Homeಮುಖಪುಟಮದುವೆಯಲ್ಲಿ ನೀಡುವ ಉಡುಗೊರೆಗಳು ವರದಕ್ಷಿಣೆಯಲ್ಲ: ಕೇರಳ ಹೈಕೋರ್ಟ್

ಮದುವೆಯಲ್ಲಿ ನೀಡುವ ಉಡುಗೊರೆಗಳು ವರದಕ್ಷಿಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವರದಕ್ಷಿಣೆ ನಿಷೇಧ ಕಾಯಿದೆ-1961ರ ಅಡಿಯಲ್ಲಿ ವಧುವಿನ ಒಳಿತಿಗಾಗಿ ಮದುವೆಯ ಸಮಯದಲ್ಲಿ ನೀಡಿದ ಉಡುಗೊರೆಗಳನ್ನು ವರದಕ್ಷಿಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ.

“ಮದುವೆಯ ಸಮಯದಲ್ಲಿ ವಧುವಿಗೆ ಯಾವುದೇ ಬೇಡಿಕೆಯಿಲ್ಲದೆ ನೀಡಿದ ಉಡುಗೊರೆಗಳು ಮತ್ತು ಈ ಕಾಯಿದೆಯಡಿಯಲ್ಲಿ ಮಾಡಲಾದ ನಿಯಮಗಳಿಗೆ ಅನುಸಾರವಾಗಿ ನಿರ್ವಹಿಸಲಾದ ಪಟ್ಟಿಯಲ್ಲಿ ನಮೂದಿಸಲಾದ ವರದಕ್ಷಿಣೆ ನೀಡುವುದು ಅಥವಾ ತೆಗೆದುಕೊಳ್ಳುವುದನ್ನು ನಿಷೇಧಿಸುವ ಸೆಕ್ಷನ್ 3 (1) ರ ವ್ಯಾಪ್ತಿಯಲ್ಲಿ ಬರುವುದಿಲ್ಲ” ಎಂದು ನ್ಯಾಯಮೂರ್ತಿ ಎಂ.ಆರ್. ಅನಿತಾ ಹೇಳಿದ್ದಾರೆ.

ಇದನ್ನೂ ಓದಿ:ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

ಕೊಲ್ಲಂನ ವರದಕ್ಷಿಣೆ ನಿಷೇಧ ಅಧಿಕಾರಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಕೇರಳ ಹೈಕೋರ್ಟ್‌ನ ತೀರ್ಪು ಈ ನೀಡಿದೆ. ಕೊಲ್ಲಂ ನಿವಾಸಿಯಾಗಿರುವ ಅರ್ಜಿದಾರರೊಬ್ಬರಿಗೆ ಅವರ ಪತ್ನಿಯ ಕುಟುಂಬದವರು ಉಡುಗೊರೆಯಾಗಿ ನೀಡಿದ ಆಭರಣಗಳನ್ನು ಮತ್ತೇ ಅವರಿಗೆ ಹಿಂದಿರುಗಿಸುವಂತೆ ಸೂಚಿಸಲಾಗಿತ್ತು.

ದಂಪತಿಯ ಹೆಸರಿನಲ್ಲಿ ಚಿನ್ನಾಭರಣಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇರಿಸಲಾಗಿತ್ತು. ಪತಿಯೊಂದಿಗೆ ಸಂಬಂಧ ಹಳಸಿದ ಹಿನ್ನೆಲೆಯಲ್ಲಿ ಅರ್ಜಿದಾರರ ಪತ್ನಿ ವರದಕ್ಷಿಣೆ ನಿಷೇಧ ಅಧಿಕಾರಿಯನ್ನು ಸಂಪರ್ಕಿಸಿದ್ದರು ಮತ್ತು ಎಲ್ಲಾ ಉಡುಗೊರೆಗಳನ್ನು ಹಿಂತಿರುಗಿಸಲು ಒತ್ತಾಯಿಸಿದ್ದರು.

ಆಭರಣಗಳು ಅಥವಾ ಉಡುಗೊರೆಗಳು ವರದಕ್ಷಿಣೆಯಾಗಿದ್ದರೆ ಮಾತ್ರ ಅಂತಹ ಆದೇಶವನ್ನು ಹೊರಡಿಸಲು ವರದಕ್ಷಿಣೆ ನಿಷೇಧ ಅಧಿಕಾರಿಗೆ ಅಧಿಕಾರವಿದೆ ಎಂದು ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ. ಆದರೆ ಈ ಪ್ರಕರಣದಲ್ಲಿ ಉಡುಗೊರೆಗಳು ವರದಕ್ಷಿಣೆ ಅಲ್ಲ ಎಂದು ಹೇಳಿದೆ.

ಇದನ್ನೂ ಓದಿ:ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ಆದರೆ, ವಿಷಯ ಇತ್ಯರ್ಥವಾಗಿದ್ದು, ಆಭರಣಗಳನ್ನು ಹಿಂದಿರುಗಿಸಲು ಅರ್ಜಿದಾರರು ಒಪ್ಪಿದ ನಂತರವೇ ಅರ್ಜಿಯ ವಿಚಾರಣೆ ನಡೆಯಿತು.

2021 ರಲ್ಲಿ, ಕೇರಳ ಸರ್ಕಾರವು ವರದಕ್ಷಿಣೆ ನಿಷೇಧ ಕಾನೂನನ್ನು ತಿದ್ದುಪಡಿ ಮಾಡಿತ್ತು ಮತ್ತು ರಾಜ್ಯದಲ್ಲಿ ವರದಕ್ಷಿಣೆ-ಸಂಬಂಧಿತ ಕಿರುಕುಳ ಮತ್ತು ಅಪರಾಧವನ್ನು ತಡೆಗಟ್ಟಲು ಜಿಲ್ಲೆಗಳಲ್ಲಿ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಿಸಿತ್ತು.

ಮದುವೆ ಸಮಾರಂಭದಲ್ಲಿ ನೀಡಿದ ಬೆಲೆಬಾಳುವ ವಸ್ತುಗಳನ್ನು ಮೂರು ತಿಂಗಳೊಳಗೆ ಮಹಿಳೆಗೆ ವರ್ಗಾಯಿಸಬೇಕು ಎಂದು ಈ ಕಾನೂನು ಆದೇಶಿಸುತ್ತದೆ.

ವರನ ಕುಟುಂಬವು ವರದಕ್ಷಿಣೆಗೆ ಬೇಡಿಕೆಯಿಟ್ಟು, ತಮ್ಮ ಬೇಡಿಕೆ ಪೂರೈಸದಿದ್ದರೆ ಮದುವೆ ನಿಲ್ಲಿಸುವುದಾಗಿ ಬೆದರಿಸುವ ಪ್ರಕರಣಗಳನ್ನು ಸಹ ಈ ಅಧಿಕಾರಿಗಳು ಪರಿಶೀಲಿಸುತ್ತಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಿಗೆ ಅವರ ಜಿಲ್ಲೆಗಳಲ್ಲಿ ವರದಕ್ಷಿಣೆ ನಿಷೇಧ ಅಧಿಕಾರಿಗಳಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ನೀಡಲಾಗಿದೆ.

ಇದನ್ನೂ ಓದಿ:ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...