Homeರಾಷ್ಟ್ರೀಯಅಪ್ರಾಪ್ತ ಮುಸ್ಲಿಂ ಹುಡುಗಿಯೊಂದಿಗಿನ ವಿವಾಹ ಕೂಡಾ ‘ಪೋಕ್ಸೋ’ ಅಡಿ ಅಪರಾಧ: ಕೇರಳ ಹೈಕೋರ್ಟ್

ಅಪ್ರಾಪ್ತ ಮುಸ್ಲಿಂ ಹುಡುಗಿಯೊಂದಿಗಿನ ವಿವಾಹ ಕೂಡಾ ‘ಪೋಕ್ಸೋ’ ಅಡಿ ಅಪರಾಧ: ಕೇರಳ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಸಮುದಾಯದ ಅಪ್ರಾಪ್ತ ವಯಸ್ಕರೊಂದಿಗಿನ ವಿವಾಹವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಲಾಗುವುದಿಲ್ಲ ಮತ್ತು ತನ್ನ ಅಪ್ರಾಪ್ತ ಹೆಂಡತಿಯೊಂದಿಗೆ ದೈಹಿಕ ಸಂಪರ್ಕ ಹೊಂದಿರುವ ಪತಿ ಈ ಕಾಯಿದೆಯ ಅಡಿಯಲ್ಲಿ ಹೊಣೆಗಾರನಾಗುತ್ತಾನೆ ಎಂದು ಕೇರಳ ಹೈಕೋರ್ಟ್ ಹೇಳಿದೆ.

ಪಶ್ಚಿಮ ಬಂಗಾಳದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ, ಕಕ್ಷಿದಾರರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ ಪೋಕ್ಸೋ ಅಡಿಯ ಅಪರಾಧಗಳು ಅನ್ವಯಿಸುತ್ತವೆ ಎಂದು ನ್ಯಾಯಮೂರ್ತಿ ಬಚು ಕುರಿಯನ್ ಥಾಮಸ್ ಅವರ ಏಕ ಪೀಠ ಶುಕ್ರವಾರ ತೀರ್ಪು ನೀಡಿದೆ. ಆರೋಪಿಯು ನಂತರ ಬಾಲಕಿಯನ್ನು ಮದುವೆಯಾಗಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಾಸಿಕ್ಯೂಷನ್ ಪ್ರಕಾರ, 31 ವರ್ಷದ ಆರೋಪಿಯು ಅಪ್ರಾಪ್ತೆಯನ್ನು ಅಪಹರಿಸಿ ಅವರೊಂದಿಗೆ ಹಲವಾರು ಬಾರಿ ಲೈಂಗಿಕ ಸಂಪರ್ಕದಲ್ಲಿ ಏರ್ಪಟ್ಟಿದ್ದನು. ನಂತರ ಆತ ಹುಡುಗಿಯನ್ನು ವಿವಾಹವಾಗಿದ್ದಾನೆ.

ತಾನು ಹುಡುಗಿಯನ್ನು ಕಾನೂನುಬದ್ಧವಾಗಿ ಮದುವೆಯಾಗಿದ್ದು, ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸಮುದಾಯದ ಹುಡುಗಿಯರು ಪ್ರೌಢಾವಸ್ಥೆಗೆ ಬಂದ ನಂತರ ಮದುವೆಗೆ ಅನುಮತಿ ನೀಡುತ್ತದೆ. ಹೀಗಾಗಿ ಪೋಕ್ಸೋ ಅಡಿಯಲ್ಲಿ ತನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಆರೋಪಿಯು ವಾದಿಸಿದ್ದನು.

