿಣೆ ಅಲ್ಲ ಎಂದು ಹೇಳಿದೆ.

ಇದನ್ನೂ ಓದಿ:ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ಆದರೆ, ವಿಷಯ ಇತ್ಯರ್ಥವಾಗಿದ್ದು, ಆಭರಣಗಳನ್ನು ಹಿಂದಿರುಗಿಸಲು ಅರ್ಜಿದಾರರು ಒಪ್ಪಿದ ನಂತರವೇ ಅರ್ಜಿಯ ವಿಚಾರಣೆ ನಡೆಯಿತು.

2021 ರಲ್ಲಿ, ಕೇರಳ ಸರ್ಕಾರವು ವರದಕ್ಷಿಣೆ ನಿಷೇಧ ಕಾನೂನನ್ನು ತಿದ್ದುಪಡಿ ಮಾಡಿತ್ತು ಮತ್ತು ರಾಜ್ಯದಲ್ಲಿ ವರದಕ್ಷಿಣೆ-ಸಂಬಂಧಿತ ಕಿರುಕುಳ ಮತ್ತು ಅಪರಾಧವನ್ನು ತಡೆಗಟ್ಟಲು ಜಿಲ್ಲೆಗಳಲ್ಲಿ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಿಸಿತ್ತು.

ಮದುವೆ ಸಮಾರಂಭದಲ್ಲಿ ನೀಡಿದ ಬೆಲೆಬಾಳುವ ವಸ್ತುಗಳನ್ನು ಮೂರು ತಿಂಗಳೊಳಗೆ ಮಹಿಳೆಗೆ ವರ್ಗಾಯಿಸಬೇಕು ಎಂದು ಈ ಕಾನೂನು ಆದೇಶಿಸುತ್ತದೆ.

ವರನ ಕುಟುಂಬವು ವರದಕ್ಷಿಣೆಗೆ ಬೇಡಿಕೆಯಿಟ್ಟು, ತಮ್ಮ ಬೇಡಿಕೆ ಪೂರೈಸದಿದ್ದರೆ ಮದುವೆ ನಿಲ್ಲಿಸುವುದಾಗಿ ಬೆದರಿಸುವ ಪ್ರಕರಣಗಳನ್ನು ಸಹ ಈ ಅಧಿಕಾರಿಗಳು ಪರಿಶೀಲಿಸುತ್ತಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಿಗೆ ಅವರ ಜಿಲ್ಲೆಗಳಲ್ಲಿ ವರದಕ್ಷಿಣೆ ನಿಷೇಧ ಅಧಿಕಾರಿಗಳಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ನೀಡಲಾಗಿದೆ.

ಇದನ್ನೂ ಓದಿ:ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...