Homeಮುಖಪುಟಮದುವೆಯಲ್ಲಿ ನೀಡುವ ಉಡುಗೊರೆಗಳು ವರದಕ್ಷಿಣೆಯಲ್ಲ: ಕೇರಳ ಹೈಕೋರ್ಟ್

ಮದುವೆಯಲ್ಲಿ ನೀಡುವ ಉಡುಗೊರೆಗಳು ವರದಕ್ಷಿಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವರದಕ್ಷಿಣೆ ನಿಷೇಧ ಕಾಯಿದೆ-1961ರ ಅಡಿಯಲ್ಲಿ ವಧುವಿನ ಒಳಿತಿಗಾಗಿ ಮದುವೆಯ ಸಮಯದಲ್ಲಿ ನೀಡಿದ ಉಡುಗೊರೆಗಳನ್ನು ವರದಕ್ಷಿಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ.

“ಮದುವೆಯ ಸಮಯದಲ್ಲಿ ವಧುವಿಗೆ ಯಾವುದೇ ಬೇಡಿಕೆಯಿಲ್ಲದೆ ನೀಡಿದ ಉಡುಗೊರೆಗಳು ಮತ್ತು ಈ ಕಾಯಿದೆಯಡಿಯಲ್ಲಿ ಮಾಡಲಾದ ನಿಯಮಗಳಿಗೆ ಅನುಸಾರವಾಗಿ ನಿರ್ವಹಿಸಲಾದ ಪಟ್ಟಿಯಲ್ಲಿ ನಮೂದಿಸಲಾದ ವರದಕ್ಷಿಣೆ ನೀಡುವುದು ಅಥವಾ ತೆಗೆದುಕೊಳ್ಳುವುದನ್ನು ನಿಷೇಧಿಸುವ ಸೆಕ್ಷನ್ 3 (1) ರ ವ್ಯಾಪ್ತಿಯಲ್ಲಿ ಬರುವುದಿಲ್ಲ” ಎಂದು ನ್ಯಾಯಮೂರ್ತಿ ಎಂ.ಆರ್. ಅನಿತಾ ಹೇಳಿದ್ದಾರೆ.

ಇದನ್ನೂ ಓದಿ:ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

ಕೊಲ್ಲಂನ ವರದಕ್ಷಿಣೆ ನಿಷೇಧ ಅಧಿಕಾರಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಕೇರಳ ಹೈಕೋರ್ಟ್‌ನ ತೀರ್ಪು ಈ ನೀಡಿದೆ. ಕೊಲ್ಲಂ ನಿವಾಸಿಯಾಗಿರುವ ಅರ್ಜಿದಾರರೊಬ್ಬರಿಗೆ ಅವರ ಪತ್ನಿಯ ಕುಟುಂಬದವರು ಉಡುಗೊರೆಯಾಗಿ ನೀಡಿದ ಆಭರಣಗಳನ್ನು ಮತ್ತೇ ಅವರಿಗೆ ಹಿಂದಿರುಗಿಸುವಂತೆ ಸೂಚಿಸಲಾಗಿತ್ತು.

ದಂಪತಿಯ ಹೆಸರಿನಲ್ಲಿ ಚಿನ್ನಾಭರಣಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇರಿಸಲಾಗಿತ್ತು. ಪತಿಯೊಂದಿಗೆ ಸಂಬಂಧ ಹಳಸಿದ ಹಿನ್ನೆಲೆಯಲ್ಲಿ ಅರ್ಜಿದಾರರ ಪತ್ನಿ ವರದಕ್ಷಿಣೆ ನಿಷೇಧ ಅಧಿಕಾರಿಯನ್ನು ಸಂಪರ್ಕಿಸಿದ್ದರು ಮತ್ತು ಎಲ್ಲಾ ಉಡುಗೊರೆಗಳನ್ನು ಹಿಂತಿರುಗಿಸಲು ಒತ್ತಾಯಿಸಿದ್ದರು.

ಆಭರಣಗಳು ಅಥವಾ ಉಡುಗೊರೆಗಳು ವರದಕ್ಷಿಣೆಯಾಗಿದ್ದರೆ ಮಾತ್ರ ಅಂತಹ ಆದೇಶವನ್ನು ಹೊರಡಿಸಲು ವರದಕ್ಷಿಣೆ ನಿಷೇಧ ಅಧಿಕಾರಿಗೆ ಅಧಿಕಾರವಿದೆ ಎಂದು ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ. ಆದರೆ ಈ ಪ್ರಕರಣದಲ್ಲಿ ಉಡುಗೊರೆಗಳು ವರದಕ್ಷಿಣೆ ಅಲ್ಲ ಎಂದು ಹೇಳಿದೆ.

ಇದನ್ನೂ ಓದಿ:ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ಆದರೆ, ವಿಷಯ ಇತ್ಯರ್ಥವಾಗಿದ್ದು, ಆಭರಣಗಳನ್ನು ಹಿಂದಿರುಗಿಸಲು ಅರ್ಜಿದಾರರು ಒಪ್ಪಿದ ನಂತರವೇ ಅರ್ಜಿಯ ವಿಚಾರಣೆ ನಡೆಯಿತು.

2021 ರಲ್ಲಿ, ಕೇರಳ ಸರ್ಕಾರವು ವರದಕ್ಷಿಣೆ ನಿಷೇಧ ಕಾನೂನನ್ನು ತಿದ್ದುಪಡಿ ಮಾಡಿತ್ತು ಮತ್ತು ರಾಜ್ಯದಲ್ಲಿ ವರದಕ್ಷಿಣೆ-ಸಂಬಂಧಿತ ಕಿರುಕುಳ ಮತ್ತು ಅಪರಾಧವನ್ನು ತಡೆಗಟ್ಟಲು ಜಿಲ್ಲೆಗಳಲ್ಲಿ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಿಸಿತ್ತು.

ಮದುವೆ ಸಮಾರಂಭದಲ್ಲಿ ನೀಡಿದ ಬೆಲೆಬಾಳುವ ವಸ್ತುಗಳನ್ನು ಮೂರು ತಿಂಗಳೊಳಗೆ ಮಹಿಳೆಗೆ ವರ್ಗಾಯಿಸಬೇಕು ಎಂದು ಈ ಕಾನೂನು ಆದೇಶಿಸುತ್ತದೆ.

ವರನ ಕುಟುಂಬವು ವರದಕ್ಷಿಣೆಗೆ ಬೇಡಿಕೆಯಿಟ್ಟು, ತಮ್ಮ ಬೇಡಿಕೆ ಪೂರೈಸದಿದ್ದರೆ ಮದುವೆ ನಿಲ್ಲಿಸುವುದಾಗಿ ಬೆದರಿಸುವ ಪ್ರಕರಣಗಳನ್ನು ಸಹ ಈ ಅಧಿಕಾರಿಗಳು ಪರಿಶೀಲಿಸುತ್ತಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಿಗೆ ಅವರ ಜಿಲ್ಲೆಗಳಲ್ಲಿ ವರದಕ್ಷಿಣೆ ನಿಷೇಧ ಅಧಿಕಾರಿಗಳಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ನೀಡಲಾಗಿದೆ.

ಇದನ್ನೂ ಓದಿ:ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...