ಇದನ್ನೂ ಓದಿ: ಪೋಕ್ಸೊ ವಿಚಾರಣೆ ಉದ್ದೇಶಪೂರ್ವಕ ತಪ್ಪಿಸಿದ್ದಕ್ಕೆ ದೀಪಕ್ ಚೌರಾಸಿಯಾ ವಿರುದ್ಧ ಬಂಧನದ ವಾರಂಟ್

ಆರೋಪಿ ಮಾರ್ಚ್ 2021 ರಲ್ಲಿ ಹುಡುಗಿಯನ್ನು ಮದುವೆಯಾಗಿದ್ದು, ತಮಗೆ ಅನ್ವಯವಾಗುವ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ಹುಡುಗಿಯು ತನ್ನ ಕಾನೂನು ಪಾಲುಗಾರ್ತಿಯನ್ನಾಗಿ ಮಾಡಿಕೊಂಡಿದ್ದಾಗಿ ವಾದಿಸಿದ್ದಾನೆ. ಹರ್ಯಾಣ, ದೆಹಲಿ ಮತ್ತು ಕರ್ನಾಟಕ ಹೈಕೋರ್ಟ್‌ಗಳ ಈ ಹಿಂದಿನ ತೀರ್ಪುಗಳನ್ನು ಆರೋಪಿ ತಮ್ಮ ಪ್ರತಿಪಾದನೆಯನ್ನು ಬಲಪಡಿಸಲು ಉಲ್ಲೇಖಿಸಿದ್ದಾನೆ. ಆದರೆ ನ್ಯಾಯಾಲಯವು ಈ ಪ್ರತಿಪಾದನೆಗಳನ್ನು ಒಪ್ಪಲು ನಿರಾಕರಿಸಿತು.

“ವಿವಾಹದ ಸಿಂಧುತ್ವವನ್ನು ಲೆಕ್ಕಿಸದೆ ಅಥವಾ ಇನ್ಯಾವುದೇ ರೀತಿಯಲ್ಲಿ ಕಕ್ಷಿದಾರರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ, ಪೋಕ್ಸೋ ಕಾಯ್ದೆಯಡಿ ಅಪರಾಧಗಳು ಅನ್ವಯವಾಗುತ್ತದೆ. ಉಲ್ಲೇಖಿಸಲಾದ ಇತರ ನ್ಯಾಯಾಲಯಗಳನ್ನು ಗೌರವಿಸುತ್ತಲೆ, ಅಪ್ರಾಪ್ತ ವಯಸ್ಕರನ್ನು ಮದುವೆಯಾಗುವ ಮುಸ್ಲಿಂ ವಿರುದ್ಧ ಪೋಕ್ಸೋ ಅಡಿಯ ಅಪರಾಧ ಆಗುವುದಿಲ್ಲ ಎಂಬ ಆ ನಿರ್ಧಾರಗಳಲ್ಲಿ ಸೂಚಿಸಲಾದ ಪ್ರತಿಪಾದನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಪೋಕ್ಸೋ ಕಾಯಿದೆಯು ವಿಶೇಷವಾದ ಕಾನೂನಾಗಿದೆ ಎಂದು ನ್ಯಾಯಾಲಯ ಹೇಳಿದೆ. ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಶಾಸ್ತ್ರದಿಂದ ಉದ್ಭವಿಸುವ ತತ್ವಗಳ ಆಧಾರದ ಮೇಲೆ ಈ ವಿಶೇಷ ಕಾನೂನನ್ನು ಜಾರಿಗೊಳಿಸಲಾಗಿದೆ. ಪೋಕ್ಸೋ ಕಾಯಿದೆಯ ಮೂಲಕ ಶಾಸಕಾಂಗದ ಉದ್ದೇಶ ಕೂಡಾ ಮದುವೆಯ ನೆಪದಲ್ಲಿ ಮಗುವಿನೊಂದಿಗೆ ದೈಹಿಕ ಸಂಬಂಧವನ್ನು ನಿಷೇಧಿಸುವುದಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

“ಬಾಲ್ಯ ವಿವಾಹವು ಮಗುವಿನ ಬೆಳವಣಿಗೆಗೆ ಸಂಪೂರ್ಣವಾಗಿ ತಡೆ ನೀಡುತ್ತದೆ. ಇದು ಸಮಾಜದ ಕೇಡು” ಎಂದು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯವು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...