Homeಮುಖಪುಟಮದುವೆ ಆಮಿಷವೊಡ್ಡಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿದ ದುಷ್ಕರ್ಮಿ!

ಮದುವೆ ಆಮಿಷವೊಡ್ಡಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿದ ದುಷ್ಕರ್ಮಿ!

- Advertisement -
- Advertisement -

ಮದುವೆ ಆಮಿಷ ನೀಡಿ 77 ಮಹಿಳೆಯರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೂಚಿ ವಂಚಿಸಿದ್ದ 43 ವರ್ಷದ ದರೋಡೆಕೋರನನ್ನು ಒರಿಸ್ಸಾ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯು ಕಳೆದ 10 ವರ್ಷಗಳಲ್ಲಿ ಸುಮಾರು 7 ರಾಜ್ಯಗಳ ಮಹಿಳೆಯರ ವಿರುದ್ಧ ಈ ಕೃತ್ಯ ಎಸಗಿದ್ದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಅಂಗುಲ್‌ನ ಚೆಂಡಿಪಾಡಾ ಮೂಲದ ಬಿರಂಚಿ ನಾರಾಯಣನಾಥ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿದ ಸಿಐಡಿ-ಸಿಬಿಯ ಸೈಬರ್ ಕ್ರೈಂ ಘಟಕವು ಆತನಿಂದ ವಶಪಡಿಸಿದ ಮೂರು ಮೊಬೈಲ್ ಫೋನ್‌ಗಳಿಂದ ವಾಟ್ಸಾಪ್ ಚಾಟ್‌ಗಳ ಜೊತೆಗೆ ಮಹಿಳೆಯರ 300 ಕ್ಕೂ ಹೆಚ್ಚು ನಿಕಟ ಫೋಟೋಗಳನ್ನು ಕಂಡುಕೊಂಡಿದೆ.

ಆರೋಪಿಯಿಂದ ವಂಚನೆಗೊಳಗಾದವರ ನಿಖರ ಸಂಖ್ಯೆಯನ್ನು ಸಿಬಿ ಖಚಿತಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 2013ರಿಂದಲೂ ಈತ ಇಂತಹ ವಂಚನೆ ಮಾಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯು ಒರಿಸ್ಸಾ ಮಾತ್ರವಲ್ಲದೆ ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಮತ್ತು ನವದೆಹಲಿಯಾದ್ಯಂತ ಮಹಿಳೆಯರಿಗೆ ವಂಚನೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಒರಿಸ್ಸಾದಲ್ಲಿ, ಬೈದ್ಯನಾಥಪುರ, ಜರ್ಪದ, ಬಾಲಸೋರ್ ಸದರ್, ಛೇಂಡ್, ಧೆಂಕನಲ್ ಟೌನ್, ನಯಾಪಲ್ಲಿ, ಬಲಿಪಟ್ನಾ ಮತ್ತು ಅಂಗುಲ್ ಟೌನ್ ಪೊಲೀಸ್ ಠಾಣೆಗಳಲ್ಲಿ ಮಹಿಳೆಯರನ್ನು ಮದುವೆಯಾಗಿ ಸುಲಿಗೆ ಮಾಡಿದ್ದಕ್ಕಾಗಿ ಈತನ ವಿರುದ್ಧ ಈ ಹಿಂದೆ ಕನಿಷ್ಠ ಒಂಬತ್ತು ಪ್ರಕರಣಗಳು ದಾಖಲಾಗಿದ್ದವು ವರದಿ ಹೇಳಿವೆ.

ಇದನ್ನೂಓದಿ: “ನಾವೂ ತಲ್ವಾರ್ ಹಿಡಿಯುತ್ತೇವೆ”: ಪ್ರಚೋದನಕಾರಿ ಹೇಳಿಕೆ ಕೊಟ್ಟ ಪ್ರತಾಪ್ ಸಿಂಹ

ಆರೋಪಿಯು ಕನಿಷ್ಠ ಮೂರು ಬಾರಿ ಜೈಲಿಗೆ ಹೋಗಿ ಬಂದರೂ ತನ್ನ ವಂಚನೆಯನ್ನು ಮುಂದುವರೆಸಿದ್ದನು. ಆತನ ತಾನು ರೈಲ್ವೆ, ಆದಾಯ ತೆರಿಗೆ ಇಲಾಖೆ, ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಮತ್ತು ನರಶಸ್ತ್ರಚಿಕಿತ್ಸಕನ ಉದ್ಯೋಗಿ ಎಂದು ಬಿಂಬಿಸಿ ಮಹಿಳೆಯರಿಗೆ ವಂಚಿಸಿದ್ದನು. ಜೊತೆಗೆ ತಾನು ರಾಜ್ಯಶಾಸ್ತ್ರ, ಇಂಗ್ಲಿಷ್ ಹಾಗೂ ಕಾನೂನಿನಲ್ಲಿ ಎಂಎ ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದಾನೆ.

ನಾಲ್ಕು ಭಾಷೆಗಳಲ್ಲಿ ಸ್ಪಷ್ಟ ಮತ್ತು ನಿರರ್ಗಳವಾಗಿ ಮಾತನಾಡುವ ಆರೋಪಿ, ದೇವಾಲಯಗಳಲ್ಲಿ ಹಲವು ಮಹಿಳೆಯರಿಗೆ ತಾಳಿ ಕಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೈವಾಹಿಕ ಸೈಟ್‌ಗಳಲ್ಲಿ, ಆರೋಪಿ ನಾರಾಯಣನಾಥ್ ಹೆಚ್ಚಾಗಿ ಮಧ್ಯವಯಸ್ಸಿನ ಮಹಿಳೆಯರು ಪ್ರತ್ಯೇಕಗೊಂಡ ಅಥವಾ ವಿಚ್ಛೇದನ ಮತ್ತು ವಿಧವೆಯರನ್ನು ಗುರಿಯಾಗಿಸಿಕೊಂಡಿದ್ದನು. ತನ್ನ ಮೂಲ ಹೆಸರನ್ನು ಮರೆಮಾಚಿ, ಪ್ರವಾಕರ್ ಶ್ರೀವಾಸ್ತವ್ ಮತ್ತು ಮಾನಸ್ ರಾತ್ ಅವರಂತಹ ನಕಲಿ ಗುರುತುಗಳನ್ನು ಬಳಸುತ್ತಿದ್ದನು.

ಮಹಿಳೆಯರನ್ನು ಮದುವೆಯಾದ ನಂತರ ಅವರ ಮನೆಗಳಲ್ಲಿಯೇ ಇರುತ್ತಿದ್ದ ಆರೋಪಿ, ಅವರಲ್ಲಿ ಯಾರನ್ನೂ ತನ್ನ ಮನೆಗೆ ಕರೆದುಕೊಂಡು ಹೋಗಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ:‘ಶ್ರೀ ವಿಜಯ ಪುರಂ’ | ಅಂಡಮಾನ್ ನಿಕೋಬರ್‌ ರಾಜಧಾನಿ ‘ಪೋರ್ಟ್ ಬ್ಲೇರ್’ ಮರುನಾಮಕರಣ

2022 ರಲ್ಲಿ ರಸ್ತೆ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದ ಕಟಕ್‌ನ ಮಹಿಳೆಯನ್ನು ಆರೋಪಿ ಸಂಪರ್ಕಿಸಿದ್ದನು ಎಂದು ಸಿಬಿ ದಾಖಲಿಸಿದ ಪ್ರಕರಣದಲ್ಲಿ ಹೇಳಿದೆ. ಸಂತ್ರಸ್ತೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರವಾಕರ್ ಶ್ರೀವಾಸ್ತವ್ ಎಂಬ ನಕಲಿ ಹೆಸರಿನಲ್ಲಿದ್ದ ಆರೋಪಿಯ ಸಂಪರ್ಕಕ್ಕೆ ಬಂದಿದ್ದರು. ಆಗ ಆರೋಪಿ ತಾನು ವಿಶಾಖಪಟ್ಟಣಂನಲ್ಲಿ ರೈಲ್ವೇಯಲ್ಲಿ ಪ್ರಯಾಣ ಟಿಕೆಟ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದನು.

ವಂಚನೆಯಿಂದ ಮಹಿಳೆಯನ್ನು ಮದುವೆಯಾದ ನಂತರ, ನಾರಾಯಣನಾಥ್ ಸುಮಾರು ಐದು ತಿಂಗಳ ಕಾಲ ಮಹಿಳೆಯ ಮನೆಯಲ್ಲಿದ್ದುಕೊಂಡು ಅವರಿಗೆ ಶೋಷಣೆ ಮಾಡಿದ್ದಾನೆ ಎಂದು ಸಿಬಿ ಮೂಲಗಳು ತಿಳಿಸಿವೆ. ತನ್ನ ದುರ್ವರ್ತನೆ ವೇಳೆ ಆರೋಪಿ ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. ಆಕೆಯಿಂದ 5 ಲಕ್ಷ ರೂಪಾಯಿ ಹಾಗೂ 32 ಗ್ರಾಂ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಾರಾಯಣನಾಥ್ ತನ್ನ ಖಾಸಗಿ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಮಹಿಳೆ ದೌರ್ಜನ್ಯವನ್ನು ಸಹಿಸಿಕೊಂಡಿದ್ದರು. ಆದರೆ, ಆರೋಪಿ ಬೇರೆ ಮಹಿಳೆಯರೊಂದಿಗೆ ಸಂಪರ್ಕದಲ್ಲಿ ಇರುವುದು ತಿಳಿದಾಗ ಮಹಿಳೆ ಸಿಬಿಗೆ ದೂರು ನೀಡಿದ್ದರು.

ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...